ಆಂದೋಲನ ಪುರವಣಿ

ಯೋಗ ಕ್ಷೇಮ : ಜನನೇಂದ್ರಿಯದ ಸಂರಚನೆ

ಡಾ. ಬಿ.ಡಿ. ಸತ್ಯನಾರಾಯಣ.
ಚರ್ಮ ಮತ್ತುಲೈಂಗಿಕ ರೋಗಗಳ ತಜ್ಞರು ಮೈಸೂರು
ಭಾರತದಂತಹ ದೇಶಗಳಲ್ಲಿ ಇಂದಿಗೂ ಲೈಂಗಿಕ ಶಿಕ್ಷಣ ಮುಕ್ತವಾಗಿ ದೊರೆಯುತ್ತಿಲ್ಲ. ಅಂಜಿಕೆ, ನಾಚಿಕೆ, ಕಟ್ಟುಪಾಡುಗಳಿಗೆ ಸಿಲುಕಿ ಹಲವಾರು ಮಂದಿ ಲೈಂಗಿಕ ಸಮಸ್ಯೆಗಳಿಗೆ ತುತ್ತಾಗುತ್ತಿರುವುದು ಸಾಮಾನ್ಯವಾಗಿದೆ. ಇದೇ ವೇಳೆ ಈಗೀಗ ಲೈಂಗಿಕ ಶಿಕ್ಷಣಕ್ಕೆ ತಕ್ಕಮಟ್ಟಿಗಿನ ಬೆಂಬಲ ಸಿಕ್ಕುತ್ತಿರುವುದು ಸಂತೋಷದ ವಿಚಾರ. ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಪ್ರತಿ ವಾರ ‘ಯೋಗಕ್ಷೇಮ’ ವಿಶೇಷ ಪುಟದಲ್ಲಿ ಲೈಂಗಿಕ ತಿಳವಳಿಕೆಯನ್ನು ಮೈಸೂರಿನ ಚರ್ಮ ಮತ್ತು ಲೈಂಗಿಕ ರೋಗಗಳ ತಜ್ಞರಾದ ಡಾ. ಬಿ.ಡಿ. ಸತ್ಯನಾರಾಯಣ ಅವರು ನೀಡಲಿದ್ದಾರೆ.
ಗಂಡು-ಹೆಣ್ಣಿನ ಪರಸ್ಪರ ಆಕರ್ಷಣೆ ಪ್ರಕೃತಿದತ್ತ ನಿಯಮ. ಬಾಲ್ಯಾವಸ್ಥೆಯಲ್ಲಿಯೇ ಈ ಆಕರ್ಷಣೆ ಶುರುವಾಗುತ್ತದೆ. ನಂತರ ಪ್ರಾಯದ ಹಂತ ತಲುಪುತ್ತಿದ್ದಂತೆ ಮಾನಸಿಕವಾಗಿ, ದೈಹಿಕವಾಗಿ ಲೈಂಗಿಕ ಅರಿವು ಹೆಚ್ಚಾಗುತ್ತದೆ. ಈ ರೀತಿಯ ಅರಿವಿನ ಹಂತದಲ್ಲಿ ಹಾರ್ಮೋನ್‌ಗಳ ಉತ್ಪಾದನೆ, ಜನನೇಂದ್ರಿಯಗಳ ಬಗೆಗಿನ ತಿಳವಳಿಕೆ ಮಹತ್ವಪೂರ್ಣವಾದದ್ದು.
ಮೂತ್ರನಾಳ (ಯುರೇತ್ರ), ಶಿಶ್ನ (ಪೆನ್ನಿಸ್), ಪ್ರಾಸ್ಟೇಟ್, ವೃಷಣ, ವೀರ್ಯನಾಳ (ಎಪಿಡೈಡಿಮಿಸ್), ವೀರ್ಯ ಕೋಶಗಳು (ಸಮೈನಲ್ ವೆಸಿಕಲ್ಸ್) ಪುರುಷ ಜನನೇಂದ್ರಿಯದ ಮುಖ್ಯ ಅಂಶಗಳು. ಮೂತ್ರ ನಾಳವು ಮೂತ್ರ ಕೋಶದಿಂದ ಪ್ರಾರಂಭವಾಗಿ ಸುಮಾರು ೨೦ ಸೆ.ಮೀ. ಉದ್ದವಿರುತ್ತದೆ. ಪ್ರಾಸ್ಟೇಸ್ ಗ್ರಂಥಿಯು ಮೂತ್ರ ಕೋಶದ ಕೆಳ ಭಾಗದಲ್ಲಿದ್ದು, ಇದರ ಮೂಲಕ ಮೂತ್ರನಾಳವು ಹಾಯ್ದು ಹೋಗುತ್ತದೆ. ಪ್ರಾಸ್ಟೇಟ್ ಗ್ರಂಥಿಯ ಹಿಂಭಾಗದ ಮೇಲುಗಡೆ ವೀರ್ಯ ಕೋಶಗಳಿದ್ದು, ವೃಷಣಗ ಳಿಂದ ಉತ್ಪತ್ತಿಯಾದ ವೀರ್ಯ ವೀರ್ಯನಾಳಗಳ ಮೂಲಕ ಹರಿದು ವೀರ್ಯಕೋಶಗಳಲ್ಲಿ ಶೇಖರವಾಗುತ್ತದೆ.  