ಆಂದೋಲನ ಪುರವಣಿ

ಯೋಗ ಕ್ಷೇಮ : ಥೈರಾಯ್ಡ್ ನಿಯಂತ್ರಣಕ್ಕೆ ಪರಿಹಾರ ನುಗ್ಗೆ ಸೊಪ್ಪು…!

ಆಧುನಿಕ ಜೀವನ ಶೈಲಿಯ ನೆಂಟ ಥೈರಾಯ್ಡ್ ಬಾಧೆ ಹಲವರನ್ನು ಕಾಡುತ್ತಿದ್ದು, ಮಾತ್ರೆಯನ್ನೇ ಅವಲಂಬಿಸುವಂತೆ ಮಾಡಿದೆ.

ಇದನ್ನು ನಿಯಂತ್ರಣದಲ್ಲಿಡಲು ನುಗ್ಗೆಸೊಪ್ಪು ಸಹಕಾರಿಯಾಗಿದ್ದು, ಸಾಕಷ್ಟು ರೋಗಗಳನ್ನು ಗುಣಪಡಿಸಬಹುದು ಎಂದು ಹೇಳಲಾಗುತ್ತದೆ. ಇದು ತಿನ್ನಲು ರುಚಿಕರ ಅಲ್ಲವೆಂದು ಕೆಲವರು ಮೂಗು ಮುರಿಯುವುದುಂಟು.
ಆದರೆ ಇದರ ಪ್ರಯೋಜನಗಳು ಹಲವು. ಒಂದು ಬಟ್ಟಲು ನುಗ್ಗೆ ಸೊಪ್ಪಿಗೆ ಒಂದೂವರೆ ಬಟ್ಟಲು ನೀರು ಹಾಕಿ ಚೆನ್ನಾಗಿ ಕುದಿಸಿ ಬಣ್ಣ ಬದಲಾದಾಗ ಸೋಸಿಕೊಳ್ಳಿ. ಅದಕ್ಕೆ ಸೈಂಧವ ಲವಣ ಸೇರಿಸಿ ನಂತರ ಸ್ವಲ್ಪ ಕರಿಮೆಣಸಿನ ಪುಡಿಯನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಈ ಕಷಾಯವನ್ನು ಕುಡಿಯುವುದರಿಂದ ಹಲವು ರೋಗಗಳಿಂದ ದೂರವಿರಬಹುದು.
ಹಾಲಿನಲ್ಲಿ ಸಿಗುವ ಕ್ಯಾಲ್ಸಿಯಂಗಿಂತ ನುಗ್ಗೆಸೊಪ್ಪಿನ ಕಷಾಯದಲ್ಲಿ 10 ಪಟ್ಟು ಹೆಚ್ಚು ಕ್ಯಾಲ್ಸಿಯಂ ಸಿಗುತ್ತದೆ. ಮೊಸರಿನಿಂದ ಸಿಗುವ ಪ್ರೊಟೀನ್‌ಗಿಂತ 8 ಪಟ್ಟು ಹೆಚ್ಚು ಪ್ರೋಟಿನ್ಸ್ ನುಗ್ಗೆಸೊಪ್ಪಿನ ರಸ ಕುಡಿಯುವುದರಿಂದ ಸಿಗುತ್ತದೆ.
ಬಾಳೆ ಹಣ್ಣು ತಿಂದಾಗ ಸಿಗುವ ಪೊಟ್ಯಾಷಿಯಂ ಗಿಂತ 15 ಪಟ್ಟು ಹೆಚ್ಚು ಪೊಟ್ಯಾಷಿಯಂ ಇದನ್ನು ಸೇವಿಸುವುದರಿಂದ ಪಡೆಯಬಹುದು.
ಅಧ್ಯಯನದ ಪ್ರಕಾರ ಈ ನುಗ್ಗೆಸೊಪ್ಪಿನ ರಸವನ್ನು ನಿರಂತರವಾಗಿ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ. ಶ್ವಾಸಕೋಶ ಮತ್ತು ಯಕೃತ್‌ಗೂ ಇದು ತುಂಬಾ ಒಳ್ಳೆಯದು.ಥೈರಾಯ್ಡ್ ನಿಯಂತ್ರಣದಲ್ಲಿ ಇಡುವ ಗುಣ ಈ ನುಗ್ಗೆಸೊಪ್ಪಿನ ರಸಕ್ಕಿದೆಯಂತೆ.

andolanait

Recent Posts

ಕಾವೇರಿ ಜಲವಿವಾದ: ಸೆ.15ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಸೆಪ್ಟೆಂಬರ್‌ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…

3 hours ago

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…

4 hours ago

ಎಚ್.ಡಿ.ಕೋಟೆ: ಸಾರ್ವಜನಿಕರಿಗೆ ಆತಂಕ ಮೂಡಿಸಿದ್ದ ಹುಲಿ ಸೆರೆ

ಎಚ್.ಡಿ. ಕೋಟೆ: ತಾಲೂಕಿನ ಹೊಸ ಹುಳಲು ಗ್ರಾಮದಲ್ಲಿ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ.…

4 hours ago

ರಾಜಕೀಯ ಮೇಲಾಟ ನಿಲ್ಲಲಿ; ಸಾಮಾನ್ಯರ ವಿಷಯ ಚರ್ಚೆಯಾಗಲಿ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಕೇಂದ್ರ ಬಿಂದುವಾಗಿದ್ದು,…

9 hours ago

ಪ್ರೇಮವೂ ಬಂಡಾಯದ ದನಿಯೇ – ಅಮೃತಾ ಪ್ರೀತಮ್

ರೇಣುಕಾ ನಿಡಗುಂದಿ ಮತ್ತೆ ಸಿಗುವೆ.. ಆದರೆ ಎಲ್ಲಿ? ಹೇಗೆ ನನಗೂ ತಿಳಿಯದು, ಈ ನಶ್ವರ ಲೋಕದ ಹಂಗು ಆತ್ಮಕ್ಕಿಲ್ಲ ನಾ…

9 hours ago

ನೀರಸವಾಯಿತು ರಾಜ್ಯ ವಿಧಾನಮಂಡಲ ಅಧಿವೇಶನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಈ ಬಾರಿಯ ರಾಜ್ಯ ವಿಧಾನಮಂಡಲ ಅಧಿವೇಶನ ನಾಡಿನ ಜನರಿಗೆ ರವಾನಿಸಿರುವ ಸಂದೇಶ ಏನು? ಇಂತಹದೊಂದು…

9 hours ago