ಆಂದೋಲನ ಪುರವಣಿ

ಯೋಗ ಕ್ಷೇಮ : ವರ್ಷದಿಂದ ವರ್ಷಕ್ಕೆ ಇಳಿಯುತ್ತಿದೆ ಸೋಂಕಿನ ಪ್ರಮಾಣ

ಯುವಜನರಿಗೆ ಎಚ್‌ಐವಿ ಬಗ್ಗೆ ಅರಿವು, ಸುರಕ್ಷಿತ ಲೈಂಗಿಕತೆ ಕುರಿತು ವಿಶೇಷ ಕಾರ್ಯಕ್ರಮಗಳನ್ನು ರೂಪಿಸುತ್ತಿರುವ ಪರಿಣಾಮ ಮೈಸೂರು ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿನ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಿವೆ. ಎರಡು-ಮೂರು ವರ್ಷಗಳಲ್ಲಿ ಪ್ರಕರಣಗಳ ಸಂಖ್ಯೆ ಇನ್ನೂ ಕಡಿಮೆಯಾಗಲಿದೆ.

ಹತ್ತು ವರ್ಷಗಳ ಸರಾಸರಿ ಪ್ರಮಾಣ ನೋಡಿದರೆ ಸೋಂಕು ಪ್ರಕರಣಗಳು ೫೦೦ರ ಒಳಗೆ ಬಂದಿರುವುದು ಸಂತಸದ ಸಮಾಚಾರ. ಬೆಳಗಾವಿ, ಧಾರವಾಡ, ವಿಜಯಪುರ, ಚಿತ್ರದುರ್ಗ, ರಾಯಚೂರು, ಗುಲ್ಬರ್ಗಾ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಅತಿ ಹೆಚ್ಚು ಎಚ್‌ಐವಿ ಫ್ರಿವೆಲೆನ್ಸ್ ಗಳಿದ್ದು, ಮೈಸೂರಿನಲ್ಲಿ ಸೋಂಕಿತರ ಪ್ರಮಾಣ ತುಂಬಾ ಕಡಿಮೆ ಇದೆ. ಜಿಲ್ಲೆಯಲ್ಲಿ ೨೦೨೦-೨೧ನೇ ಸಾಲಿನಲ್ಲಿ ೯೧,೯೫೩ ಸಾಮಾನ್ಯ ಜನರನ್ನು ಎಚ್‌ಐವಿ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ ೫೨೧ ಮಂದಿಯಲ್ಲಿ ಸೋಂಕು ಪತ್ತೆಯಾಗಿತ್ತು. ಇದೇ ವೇಳೆ ೪೫,೬೩೬ ಗರ್ಭಿಣಿಯರನ್ನು ಪರೀಕ್ಷಿಸಿದ್ದು, ಅದರಲ್ಲಿ ೨೦ ಮಂದಿಗೆ ಸೋಂಕು ಇರುವುದು ದೃಢವಾಗಿತ್ತು.

೨೦೨೧-೨೨ನೇ ಸಾಲಿನಲ್ಲಿ ೧,೩೧,೯೬೪ ಸಾಮಾನ್ಯ ಜನರನ್ನು ಪರೀಕ್ಷಿಸಿದ್ದು, ಅದರಲ್ಲಿ ೭೨೨ ಮಂದಿಗೆ, ೫೦,೧೦೩ ಗರ್ಭಿಣಿಯರಲ್ಲಿ ೨೪ಮಂದಿಗೆ ಸೋಂಕು ಇರುವುದು ಪತ್ತೆಯಾಗಿತ್ತು.  ೨೦೨೨-೨೩ನೇ ಸಾಲಿನ ಈತನಕ ೧,೩೮,೬೭೬ ಮಂದಿಯನ್ನು ತಪಾಸಣೆ ಮಾಡಿದ್ದು, ೪೫೩ ಮಂದಿಗೆ ಸೋಂಕು ಇರುವುದು ದೃಢವಾಗಿದೆ.