ಜನನಾಂಗವು ಸ್ನಾಯುಗಳು, ರಕ್ತ ನಾಳಗಳು ಮತ್ತು ನರ ತಂತುಗಳಿಂದ ಸುತ್ತುವರಿದಿರುತ್ತದೆ. ಇದನ್ನು ಶಿಶ್ನ ಎಂದೂ ಕರೆಯಲಾಗುತ್ತದೆ. ಇದರ ಮೇಲು ಭಾಗವನ್ನು ಕಾಂಡವೆಂದು, ತುದಿಯಲ್ಲಿ ಅಡಿಕೆಯ ಉಂಡೆಯಂತೆ ಕಾಣವು ಭಾಗವನ್ನು ಗ್ಲ್ಯಾನ್ಸ್ ಪೆನ್ನಿಸ್ (ಬಳ್ಳಿ) ಎಂದು ಕರೆಯುತ್ತೇವೆ.
ಪುರುಷತ್ವದ ಹಾರ್ಮೋನ್ ಮತ್ತು ವೀರ್ಯಾಣುವನ್ನು ಉತ್ಪಾದಿಸುವ ಎರಡು ವೃಷಣಗಳು ಶಿಶ್ನದ ತಳಭಾಗದಲ್ಲಿ ಚರ್ಮದಿಂದ ಆವೃತ್ತವಾದ ವೃಷಣದ ಚೀಲದಲ್ಲಿ ಸಂರಕ್ಷಿಸಲ್ಪಟ್ಟಿರುತ್ತವೆ. ವೀರ್ಯ ಮತ್ತು ಮೂತ್ರವು ಒಂದೇ ನಾಳದಿಂದ ಬೇರೆ ಬೇರೆ ಸಮಯದಲ್ಲಿ ಹೊರ ಬರುತ್ತವೆ. ಇವೆಲ್ಲವೂ ನಮ್ಮ ದೈಹಿಕ ಬದಲಾವಣೆ, ಹಾರ್ಮೋನುಗಳ ಉತ್ಪತ್ತಿಯಿಂದ ಒಂದು ಹಂತದ ವರೆಗೆ ನಿರಂತರವಾಗಿ ನಡೆಯುತ್ತಿರುತ್ತವೆ.
andolanait

Recent Posts

ನಾಳೆ ರಾಜ್ಯಪಾಲರ ಭೇಟಿಗೆ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…

17 mins ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್:‌ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್‌ ರಿಪೋರ್ಟ್‌ನಲ್ಲಿ ನೆಗೆಟಿವ್‌ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್‌…

26 mins ago

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ?

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…

2 hours ago

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

3 hours ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

4 hours ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

7 hours ago