ಆಂದೋಲನ ಪುರವಣಿ

ಯೋಗ ಕ್ಷೇಮ : ವರ್ಷದಿಂದ ವರ್ಷಕ್ಕೆ ಇಳಿಯುತ್ತಿದೆ ಸೋಂಕಿನ ಪ್ರಮಾಣ

ಯುವಜನರಿಗೆ ಎಚ್‌ಐವಿ ಬಗ್ಗೆ ಅರಿವು, ಸುರಕ್ಷಿತ ಲೈಂಗಿಕತೆ ಕುರಿತು ವಿಶೇಷ ಕಾರ್ಯಕ್ರಮಗಳನ್ನು ರೂಪಿಸುತ್ತಿರುವ ಪರಿಣಾಮ ಮೈಸೂರು ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿನ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಿವೆ. ಎರಡು-ಮೂರು ವರ್ಷಗಳಲ್ಲಿ ಪ್ರಕರಣಗಳ ಸಂಖ್ಯೆ ಇನ್ನೂ ಕಡಿಮೆಯಾಗಲಿದೆ.

ಹತ್ತು ವರ್ಷಗಳ ಸರಾಸರಿ ಪ್ರಮಾಣ ನೋಡಿದರೆ ಸೋಂಕು ಪ್ರಕರಣಗಳು ೫೦೦ರ ಒಳಗೆ ಬಂದಿರುವುದು ಸಂತಸದ ಸಮಾಚಾರ. ಬೆಳಗಾವಿ, ಧಾರವಾಡ, ವಿಜಯಪುರ, ಚಿತ್ರದುರ್ಗ, ರಾಯಚೂರು, ಗುಲ್ಬರ್ಗಾ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಅತಿ ಹೆಚ್ಚು ಎಚ್‌ಐವಿ ಫ್ರಿವೆಲೆನ್ಸ್ ಗಳಿದ್ದು, ಮೈಸೂರಿನಲ್ಲಿ ಸೋಂಕಿತರ ಪ್ರಮಾಣ ತುಂಬಾ ಕಡಿಮೆ ಇದೆ. ಜಿಲ್ಲೆಯಲ್ಲಿ ೨೦೨೦-೨೧ನೇ ಸಾಲಿನಲ್ಲಿ ೯೧,೯೫೩ ಸಾಮಾನ್ಯ ಜನರನ್ನು ಎಚ್‌ಐವಿ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ ೫೨೧ ಮಂದಿಯಲ್ಲಿ ಸೋಂಕು ಪತ್ತೆಯಾಗಿತ್ತು. ಇದೇ ವೇಳೆ ೪೫,೬೩೬ ಗರ್ಭಿಣಿಯರನ್ನು ಪರೀಕ್ಷಿಸಿದ್ದು, ಅದರಲ್ಲಿ ೨೦ ಮಂದಿಗೆ ಸೋಂಕು ಇರುವುದು ದೃಢವಾಗಿತ್ತು.

೨೦೨೧-೨೨ನೇ ಸಾಲಿನಲ್ಲಿ ೧,೩೧,೯೬೪ ಸಾಮಾನ್ಯ ಜನರನ್ನು ಪರೀಕ್ಷಿಸಿದ್ದು, ಅದರಲ್ಲಿ ೭೨೨ ಮಂದಿಗೆ, ೫೦,೧೦೩ ಗರ್ಭಿಣಿಯರಲ್ಲಿ ೨೪ಮಂದಿಗೆ ಸೋಂಕು ಇರುವುದು ಪತ್ತೆಯಾಗಿತ್ತು.  ೨೦೨೨-೨೩ನೇ ಸಾಲಿನ ಈತನಕ ೧,೩೮,೬೭೬ ಮಂದಿಯನ್ನು ತಪಾಸಣೆ ಮಾಡಿದ್ದು, ೪೫೩ ಮಂದಿಗೆ ಸೋಂಕು ಇರುವುದು ದೃಢವಾಗಿದೆ.

