ಆಂದೋಲನ ಪುರವಣಿ

ಯೋಗ ಕ್ಷೇಮ : ವರ್ಷದಿಂದ ವರ್ಷಕ್ಕೆ ಇಳಿಯುತ್ತಿದೆ ಸೋಂಕಿನ ಪ್ರಮಾಣ

ಯುವಜನರಿಗೆ ಎಚ್‌ಐವಿ ಬಗ್ಗೆ ಅರಿವು, ಸುರಕ್ಷಿತ ಲೈಂಗಿಕತೆ ಕುರಿತು ವಿಶೇಷ ಕಾರ್ಯಕ್ರಮಗಳನ್ನು ರೂಪಿಸುತ್ತಿರುವ ಪರಿಣಾಮ ಮೈಸೂರು ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿನ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಿವೆ. ಎರಡು-ಮೂರು ವರ್ಷಗಳಲ್ಲಿ ಪ್ರಕರಣಗಳ ಸಂಖ್ಯೆ ಇನ್ನೂ ಕಡಿಮೆಯಾಗಲಿದೆ.

ಹತ್ತು ವರ್ಷಗಳ ಸರಾಸರಿ ಪ್ರಮಾಣ ನೋಡಿದರೆ ಸೋಂಕು ಪ್ರಕರಣಗಳು ೫೦೦ರ ಒಳಗೆ ಬಂದಿರುವುದು ಸಂತಸದ ಸಮಾಚಾರ. ಬೆಳಗಾವಿ, ಧಾರವಾಡ, ವಿಜಯಪುರ, ಚಿತ್ರದುರ್ಗ, ರಾಯಚೂರು, ಗುಲ್ಬರ್ಗಾ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಅತಿ ಹೆಚ್ಚು ಎಚ್‌ಐವಿ ಫ್ರಿವೆಲೆನ್ಸ್ ಗಳಿದ್ದು, ಮೈಸೂರಿನಲ್ಲಿ ಸೋಂಕಿತರ ಪ್ರಮಾಣ ತುಂಬಾ ಕಡಿಮೆ ಇದೆ. ಜಿಲ್ಲೆಯಲ್ಲಿ ೨೦೨೦-೨೧ನೇ ಸಾಲಿನಲ್ಲಿ ೯೧,೯೫೩ ಸಾಮಾನ್ಯ ಜನರನ್ನು ಎಚ್‌ಐವಿ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ ೫೨೧ ಮಂದಿಯಲ್ಲಿ ಸೋಂಕು ಪತ್ತೆಯಾಗಿತ್ತು. ಇದೇ ವೇಳೆ ೪೫,೬೩೬ ಗರ್ಭಿಣಿಯರನ್ನು ಪರೀಕ್ಷಿಸಿದ್ದು, ಅದರಲ್ಲಿ ೨೦ ಮಂದಿಗೆ ಸೋಂಕು ಇರುವುದು ದೃಢವಾಗಿತ್ತು.

೨೦೨೧-೨೨ನೇ ಸಾಲಿನಲ್ಲಿ ೧,೩೧,೯೬೪ ಸಾಮಾನ್ಯ ಜನರನ್ನು ಪರೀಕ್ಷಿಸಿದ್ದು, ಅದರಲ್ಲಿ ೭೨೨ ಮಂದಿಗೆ, ೫೦,೧೦೩ ಗರ್ಭಿಣಿಯರಲ್ಲಿ ೨೪ಮಂದಿಗೆ ಸೋಂಕು ಇರುವುದು ಪತ್ತೆಯಾಗಿತ್ತು.  ೨೦೨೨-೨೩ನೇ ಸಾಲಿನ ಈತನಕ ೧,೩೮,೬೭೬ ಮಂದಿಯನ್ನು ತಪಾಸಣೆ ಮಾಡಿದ್ದು, ೪೫೩ ಮಂದಿಗೆ ಸೋಂಕು ಇರುವುದು ದೃಢವಾಗಿದೆ.

