ಆಂದೋಲನ ಪುರವಣಿ

ಯೋಗ ಕ್ಷೇಮ : ವೀರ್ಯ ಸ್ಖಲನದ ಬಗ್ಗೆ ತಪ್ಪು ತಿಳುವಳಿಕೆ ಬೇಡ

ವೀರ್ಯವು ಲೈಂಗಿಕಾಂಗಗಳಿಂದ ಹೊರಚೆಲ್ಲಲ್ಪಡುತ್ತದೆ. ಈ ವೇಳೆ ಸ್ನಾಯುಗಳು ವಿಕಸನ, ಸಂಕುಚಿತ ಕ್ರಿಯೆಗೆ ಒಳಪಟ್ಟು ಶಕ್ತಿಯು ವ್ಯಯವಾಗುತ್ತದೆ. ಈ ವೇಳೆ ಸೊಂಟದ ಸುತ್ತಲೂ ನಿಶ್ಯಕ್ತಿಯ ಅನುಭವ ಆಗುವುದು ಸ್ವಾಭಾವಿಕ. ಇದು ವೀರ್ಯನಾಶದಿಂದ ಆಗುತ್ತಿದೆ ಎಂದು ತಿಳಿಯುವುದು ಮೂಢನಂಬಿಕೆ. ಕೆಲವರಲ್ಲಿ ಕೆಲವೊಮ್ಮೆ ಮೂತ್ರ ವಿಸರ್ಜನೆ ಸಮಯದಲ್ಲೇ ಅಥವಾ ಕೊನೆಯಲ್ಲಿ ಮಜ್ಜಿಗೆ ಬಣ್ಣದಂಥ ಮೂತ್ರ ಅಥವಾ ಲೋಳೆಯಂತಹ ವಿಸರ್ಜನೆಯಾಗಬಹುದು. ಆಗ ಮೂತ್ರದೊಂದಿಗೆ ವೀರ್ಯ ವಿಸರ್ಜನೆಯಾಗುತ್ತಿದೆ ಎಂದು ಬಹಳಷ್ಟು ಮಂದಿ ತಪ್ಪು ತಿಳಿದುಕೊಂಡಿರುತ್ತಾರೆ. ಲೈಂಗಿಕಾಂಗಳಲ್ಲಿರುವ ಯುರೇತ್ರಲ್ ಮತ್ತು ಪ್ರಾನ್ಟೇಟ್ ಗ್ರಂಥಿಗಳು ಸ್ರವಿಸುವ ರಸರಗಳು ಒಮ್ಮೊಮ್ಮೆ ಮೂತ್ರದ ಜೊತೆಗೆ ಬೆರಕೆಯಾವುದೇ ಮಜ್ಜಿಗೆ ಬಣ್ಣದ ಮೂತ್ರ ವಿಸರ್ಜನೆಗೆ ಕಾರಣ. ಹಾಗಾಗಿ ಯುವಕರು ಮೂತ್ರದ ಬಣ್ಣದ ವ್ಯತ್ಯಾಸಕ್ಕೂ ವೀರ್ಯನಾಶಕ್ಕೂ ಸಂಬಂಧವಿದೆ ಎಂದುಕೊಳ್ಳಬಾರದು.

ಲೈಂಗಿಕ ಕ್ರಿಯೆಯ ಸಮಯದಲ್ಲಿ ಹೊರ ಚೆಲ್ಲುವ ವೀರ್ಯದ ಬಣ್ಣ, ಪ್ರಮಾಣ, ಸಾಂದ್ರತೆಯು ಲೈಂಗಿಕ ಪ್ರಚೋದನೆಯ ತೀವ್ರತೆ, ವಯಸ್ಸು, ಹಾರ್ಮೋನ್‌ಗಳ ಮಟ್ಟ, ಸಂಗಾತಿಯೊಡನೆ ಇರುವ ಸಾಮರಸ್ಯ ಮತ್ತು ಪುರುಷನ ಆರೋಗ್ಯವನ್ನು ಅವಲಂಬಿಸಿರುತ್ತದೆ. ವಯಸ್ಸಾದಂತೆ ವೀರ್ಯದ ಬಣ್ಣವು ತಿಳಿ ಹಳದಿ ಬಣ್ಣಕ್ಕೆ ತಿರುಗಬಹುದು. ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಕಾಯಿಲೆ ನಿಮಿತ್ತ ಹಾಗೂ ವಯಸ್ಸು ಹೆಚ್ಚಾದಂತೆ ವೀರ್ಯದ ಪ್ರಮಾಣವೂ ಕಡಿಮೆಯಾಗಬಹುದು. ಯುವಕರಲ್ಲಿ ವೀರ್ಯ ಸ್ಖಲನ, ವೀರ್ಯದ ಪ್ರಮಾಣದಲ್ಲಿ ವ್ಯತ್ಯಾಸವಾದರೆ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ. ಮದುವೆಯಾಗಿ ಮಕ್ಕಳಾಗಿದ್ದರೆ ಇದರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ.

andolanait

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

14 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago