ಆಂದೋಲನ ಪುರವಣಿ

ಯೋಗ ಕ್ಷೇಮ : ವರ್ಷದಿಂದ ವರ್ಷಕ್ಕೆ ಇಳಿಯುತ್ತಿದೆ ಸೋಂಕಿನ ಪ್ರಮಾಣ

ಯುವಜನರಿಗೆ ಎಚ್‌ಐವಿ ಬಗ್ಗೆ ಅರಿವು, ಸುರಕ್ಷಿತ ಲೈಂಗಿಕತೆ ಕುರಿತು ವಿಶೇಷ ಕಾರ್ಯಕ್ರಮಗಳನ್ನು ರೂಪಿಸುತ್ತಿರುವ ಪರಿಣಾಮ ಮೈಸೂರು ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿನ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಿವೆ. ಎರಡು-ಮೂರು ವರ್ಷಗಳಲ್ಲಿ ಪ್ರಕರಣಗಳ ಸಂಖ್ಯೆ ಇನ್ನೂ ಕಡಿಮೆಯಾಗಲಿದೆ.

ಹತ್ತು ವರ್ಷಗಳ ಸರಾಸರಿ ಪ್ರಮಾಣ ನೋಡಿದರೆ ಸೋಂಕು ಪ್ರಕರಣಗಳು ೫೦೦ರ ಒಳಗೆ ಬಂದಿರುವುದು ಸಂತಸದ ಸಮಾಚಾರ. ಬೆಳಗಾವಿ, ಧಾರವಾಡ, ವಿಜಯಪುರ, ಚಿತ್ರದುರ್ಗ, ರಾಯಚೂರು, ಗುಲ್ಬರ್ಗಾ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಅತಿ ಹೆಚ್ಚು ಎಚ್‌ಐವಿ ಫ್ರಿವೆಲೆನ್ಸ್ ಗಳಿದ್ದು, ಮೈಸೂರಿನಲ್ಲಿ ಸೋಂಕಿತರ ಪ್ರಮಾಣ ತುಂಬಾ ಕಡಿಮೆ ಇದೆ. ಜಿಲ್ಲೆಯಲ್ಲಿ ೨೦೨೦-೨೧ನೇ ಸಾಲಿನಲ್ಲಿ ೯೧,೯೫೩ ಸಾಮಾನ್ಯ ಜನರನ್ನು ಎಚ್‌ಐವಿ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ ೫೨೧ ಮಂದಿಯಲ್ಲಿ ಸೋಂಕು ಪತ್ತೆಯಾಗಿತ್ತು. ಇದೇ ವೇಳೆ ೪೫,೬೩೬ ಗರ್ಭಿಣಿಯರನ್ನು ಪರೀಕ್ಷಿಸಿದ್ದು, ಅದರಲ್ಲಿ ೨೦ ಮಂದಿಗೆ ಸೋಂಕು ಇರುವುದು ದೃಢವಾಗಿತ್ತು.

೨೦೨೧-೨೨ನೇ ಸಾಲಿನಲ್ಲಿ ೧,೩೧,೯೬೪ ಸಾಮಾನ್ಯ ಜನರನ್ನು ಪರೀಕ್ಷಿಸಿದ್ದು, ಅದರಲ್ಲಿ ೭೨೨ ಮಂದಿಗೆ, ೫೦,೧೦೩ ಗರ್ಭಿಣಿಯರಲ್ಲಿ ೨೪ಮಂದಿಗೆ ಸೋಂಕು ಇರುವುದು ಪತ್ತೆಯಾಗಿತ್ತು.  ೨೦೨೨-೨೩ನೇ ಸಾಲಿನ ಈತನಕ ೧,೩೮,೬೭೬ ಮಂದಿಯನ್ನು ತಪಾಸಣೆ ಮಾಡಿದ್ದು, ೪೫೩ ಮಂದಿಗೆ ಸೋಂಕು ಇರುವುದು ದೃಢವಾಗಿದೆ.

ಮಕ್ಕಳಲ್ಲಿ ಪತ್ತೆಯಾಗದ ಸೋಂಕು

ಮೈಸೂರಿನಲ್ಲಿ ಎಲ್ಲ ಐಸಿಟಿಸಿ ಕೇಂದ್ರಗಳಲ್ಲಿಯೂ ಡಿಎನ್‌ಎ, ಪಿಸಿಆರ್ ಪರೀಕ್ಷಾ ಕೇಂದ್ರಗಳಿದ್ದು, ಇಲ್ಲಿ ಮಾರ್ಚ್ ೨೦೧೦ರಿಂದ ೨೦೨೨ ಅಕ್ಟೋಬರ್ ತನಕ ಎಚ್‌ಐವಿ ಸೋಂಕಿತ ತಾಯಂದಿರಿಗೆ ಹುಟ್ಟಿದ ಮಕ್ಕಳಲ್ಲಿ ೪೭ ಮಕ್ಕಳಿಗೆ ಸೋಂಕು ತಗುಲಿರುವುದು ಕಂಡುಬಂದಿತ್ತು. ೨೦೨೨-೨೩ರಲ್ಲಿ ಒಟ್ಟು ಮಕ್ಕಳಿಗೆ ೧೧೪ ಮಕ್ಕಳಿಗೆ ಪರೀಕ್ಷೆ ನಡೆಸಿದ್ದು, ಯಾವ ಮಕ್ಕಳಲ್ಲಿಯೂ ಎಚ್‌ಐವಿ ಸೋಂಕು ಪತ್ತೆಯಾಗಿಲ್ಲ. ಇದು ಎಚ್‌ಐವಿ ನಿಯಂತ್ರಣದಲ್ಲಿ ಹೊಸ ಮೈಲುಗಲ್ಲಿ ಎನ್ನಬಹುದು.

ಉಚಿತ ರಕ್ತನಿಧಿ ಕೇಂದ್ರಗಳು

ಮೈಸೂರಿನಲ್ಲಿ ಲೈಂಗಿಕ ವೃತ್ತಿನಿರತ ಮಹಿಳೆಯರು ಮತ್ತು ವಲಸೆಗಾರರಿಗೆ ಎಚ್‌ಐವಿ ಪರೀಕ್ಷಾ ಸೌಲಭ್ಯವನ್ನು ಒದಗಿಸುವ ಸಲುವಾಗಿ ಮೂರು ಟಿಐ ಕೆಲಸಮಾಡುತ್ತಿದ್ದು, ಅಶೋದಯ ಸಂಸ್ಥೆಯು ಎಫ್‌ಎಸ್‌ಡಬ್ಲ್ಯೂ ಜೊತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ೧೧ ರಕ್ತನಿಧಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಕೆ.ಆರ್.ಆಸ್ಪತ್ರೆ, ಜೀವಧಾರ, ಜೆಎಸ್ ಎಸ್, ರೋಟರಿ ಚಂದ್ರಕಲಾ, ಕಾಮಾಕ್ಷಿ, ಅಪೋಲೋ, ಸಂತ ಜೋಸೆಫ್, ಕಾವೇರಿ, ಜಯದೇವ, ನಾರಾಯಣ ಹೃದಯಾಲಯ ಆಸ್ಪತ್ರೆಗಳಲ್ಲಿ ಸುರಕ್ಷಿತ ರಕ್ತದಾನದ ಬಗ್ಗೆ ಒತ್ತು ನೀಡುತ್ತಿದ್ದು, ಎಚ್‌ಐವಿ ಸೋಂಕಿತರಿಗೆ ಉಚಿತವಾಗಿ ರಕ್ತವನ್ನು ನೀಡಲಾಗುತ್ತದೆ.

andolanait

Recent Posts

ಅಯೋಧ್ಯೆಯಲ್ಲಿ ಗಣಪತಿ ಆಶ್ರಮ ಶಾಖೆ ಉದ್ಘಾಟನಾ ಕಾರ್ಯಕ್ರಮ

ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…

2 hours ago

ಜನವರಿ.5ಕ್ಕೆ ಮೈಸೂರು ವಿವಿ 106ನೇ ಘಟಿಕೋತ್ಸವ

ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…

2 hours ago

ಗ್ರಾಮೀಣ ಭಾಗದಲ್ಲಿ ಚಳಿಗೆ ತತ್ತರಿಸಿದ ಜನರು

ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ  ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…

2 hours ago

ಒಂದೇ ವರ್ಷದಲ್ಲಿ ಕಿತ್ತು ಬಂದ ರಸ್ತೆಯ ಜಲ್ಲಿ ಕಲ್ಲು!

ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…

2 hours ago

ನಿರಂತರ ಹುಲಿ, ಚಿರತೆಗಳ ಹಾವಳಿ; ಕಂಗಾಲಾದ ರೈತರು

ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…

2 hours ago