ಮಕ್ಕಳಲ್ಲಿ ಪತ್ತೆಯಾಗದ ಸೋಂಕು

ಮೈಸೂರಿನಲ್ಲಿ ಎಲ್ಲ ಐಸಿಟಿಸಿ ಕೇಂದ್ರಗಳಲ್ಲಿಯೂ ಡಿಎನ್‌ಎ, ಪಿಸಿಆರ್ ಪರೀಕ್ಷಾ ಕೇಂದ್ರಗಳಿದ್ದು, ಇಲ್ಲಿ ಮಾರ್ಚ್ ೨೦೧೦ರಿಂದ ೨೦೨೨ ಅಕ್ಟೋಬರ್ ತನಕ ಎಚ್‌ಐವಿ ಸೋಂಕಿತ ತಾಯಂದಿರಿಗೆ ಹುಟ್ಟಿದ ಮಕ್ಕಳಲ್ಲಿ ೪೭ ಮಕ್ಕಳಿಗೆ ಸೋಂಕು ತಗುಲಿರುವುದು ಕಂಡುಬಂದಿತ್ತು. ೨೦೨೨-೨೩ರಲ್ಲಿ ಒಟ್ಟು ಮಕ್ಕಳಿಗೆ ೧೧೪ ಮಕ್ಕಳಿಗೆ ಪರೀಕ್ಷೆ ನಡೆಸಿದ್ದು, ಯಾವ ಮಕ್ಕಳಲ್ಲಿಯೂ ಎಚ್‌ಐವಿ ಸೋಂಕು ಪತ್ತೆಯಾಗಿಲ್ಲ. ಇದು ಎಚ್‌ಐವಿ ನಿಯಂತ್ರಣದಲ್ಲಿ ಹೊಸ ಮೈಲುಗಲ್ಲಿ ಎನ್ನಬಹುದು.

ಉಚಿತ ರಕ್ತನಿಧಿ ಕೇಂದ್ರಗಳು

ಮೈಸೂರಿನಲ್ಲಿ ಲೈಂಗಿಕ ವೃತ್ತಿನಿರತ ಮಹಿಳೆಯರು ಮತ್ತು ವಲಸೆಗಾರರಿಗೆ ಎಚ್‌ಐವಿ ಪರೀಕ್ಷಾ ಸೌಲಭ್ಯವನ್ನು ಒದಗಿಸುವ ಸಲುವಾಗಿ ಮೂರು ಟಿಐ ಕೆಲಸಮಾಡುತ್ತಿದ್ದು, ಅಶೋದಯ ಸಂಸ್ಥೆಯು ಎಫ್‌ಎಸ್‌ಡಬ್ಲ್ಯೂ ಜೊತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ೧೧ ರಕ್ತನಿಧಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಕೆ.ಆರ್.ಆಸ್ಪತ್ರೆ, ಜೀವಧಾರ, ಜೆಎಸ್ ಎಸ್, ರೋಟರಿ ಚಂದ್ರಕಲಾ, ಕಾಮಾಕ್ಷಿ, ಅಪೋಲೋ, ಸಂತ ಜೋಸೆಫ್, ಕಾವೇರಿ, ಜಯದೇವ, ನಾರಾಯಣ ಹೃದಯಾಲಯ ಆಸ್ಪತ್ರೆಗಳಲ್ಲಿ ಸುರಕ್ಷಿತ ರಕ್ತದಾನದ ಬಗ್ಗೆ ಒತ್ತು ನೀಡುತ್ತಿದ್ದು, ಎಚ್‌ಐವಿ ಸೋಂಕಿತರಿಗೆ ಉಚಿತವಾಗಿ ರಕ್ತವನ್ನು ನೀಡಲಾಗುತ್ತದೆ.

andolanait

Recent Posts

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

29 mins ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

38 mins ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

1 hour ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

1 hour ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

2 hours ago

ಶಾಲಾ ಮಕ್ಕಳಿಗೆ ಕಳಪೆ ಊಟ ; ಮುಖ್ಯ ಶಿಕ್ಷಕಿ ಅಮಾನತ್ತು

ಕೊಳ್ಳೇಗಾಲ : ತಾಲ್ಲೂಕಿನ ಸತ್ತೇಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕಳಪೆ ಊಟ ನೀಡಿದ್ದ ಆರೋಪದ ಮೇಲೆ…

2 hours ago