ಆಂದೋಲನ ಪುರವಣಿ

ಯೋಗ ಕ್ಷೇಮ : ವೀರ್ಯ ಸ್ಖಲನದ ಬಗ್ಗೆ ತಪ್ಪು ತಿಳುವಳಿಕೆ ಬೇಡ

ವೀರ್ಯವು ಲೈಂಗಿಕಾಂಗಗಳಿಂದ ಹೊರಚೆಲ್ಲಲ್ಪಡುತ್ತದೆ. ಈ ವೇಳೆ ಸ್ನಾಯುಗಳು ವಿಕಸನ, ಸಂಕುಚಿತ ಕ್ರಿಯೆಗೆ ಒಳಪಟ್ಟು ಶಕ್ತಿಯು ವ್ಯಯವಾಗುತ್ತದೆ. ಈ ವೇಳೆ ಸೊಂಟದ ಸುತ್ತಲೂ ನಿಶ್ಯಕ್ತಿಯ ಅನುಭವ ಆಗುವುದು ಸ್ವಾಭಾವಿಕ. ಇದು ವೀರ್ಯನಾಶದಿಂದ ಆಗುತ್ತಿದೆ ಎಂದು ತಿಳಿಯುವುದು ಮೂಢನಂಬಿಕೆ. ಕೆಲವರಲ್ಲಿ ಕೆಲವೊಮ್ಮೆ ಮೂತ್ರ ವಿಸರ್ಜನೆ ಸಮಯದಲ್ಲೇ ಅಥವಾ ಕೊನೆಯಲ್ಲಿ ಮಜ್ಜಿಗೆ ಬಣ್ಣದಂಥ ಮೂತ್ರ ಅಥವಾ ಲೋಳೆಯಂತಹ ವಿಸರ್ಜನೆಯಾಗಬಹುದು. ಆಗ ಮೂತ್ರದೊಂದಿಗೆ ವೀರ್ಯ ವಿಸರ್ಜನೆಯಾಗುತ್ತಿದೆ ಎಂದು ಬಹಳಷ್ಟು ಮಂದಿ ತಪ್ಪು ತಿಳಿದುಕೊಂಡಿರುತ್ತಾರೆ. ಲೈಂಗಿಕಾಂಗಳಲ್ಲಿರುವ ಯುರೇತ್ರಲ್ ಮತ್ತು ಪ್ರಾನ್ಟೇಟ್ ಗ್ರಂಥಿಗಳು ಸ್ರವಿಸುವ ರಸರಗಳು ಒಮ್ಮೊಮ್ಮೆ ಮೂತ್ರದ ಜೊತೆಗೆ ಬೆರಕೆಯಾವುದೇ ಮಜ್ಜಿಗೆ ಬಣ್ಣದ ಮೂತ್ರ ವಿಸರ್ಜನೆಗೆ ಕಾರಣ. ಹಾಗಾಗಿ ಯುವಕರು ಮೂತ್ರದ ಬಣ್ಣದ ವ್ಯತ್ಯಾಸಕ್ಕೂ ವೀರ್ಯನಾಶಕ್ಕೂ ಸಂಬಂಧವಿದೆ ಎಂದುಕೊಳ್ಳಬಾರದು.

ಲೈಂಗಿಕ ಕ್ರಿಯೆಯ ಸಮಯದಲ್ಲಿ ಹೊರ ಚೆಲ್ಲುವ ವೀರ್ಯದ ಬಣ್ಣ, ಪ್ರಮಾಣ, ಸಾಂದ್ರತೆಯು ಲೈಂಗಿಕ ಪ್ರಚೋದನೆಯ ತೀವ್ರತೆ, ವಯಸ್ಸು, ಹಾರ್ಮೋನ್‌ಗಳ ಮಟ್ಟ, ಸಂಗಾತಿಯೊಡನೆ ಇರುವ ಸಾಮರಸ್ಯ ಮತ್ತು ಪುರುಷನ ಆರೋಗ್ಯವನ್ನು ಅವಲಂಬಿಸಿರುತ್ತದೆ. ವಯಸ್ಸಾದಂತೆ ವೀರ್ಯದ ಬಣ್ಣವು ತಿಳಿ ಹಳದಿ ಬಣ್ಣಕ್ಕೆ ತಿರುಗಬಹುದು. ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಕಾಯಿಲೆ ನಿಮಿತ್ತ ಹಾಗೂ ವಯಸ್ಸು ಹೆಚ್ಚಾದಂತೆ ವೀರ್ಯದ ಪ್ರಮಾಣವೂ ಕಡಿಮೆಯಾಗಬಹುದು. ಯುವಕರಲ್ಲಿ ವೀರ್ಯ ಸ್ಖಲನ, ವೀರ್ಯದ ಪ್ರಮಾಣದಲ್ಲಿ ವ್ಯತ್ಯಾಸವಾದರೆ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ. ಮದುವೆಯಾಗಿ ಮಕ್ಕಳಾಗಿದ್ದರೆ ಇದರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ.

andolanait

Recent Posts

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

20 mins ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

49 mins ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

1 hour ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

2 hours ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…

2 hours ago