ಆಂದೋಲನ ಪುರವಣಿ

ಯೋಗ ಕ್ಷೇಮ : ಚಳಿಗಾಲ ಬಂತೆಂದು ಮೈ ಮರೆಯದಿರಿ

ಮಧುಮೇಹಿಗಳ ನಿತ್ಯದ ಚಟುವಟಕೆಗಳು ಎಂದಿನಂತೆ ಇರಲಿ; ವ್ಯಾಯಾಮ ತಪ್ಪದಿರಲಿ

ಚಳಿಗಾಲ ಬಂತು. ಬೆಚ್ಚಗೆ ಮನೆಯಲ್ಲಿ ಇರುವುದಕ್ಕೆ ಎಲ್ಲರ ಮನಸ್ಸು ಹಾತೊರೆಯುತ್ತದೆ. ಸುರಿಯುತ್ತಿರುವ ಇಬ್ಬನಿ, ಹೊದ್ದುಕೊಂಡ ಹೊದಿಕೆ ನಿತ್ಯದ ಚಟುವಟಿಕೆಗಳಿಗೆ ಅಡೆತಡೆ ತರುವುದು ಸಹಜ. ಹಾಗೆಂದು ಮನಸ್ಸು ಹೇಳಿದಂತೆ ದೇಹವನ್ನು ದಂಡಿಸದೇ ಹೋದರೆ ಆರೋಗ್ಯದಲ್ಲಿ ಏರುಪೇರು ಖಚಿತ. ಅದರಲ್ಲಿಯೂ ಸಕ್ಕರೆ ಕಾಯಿಲೆ ಇರುವವರಿಗೆ ಇದು ಸಮಸ್ಯೆಯಾಗುತ್ತದೆ.

ಚಳಿಗಾಲದಲ್ಲಿ ದೇಹದ ತೂಕ ಹೆಚ್ಚುವುದು ಸಹಜ. ಬಾಯಿ ಬಗೆ ಬಗೆಯ ತಿನಿಸುಗಳನ್ನು ಬಯಸುತ್ತಿರುತ್ತದೆ. ಈ ವೇಳೆಯಲ್ಲಿ ಎಚ್ಚರ ತಪ್ಪಿದರೆ ತೊಂದರೆ ಖಚಿತ. ಇದಕ್ಕಾಗಿಯೇ ವೈದ್ಯರು ಚಳಿಗಾಲದಲ್ಲಿ ವ್ಯಾಯಾಮವನ್ನು ತಪ್ಪದೇ ಮಾಡಿ ಎಂದು ಹೇಳುವುದು.

ಚಳಿಗಾಲದಲ್ಲಿ ದೇಹದ ಉಷ್ಣಾಂಶವನ್ನು ಸಮತೋಲನದಲ್ಲಿ ಇಟ್ಟುಕೊಳ್ಳುವುದು ಅತಿ ಮುಖ್ಯ. ಇದಕ್ಕೆ ಕೆಲವು ಬಗೆಯ ಪೇಯಗಳ ಸೇವನೆ, ಆಹಾರದಲ್ಲಿ ಬದಲಾವಣೆ ಮಾಡಿಕೊಂಡರೆ ಆಗುತ್ತದೆ. ಹಾಗೆಂದು ವ್ಯಾಯಾಮವನ್ನು ತ್ಯಜಿಸುವುದು ಸರಿಯಲ್ಲ. ದೇಹವನ್ನು ದಂಡಿಸಿದಾಗ ದೇಹದ ಉಷ್ಣಾಂಶ ಹೆಚ್ಚಾಗುತ್ತದೆ. ಇದು ಚಳಿಗಾಲದಲ್ಲಿ ಅತಿ ಮುಖ್ಯ. ಅಲ್ಲದೇ ಬೆಳಗ್ಗಿನ ವೇಳೆಯಲ್ಲಿ ಎಳೆ ಬಿಸಿಲಿಗೆ ಮೈ ಒಡ್ಡುವುದು ಚಳಿಗಾಲದಲ್ಲಿ ಅತಿ ಮುಖ್ಯ. ಮಧುಮೇಹಿಗಳು ಇದನ್ನು ತಪ್ಪದೇ ಪಾಲಿಸುವುದು ಆರೋಗ್ಯದ ದೃಷ್ಟಿಯಿಂದ ತುಂಬಾ ಒಳ್ಳೆಯದ್ದು.

ಪದೇ ಪದೇ ಪರೀಕ್ಷೆಗೆ ಒಳಗಾಗಿ

ಸಕ್ಕರೆ ಕಾಯಿಲೆ ಇರುವವರು ಚಳಿಗಾಲದಲ್ಲಿ ಎಚ್ಚರಿಕೆಯಿಂದ ಇರಬೇಕು. ಯಾವುದೇ ಸಣ್ಣ ಗಾಯಗಳಾದರೂ ಆರೋಗ್ಯವಂತರಿಗೇ ಬೇಗ ವಾಸಿಯಾಗುವುದಿಲ್ಲ. ಇನ್ನು ಶುಗರ್ ಇದ್ದವರಿಗೆ ಹೆಚ್ಚು ತೊಂದರೆಯೇ. ಅಲ್ಲದೇ ವಾರಕ್ಕೆ, ಹದಿನೈದು ದಿನಕ್ಕೆ ಒಮ್ಮೆ ಶುಗರ್ ಲೆವೆಲ್ ಚೆಕ್ ಮಾಡಿಕೊಳ್ಳುವುದು, ನಿಗದಿತ ಸಮಯಕ್ಕೆ ಮಾತ್ರೆಗಳು, ಆಹಾರ ತೆಗೆದುಕೊಳ್ಳುವುದು ಉತ್ತಮ. ಧೂಮಪಾನ ಬೇಡವೇ ಬೇಡ. ವಾತಾವರಣದಲ್ಲಿ ಉಷ್ಣಾಂಶ ಕಡಿಮೆ ಆಗುವುದರಿಂದ ರಕ್ತದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾಗುತ್ತದೆ. ಹೀಗಾಗಿ ನಿಮ್ಮ ದೇಹ ಪ್ರಕೃತಿಗೆ ಒಗ್ಗುವ ಮಸಾಲೆ ಪದಾರ್ಥಗಳು, ಶುಂಠಿ, ಲವಂಗ, ಚಹ, ಕಾಫಿ ಸೇವನೆ ಉತ್ತಮ.

andolanait

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

3 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

3 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

5 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

5 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

7 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

9 hours ago