ಮಕ್ಕಳಲ್ಲಿ ಪತ್ತೆಯಾಗದ ಸೋಂಕು

ಮೈಸೂರಿನಲ್ಲಿ ಎಲ್ಲ ಐಸಿಟಿಸಿ ಕೇಂದ್ರಗಳಲ್ಲಿಯೂ ಡಿಎನ್‌ಎ, ಪಿಸಿಆರ್ ಪರೀಕ್ಷಾ ಕೇಂದ್ರಗಳಿದ್ದು, ಇಲ್ಲಿ ಮಾರ್ಚ್ ೨೦೧೦ರಿಂದ ೨೦೨೨ ಅಕ್ಟೋಬರ್ ತನಕ ಎಚ್‌ಐವಿ ಸೋಂಕಿತ ತಾಯಂದಿರಿಗೆ ಹುಟ್ಟಿದ ಮಕ್ಕಳಲ್ಲಿ ೪೭ ಮಕ್ಕಳಿಗೆ ಸೋಂಕು ತಗುಲಿರುವುದು ಕಂಡುಬಂದಿತ್ತು. ೨೦೨೨-೨೩ರಲ್ಲಿ ಒಟ್ಟು ಮಕ್ಕಳಿಗೆ ೧೧೪ ಮಕ್ಕಳಿಗೆ ಪರೀಕ್ಷೆ ನಡೆಸಿದ್ದು, ಯಾವ ಮಕ್ಕಳಲ್ಲಿಯೂ ಎಚ್‌ಐವಿ ಸೋಂಕು ಪತ್ತೆಯಾಗಿಲ್ಲ. ಇದು ಎಚ್‌ಐವಿ ನಿಯಂತ್ರಣದಲ್ಲಿ ಹೊಸ ಮೈಲುಗಲ್ಲಿ ಎನ್ನಬಹುದು.

ಉಚಿತ ರಕ್ತನಿಧಿ ಕೇಂದ್ರಗಳು

ಮೈಸೂರಿನಲ್ಲಿ ಲೈಂಗಿಕ ವೃತ್ತಿನಿರತ ಮಹಿಳೆಯರು ಮತ್ತು ವಲಸೆಗಾರರಿಗೆ ಎಚ್‌ಐವಿ ಪರೀಕ್ಷಾ ಸೌಲಭ್ಯವನ್ನು ಒದಗಿಸುವ ಸಲುವಾಗಿ ಮೂರು ಟಿಐ ಕೆಲಸಮಾಡುತ್ತಿದ್ದು, ಅಶೋದಯ ಸಂಸ್ಥೆಯು ಎಫ್‌ಎಸ್‌ಡಬ್ಲ್ಯೂ ಜೊತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ೧೧ ರಕ್ತನಿಧಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಕೆ.ಆರ್.ಆಸ್ಪತ್ರೆ, ಜೀವಧಾರ, ಜೆಎಸ್ ಎಸ್, ರೋಟರಿ ಚಂದ್ರಕಲಾ, ಕಾಮಾಕ್ಷಿ, ಅಪೋಲೋ, ಸಂತ ಜೋಸೆಫ್, ಕಾವೇರಿ, ಜಯದೇವ, ನಾರಾಯಣ ಹೃದಯಾಲಯ ಆಸ್ಪತ್ರೆಗಳಲ್ಲಿ ಸುರಕ್ಷಿತ ರಕ್ತದಾನದ ಬಗ್ಗೆ ಒತ್ತು ನೀಡುತ್ತಿದ್ದು, ಎಚ್‌ಐವಿ ಸೋಂಕಿತರಿಗೆ ಉಚಿತವಾಗಿ ರಕ್ತವನ್ನು ನೀಡಲಾಗುತ್ತದೆ.

andolanait

Recent Posts

ಕಾವೇರಿ ಜಲವಿವಾದ: ಸೆ.15ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಸೆಪ್ಟೆಂಬರ್‌ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…

6 hours ago

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…

6 hours ago

ಎಚ್.ಡಿ.ಕೋಟೆ: ಸಾರ್ವಜನಿಕರಿಗೆ ಆತಂಕ ಮೂಡಿಸಿದ್ದ ಹುಲಿ ಸೆರೆ

ಎಚ್.ಡಿ. ಕೋಟೆ: ತಾಲೂಕಿನ ಹೊಸ ಹುಳಲು ಗ್ರಾಮದಲ್ಲಿ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ.…

7 hours ago

ರಾಜಕೀಯ ಮೇಲಾಟ ನಿಲ್ಲಲಿ; ಸಾಮಾನ್ಯರ ವಿಷಯ ಚರ್ಚೆಯಾಗಲಿ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಕೇಂದ್ರ ಬಿಂದುವಾಗಿದ್ದು,…

12 hours ago

ಪ್ರೇಮವೂ ಬಂಡಾಯದ ದನಿಯೇ – ಅಮೃತಾ ಪ್ರೀತಮ್

ರೇಣುಕಾ ನಿಡಗುಂದಿ ಮತ್ತೆ ಸಿಗುವೆ.. ಆದರೆ ಎಲ್ಲಿ? ಹೇಗೆ ನನಗೂ ತಿಳಿಯದು, ಈ ನಶ್ವರ ಲೋಕದ ಹಂಗು ಆತ್ಮಕ್ಕಿಲ್ಲ ನಾ…

12 hours ago

ನೀರಸವಾಯಿತು ರಾಜ್ಯ ವಿಧಾನಮಂಡಲ ಅಧಿವೇಶನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಈ ಬಾರಿಯ ರಾಜ್ಯ ವಿಧಾನಮಂಡಲ ಅಧಿವೇಶನ ನಾಡಿನ ಜನರಿಗೆ ರವಾನಿಸಿರುವ ಸಂದೇಶ ಏನು? ಇಂತಹದೊಂದು…

12 hours ago