ಆಂದೋಲನ ಪುರವಣಿ

ಯೋಗ ಕ್ಷೇಮ : ವರ್ಷದಿಂದ ವರ್ಷಕ್ಕೆ ಇಳಿಯುತ್ತಿದೆ ಸೋಂಕಿನ ಪ್ರಮಾಣ

ಯುವಜನರಿಗೆ ಎಚ್‌ಐವಿ ಬಗ್ಗೆ ಅರಿವು, ಸುರಕ್ಷಿತ ಲೈಂಗಿಕತೆ ಕುರಿತು ವಿಶೇಷ ಕಾರ್ಯಕ್ರಮಗಳನ್ನು ರೂಪಿಸುತ್ತಿರುವ ಪರಿಣಾಮ ಮೈಸೂರು ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿನ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಿವೆ. ಎರಡು-ಮೂರು ವರ್ಷಗಳಲ್ಲಿ ಪ್ರಕರಣಗಳ ಸಂಖ್ಯೆ ಇನ್ನೂ ಕಡಿಮೆಯಾಗಲಿದೆ.

ಹತ್ತು ವರ್ಷಗಳ ಸರಾಸರಿ ಪ್ರಮಾಣ ನೋಡಿದರೆ ಸೋಂಕು ಪ್ರಕರಣಗಳು ೫೦೦ರ ಒಳಗೆ ಬಂದಿರುವುದು ಸಂತಸದ ಸಮಾಚಾರ. ಬೆಳಗಾವಿ, ಧಾರವಾಡ, ವಿಜಯಪುರ, ಚಿತ್ರದುರ್ಗ, ರಾಯಚೂರು, ಗುಲ್ಬರ್ಗಾ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಅತಿ ಹೆಚ್ಚು ಎಚ್‌ಐವಿ ಫ್ರಿವೆಲೆನ್ಸ್ ಗಳಿದ್ದು, ಮೈಸೂರಿನಲ್ಲಿ ಸೋಂಕಿತರ ಪ್ರಮಾಣ ತುಂಬಾ ಕಡಿಮೆ ಇದೆ. ಜಿಲ್ಲೆಯಲ್ಲಿ ೨೦೨೦-೨೧ನೇ ಸಾಲಿನಲ್ಲಿ ೯೧,೯೫೩ ಸಾಮಾನ್ಯ ಜನರನ್ನು ಎಚ್‌ಐವಿ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ ೫೨೧ ಮಂದಿಯಲ್ಲಿ ಸೋಂಕು ಪತ್ತೆಯಾಗಿತ್ತು. ಇದೇ ವೇಳೆ ೪೫,೬೩೬ ಗರ್ಭಿಣಿಯರನ್ನು ಪರೀಕ್ಷಿಸಿದ್ದು, ಅದರಲ್ಲಿ ೨೦ ಮಂದಿಗೆ ಸೋಂಕು ಇರುವುದು ದೃಢವಾಗಿತ್ತು.

೨೦೨೧-೨೨ನೇ ಸಾಲಿನಲ್ಲಿ ೧,೩೧,೯೬೪ ಸಾಮಾನ್ಯ ಜನರನ್ನು ಪರೀಕ್ಷಿಸಿದ್ದು, ಅದರಲ್ಲಿ ೭೨೨ ಮಂದಿಗೆ, ೫೦,೧೦೩ ಗರ್ಭಿಣಿಯರಲ್ಲಿ ೨೪ಮಂದಿಗೆ ಸೋಂಕು ಇರುವುದು ಪತ್ತೆಯಾಗಿತ್ತು.  ೨೦೨೨-೨೩ನೇ ಸಾಲಿನ ಈತನಕ ೧,೩೮,೬೭೬ ಮಂದಿಯನ್ನು ತಪಾಸಣೆ ಮಾಡಿದ್ದು, ೪೫೩ ಮಂದಿಗೆ ಸೋಂಕು ಇರುವುದು ದೃಢವಾಗಿದೆ.