ಮಕ್ಕಳಲ್ಲಿ ಪತ್ತೆಯಾಗದ ಸೋಂಕು

ಮೈಸೂರಿನಲ್ಲಿ ಎಲ್ಲ ಐಸಿಟಿಸಿ ಕೇಂದ್ರಗಳಲ್ಲಿಯೂ ಡಿಎನ್‌ಎ, ಪಿಸಿಆರ್ ಪರೀಕ್ಷಾ ಕೇಂದ್ರಗಳಿದ್ದು, ಇಲ್ಲಿ ಮಾರ್ಚ್ ೨೦೧೦ರಿಂದ ೨೦೨೨ ಅಕ್ಟೋಬರ್ ತನಕ ಎಚ್‌ಐವಿ ಸೋಂಕಿತ ತಾಯಂದಿರಿಗೆ ಹುಟ್ಟಿದ ಮಕ್ಕಳಲ್ಲಿ ೪೭ ಮಕ್ಕಳಿಗೆ ಸೋಂಕು ತಗುಲಿರುವುದು ಕಂಡುಬಂದಿತ್ತು. ೨೦೨೨-೨೩ರಲ್ಲಿ ಒಟ್ಟು ಮಕ್ಕಳಿಗೆ ೧೧೪ ಮಕ್ಕಳಿಗೆ ಪರೀಕ್ಷೆ ನಡೆಸಿದ್ದು, ಯಾವ ಮಕ್ಕಳಲ್ಲಿಯೂ ಎಚ್‌ಐವಿ ಸೋಂಕು ಪತ್ತೆಯಾಗಿಲ್ಲ. ಇದು ಎಚ್‌ಐವಿ ನಿಯಂತ್ರಣದಲ್ಲಿ ಹೊಸ ಮೈಲುಗಲ್ಲಿ ಎನ್ನಬಹುದು.

ಉಚಿತ ರಕ್ತನಿಧಿ ಕೇಂದ್ರಗಳು

ಮೈಸೂರಿನಲ್ಲಿ ಲೈಂಗಿಕ ವೃತ್ತಿನಿರತ ಮಹಿಳೆಯರು ಮತ್ತು ವಲಸೆಗಾರರಿಗೆ ಎಚ್‌ಐವಿ ಪರೀಕ್ಷಾ ಸೌಲಭ್ಯವನ್ನು ಒದಗಿಸುವ ಸಲುವಾಗಿ ಮೂರು ಟಿಐ ಕೆಲಸಮಾಡುತ್ತಿದ್ದು, ಅಶೋದಯ ಸಂಸ್ಥೆಯು ಎಫ್‌ಎಸ್‌ಡಬ್ಲ್ಯೂ ಜೊತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ೧೧ ರಕ್ತನಿಧಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಕೆ.ಆರ್.ಆಸ್ಪತ್ರೆ, ಜೀವಧಾರ, ಜೆಎಸ್ ಎಸ್, ರೋಟರಿ ಚಂದ್ರಕಲಾ, ಕಾಮಾಕ್ಷಿ, ಅಪೋಲೋ, ಸಂತ ಜೋಸೆಫ್, ಕಾವೇರಿ, ಜಯದೇವ, ನಾರಾಯಣ ಹೃದಯಾಲಯ ಆಸ್ಪತ್ರೆಗಳಲ್ಲಿ ಸುರಕ್ಷಿತ ರಕ್ತದಾನದ ಬಗ್ಗೆ ಒತ್ತು ನೀಡುತ್ತಿದ್ದು, ಎಚ್‌ಐವಿ ಸೋಂಕಿತರಿಗೆ ಉಚಿತವಾಗಿ ರಕ್ತವನ್ನು ನೀಡಲಾಗುತ್ತದೆ.

andolanait

Recent Posts

ಉಪ ಚುನಾವಣೆ | 1ಗಂಟೆ ವೇಳೆಗೆ ಬಾಗಲಕೋಟೆ ಶೇ.43, ದಾವಣಗೆರೆ ಶೇ.28ರಷ್ಟು ಮತದಾನ

ದಾವಣಗೆರೆ : ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಸಾಕ್ಷಿಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…

23 mins ago

ಚಾರಣಿಗರ ಸುರಕ್ಷತೆಗಾಗಿ ಟ್ರ್ಯಾಕಿಂಗ್ ಆಪ್, ವಿಮೆ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸುವಂತೆ ಅರಣ್ಯ,…

2 hours ago

ಅಡುಗೆ ಅನಿಲ,‌ಪೆಟ್ರೋಲಿಯಂ ಉತ್ಪನ್ನಗಳ ಕೊರತೆಗೆ ಕೇಂದ್ರ ಕಾರಣ ; ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್ ಡಿಸೇಲ್ ಕೊರತೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್…

2 hours ago

ಮೈಸೂರು-ಜೋಧ್‌ಪುರ ನಡುವೆ ವಿಶೇಷ ರೈಲು ಸೇವೆ ಆರಂಭ

ಮೈಸೂರು : ಮೈಸೂರು-ಜೋಧ್‌ಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭವಾಗಿರುವುದಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ…

2 hours ago

ಓದುಗರ ಪತ್ರ | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಮಾರಕ ನಿರ್ಮಾಣ ಸ್ವಾಗತಾರ್ಹ

೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ…

2 hours ago

ಓದುಗರ ಪತ್ರ | ಆಟೋ ಚಾಲಕರಿಗೆ ಸರ್ಕಾರ ಪರಿಹಾರ ನೀಡಲಿ

ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ…

2 hours ago