ಆಂದೋಲನ ಪುರವಣಿ

ಯೋಗ ಕ್ಷೇಮ : ಜನನೇಂದ್ರಿಯದ ಸಂರಚನೆ

ಡಾ. ಬಿ.ಡಿ. ಸತ್ಯನಾರಾಯಣ.
ಚರ್ಮ ಮತ್ತುಲೈಂಗಿಕ ರೋಗಗಳ ತಜ್ಞರು ಮೈಸೂರು
ಭಾರತದಂತಹ ದೇಶಗಳಲ್ಲಿ ಇಂದಿಗೂ ಲೈಂಗಿಕ ಶಿಕ್ಷಣ ಮುಕ್ತವಾಗಿ ದೊರೆಯುತ್ತಿಲ್ಲ. ಅಂಜಿಕೆ, ನಾಚಿಕೆ, ಕಟ್ಟುಪಾಡುಗಳಿಗೆ ಸಿಲುಕಿ ಹಲವಾರು ಮಂದಿ ಲೈಂಗಿಕ ಸಮಸ್ಯೆಗಳಿಗೆ ತುತ್ತಾಗುತ್ತಿರುವುದು ಸಾಮಾನ್ಯವಾಗಿದೆ. ಇದೇ ವೇಳೆ ಈಗೀಗ ಲೈಂಗಿಕ ಶಿಕ್ಷಣಕ್ಕೆ ತಕ್ಕಮಟ್ಟಿಗಿನ ಬೆಂಬಲ ಸಿಕ್ಕುತ್ತಿರುವುದು ಸಂತೋಷದ ವಿಚಾರ. ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಪ್ರತಿ ವಾರ ‘ಯೋಗಕ್ಷೇಮ’ ವಿಶೇಷ ಪುಟದಲ್ಲಿ ಲೈಂಗಿಕ ತಿಳವಳಿಕೆಯನ್ನು ಮೈಸೂರಿನ ಚರ್ಮ ಮತ್ತು ಲೈಂಗಿಕ ರೋಗಗಳ ತಜ್ಞರಾದ ಡಾ. ಬಿ.ಡಿ. ಸತ್ಯನಾರಾಯಣ ಅವರು ನೀಡಲಿದ್ದಾರೆ.
ಗಂಡು-ಹೆಣ್ಣಿನ ಪರಸ್ಪರ ಆಕರ್ಷಣೆ ಪ್ರಕೃತಿದತ್ತ ನಿಯಮ. ಬಾಲ್ಯಾವಸ್ಥೆಯಲ್ಲಿಯೇ ಈ ಆಕರ್ಷಣೆ ಶುರುವಾಗುತ್ತದೆ. ನಂತರ ಪ್ರಾಯದ ಹಂತ ತಲುಪುತ್ತಿದ್ದಂತೆ ಮಾನಸಿಕವಾಗಿ, ದೈಹಿಕವಾಗಿ ಲೈಂಗಿಕ ಅರಿವು ಹೆಚ್ಚಾಗುತ್ತದೆ. ಈ ರೀತಿಯ ಅರಿವಿನ ಹಂತದಲ್ಲಿ ಹಾರ್ಮೋನ್‌ಗಳ ಉತ್ಪಾದನೆ, ಜನನೇಂದ್ರಿಯಗಳ ಬಗೆಗಿನ ತಿಳವಳಿಕೆ ಮಹತ್ವಪೂರ್ಣವಾದದ್ದು.
ಮೂತ್ರನಾಳ (ಯುರೇತ್ರ), ಶಿಶ್ನ (ಪೆನ್ನಿಸ್), ಪ್ರಾಸ್ಟೇಟ್, ವೃಷಣ, ವೀರ್ಯನಾಳ (ಎಪಿಡೈಡಿಮಿಸ್), ವೀರ್ಯ ಕೋಶಗಳು (ಸಮೈನಲ್ ವೆಸಿಕಲ್ಸ್) ಪುರುಷ ಜನನೇಂದ್ರಿಯದ ಮುಖ್ಯ ಅಂಶಗಳು. ಮೂತ್ರ ನಾಳವು ಮೂತ್ರ ಕೋಶದಿಂದ ಪ್ರಾರಂಭವಾಗಿ ಸುಮಾರು ೨೦ ಸೆ.ಮೀ. ಉದ್ದವಿರುತ್ತದೆ. ಪ್ರಾಸ್ಟೇಸ್ ಗ್ರಂಥಿಯು ಮೂತ್ರ ಕೋಶದ ಕೆಳ ಭಾಗದಲ್ಲಿದ್ದು, ಇದರ ಮೂಲಕ ಮೂತ್ರನಾಳವು ಹಾಯ್ದು ಹೋಗುತ್ತದೆ. ಪ್ರಾಸ್ಟೇಟ್ ಗ್ರಂಥಿಯ ಹಿಂಭಾಗದ ಮೇಲುಗಡೆ ವೀರ್ಯ ಕೋಶಗಳಿದ್ದು, ವೃಷಣಗ ಳಿಂದ ಉತ್ಪತ್ತಿಯಾದ ವೀರ್ಯ ವೀರ್ಯನಾಳಗಳ ಮೂಲಕ ಹರಿದು ವೀರ್ಯಕೋಶಗಳಲ್ಲಿ ಶೇಖರವಾಗುತ್ತದೆ.  ಜನನಾಂಗವು ಸ್ನಾಯುಗಳು, ರಕ್ತ ನಾಳಗಳು ಮತ್ತು ನರ ತಂತುಗಳಿಂದ ಸುತ್ತುವರಿದಿರುತ್ತದೆ. ಇದನ್ನು ಶಿಶ್ನ ಎಂದೂ ಕರೆಯಲಾಗುತ್ತದೆ. ಇದರ ಮೇಲು ಭಾಗವನ್ನು ಕಾಂಡವೆಂದು, ತುದಿಯಲ್ಲಿ ಅಡಿಕೆಯ ಉಂಡೆಯಂತೆ ಕಾಣವು ಭಾಗವನ್ನು ಗ್ಲ್ಯಾನ್ಸ್ ಪೆನ್ನಿಸ್ (ಬಳ್ಳಿ) ಎಂದು ಕರೆಯುತ್ತೇವೆ.
ಪುರುಷತ್ವದ ಹಾರ್ಮೋನ್ ಮತ್ತು ವೀರ್ಯಾಣುವನ್ನು ಉತ್ಪಾದಿಸುವ ಎರಡು ವೃಷಣಗಳು ಶಿಶ್ನದ ತಳಭಾಗದಲ್ಲಿ ಚರ್ಮದಿಂದ ಆವೃತ್ತವಾದ ವೃಷಣದ ಚೀಲದಲ್ಲಿ ಸಂರಕ್ಷಿಸಲ್ಪಟ್ಟಿರುತ್ತವೆ. ವೀರ್ಯ ಮತ್ತು ಮೂತ್ರವು ಒಂದೇ ನಾಳದಿಂದ ಬೇರೆ ಬೇರೆ ಸಮಯದಲ್ಲಿ ಹೊರ ಬರುತ್ತವೆ. ಇವೆಲ್ಲವೂ ನಮ್ಮ ದೈಹಿಕ ಬದಲಾವಣೆ, ಹಾರ್ಮೋನುಗಳ ಉತ್ಪತ್ತಿಯಿಂದ ಒಂದು ಹಂತದ ವರೆಗೆ ನಿರಂತರವಾಗಿ ನಡೆಯುತ್ತಿರುತ್ತವೆ.
andolanait

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

9 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

22 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

24 hours ago