ವೀರ್ಯವು ಲೈಂಗಿಕಾಂಗಗಳಿಂದ ಹೊರಚೆಲ್ಲಲ್ಪಡುತ್ತದೆ. ಈ ವೇಳೆ ಸ್ನಾಯುಗಳು ವಿಕಸನ, ಸಂಕುಚಿತ ಕ್ರಿಯೆಗೆ ಒಳಪಟ್ಟು ಶಕ್ತಿಯು ವ್ಯಯವಾಗುತ್ತದೆ. ಈ ವೇಳೆ ಸೊಂಟದ ಸುತ್ತಲೂ ನಿಶ್ಯಕ್ತಿಯ ಅನುಭವ ಆಗುವುದು ಸ್ವಾಭಾವಿಕ. ಇದು ವೀರ್ಯನಾಶದಿಂದ ಆಗುತ್ತಿದೆ ಎಂದು ತಿಳಿಯುವುದು ಮೂಢನಂಬಿಕೆ. ಕೆಲವರಲ್ಲಿ ಕೆಲವೊಮ್ಮೆ ಮೂತ್ರ ವಿಸರ್ಜನೆ ಸಮಯದಲ್ಲೇ ಅಥವಾ ಕೊನೆಯಲ್ಲಿ ಮಜ್ಜಿಗೆ ಬಣ್ಣದಂಥ ಮೂತ್ರ ಅಥವಾ ಲೋಳೆಯಂತಹ ವಿಸರ್ಜನೆಯಾಗಬಹುದು. ಆಗ ಮೂತ್ರದೊಂದಿಗೆ ವೀರ್ಯ ವಿಸರ್ಜನೆಯಾಗುತ್ತಿದೆ ಎಂದು ಬಹಳಷ್ಟು ಮಂದಿ ತಪ್ಪು ತಿಳಿದುಕೊಂಡಿರುತ್ತಾರೆ. ಲೈಂಗಿಕಾಂಗಳಲ್ಲಿರುವ ಯುರೇತ್ರಲ್ ಮತ್ತು ಪ್ರಾನ್ಟೇಟ್ ಗ್ರಂಥಿಗಳು ಸ್ರವಿಸುವ ರಸರಗಳು ಒಮ್ಮೊಮ್ಮೆ ಮೂತ್ರದ ಜೊತೆಗೆ ಬೆರಕೆಯಾವುದೇ ಮಜ್ಜಿಗೆ ಬಣ್ಣದ ಮೂತ್ರ ವಿಸರ್ಜನೆಗೆ ಕಾರಣ. ಹಾಗಾಗಿ ಯುವಕರು ಮೂತ್ರದ ಬಣ್ಣದ ವ್ಯತ್ಯಾಸಕ್ಕೂ ವೀರ್ಯನಾಶಕ್ಕೂ ಸಂಬಂಧವಿದೆ ಎಂದುಕೊಳ್ಳಬಾರದು.
ಲೈಂಗಿಕ ಕ್ರಿಯೆಯ ಸಮಯದಲ್ಲಿ ಹೊರ ಚೆಲ್ಲುವ ವೀರ್ಯದ ಬಣ್ಣ, ಪ್ರಮಾಣ, ಸಾಂದ್ರತೆಯು ಲೈಂಗಿಕ ಪ್ರಚೋದನೆಯ ತೀವ್ರತೆ, ವಯಸ್ಸು, ಹಾರ್ಮೋನ್ಗಳ ಮಟ್ಟ, ಸಂಗಾತಿಯೊಡನೆ ಇರುವ ಸಾಮರಸ್ಯ ಮತ್ತು ಪುರುಷನ ಆರೋಗ್ಯವನ್ನು ಅವಲಂಬಿಸಿರುತ್ತದೆ. ವಯಸ್ಸಾದಂತೆ ವೀರ್ಯದ ಬಣ್ಣವು ತಿಳಿ ಹಳದಿ ಬಣ್ಣಕ್ಕೆ ತಿರುಗಬಹುದು. ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಕಾಯಿಲೆ ನಿಮಿತ್ತ ಹಾಗೂ ವಯಸ್ಸು ಹೆಚ್ಚಾದಂತೆ ವೀರ್ಯದ ಪ್ರಮಾಣವೂ ಕಡಿಮೆಯಾಗಬಹುದು. ಯುವಕರಲ್ಲಿ ವೀರ್ಯ ಸ್ಖಲನ, ವೀರ್ಯದ ಪ್ರಮಾಣದಲ್ಲಿ ವ್ಯತ್ಯಾಸವಾದರೆ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ. ಮದುವೆಯಾಗಿ ಮಕ್ಕಳಾಗಿದ್ದರೆ ಇದರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ.
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ…
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…
ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…