ಮಕ್ಕಳಲ್ಲಿ ಪತ್ತೆಯಾಗದ ಸೋಂಕು

ಮೈಸೂರಿನಲ್ಲಿ ಎಲ್ಲ ಐಸಿಟಿಸಿ ಕೇಂದ್ರಗಳಲ್ಲಿಯೂ ಡಿಎನ್‌ಎ, ಪಿಸಿಆರ್ ಪರೀಕ್ಷಾ ಕೇಂದ್ರಗಳಿದ್ದು, ಇಲ್ಲಿ ಮಾರ್ಚ್ ೨೦೧೦ರಿಂದ ೨೦೨೨ ಅಕ್ಟೋಬರ್ ತನಕ ಎಚ್‌ಐವಿ ಸೋಂಕಿತ ತಾಯಂದಿರಿಗೆ ಹುಟ್ಟಿದ ಮಕ್ಕಳಲ್ಲಿ ೪೭ ಮಕ್ಕಳಿಗೆ ಸೋಂಕು ತಗುಲಿರುವುದು ಕಂಡುಬಂದಿತ್ತು. ೨೦೨೨-೨೩ರಲ್ಲಿ ಒಟ್ಟು ಮಕ್ಕಳಿಗೆ ೧೧೪ ಮಕ್ಕಳಿಗೆ ಪರೀಕ್ಷೆ ನಡೆಸಿದ್ದು, ಯಾವ ಮಕ್ಕಳಲ್ಲಿಯೂ ಎಚ್‌ಐವಿ ಸೋಂಕು ಪತ್ತೆಯಾಗಿಲ್ಲ. ಇದು ಎಚ್‌ಐವಿ ನಿಯಂತ್ರಣದಲ್ಲಿ ಹೊಸ ಮೈಲುಗಲ್ಲಿ ಎನ್ನಬಹುದು.

ಉಚಿತ ರಕ್ತನಿಧಿ ಕೇಂದ್ರಗಳು

ಮೈಸೂರಿನಲ್ಲಿ ಲೈಂಗಿಕ ವೃತ್ತಿನಿರತ ಮಹಿಳೆಯರು ಮತ್ತು ವಲಸೆಗಾರರಿಗೆ ಎಚ್‌ಐವಿ ಪರೀಕ್ಷಾ ಸೌಲಭ್ಯವನ್ನು ಒದಗಿಸುವ ಸಲುವಾಗಿ ಮೂರು ಟಿಐ ಕೆಲಸಮಾಡುತ್ತಿದ್ದು, ಅಶೋದಯ ಸಂಸ್ಥೆಯು ಎಫ್‌ಎಸ್‌ಡಬ್ಲ್ಯೂ ಜೊತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ೧೧ ರಕ್ತನಿಧಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಕೆ.ಆರ್.ಆಸ್ಪತ್ರೆ, ಜೀವಧಾರ, ಜೆಎಸ್ ಎಸ್, ರೋಟರಿ ಚಂದ್ರಕಲಾ, ಕಾಮಾಕ್ಷಿ, ಅಪೋಲೋ, ಸಂತ ಜೋಸೆಫ್, ಕಾವೇರಿ, ಜಯದೇವ, ನಾರಾಯಣ ಹೃದಯಾಲಯ ಆಸ್ಪತ್ರೆಗಳಲ್ಲಿ ಸುರಕ್ಷಿತ ರಕ್ತದಾನದ ಬಗ್ಗೆ ಒತ್ತು ನೀಡುತ್ತಿದ್ದು, ಎಚ್‌ಐವಿ ಸೋಂಕಿತರಿಗೆ ಉಚಿತವಾಗಿ ರಕ್ತವನ್ನು ನೀಡಲಾಗುತ್ತದೆ.

andolanait

Recent Posts

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

3 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

6 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರೋದ್ಯಮದತ್ತ ಕೇಂದ್ರದ ಗಮನ, ಅಧ್ಯಯನ ತಂಡ ರಚನೆ

ಭಾರತೀಯ ಚಿತ್ರೋದ್ಯಮದ ಉತ್ತೇಜನಕ್ಕಾಗಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮುಂದಾಗಿರುವ ಸುದ್ದಿ. ಚಿತ್ರರಂಗಕ್ಕೆ ಸಂಬಂಧಿಸಿದಂತೆ, ಚಿತ್ರಗಳನ್ನು ವರ್ಗೀಕರಿಸಿ, ಪ್ರಮಾಣಪತ್ರ…

6 hours ago

ಕೊಡಗು ಜಿಲ್ಲೆಯಲ್ಲಿ ನಮೂನೆ ವಿತರಣೆ ಕಾರ್ಯ ಪೂರ್ಣ

ನವೀನ್ ಡಿಸೋಜ ತ್ವರಿತಗತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ; ಒಟ್ಟು ೪,೬೮,೬೫೭ ನಮೂನೆ ವಿತರಣೆ ಮೂಲಕ ಶೇ.೧೦೦ ಪ್ರಗತಿ…

7 hours ago

ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ

ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡುವಿನದೊಡ್ಡಿ ಮತ್ತು ಅರ್ಧನಾರೀಪುರ ಗ್ರಾಮಗಳಿಗೆ ಗುರುವಾರ ಗ್ರಾಮ ಪಂಚಾಯಿತಿ ವತಿಯಿಂದ ಟ್ಯಾಂಕರ್…

7 hours ago