ಆಂದೋಲನ ಪುರವಣಿ

ಯೋಗ ಕ್ಷೇಮ : ಚಳಿಗಾಲ ಬಂತೆಂದು ಮೈ ಮರೆಯದಿರಿ

ಮಧುಮೇಹಿಗಳ ನಿತ್ಯದ ಚಟುವಟಕೆಗಳು ಎಂದಿನಂತೆ ಇರಲಿ; ವ್ಯಾಯಾಮ ತಪ್ಪದಿರಲಿ

ಚಳಿಗಾಲ ಬಂತು. ಬೆಚ್ಚಗೆ ಮನೆಯಲ್ಲಿ ಇರುವುದಕ್ಕೆ ಎಲ್ಲರ ಮನಸ್ಸು ಹಾತೊರೆಯುತ್ತದೆ. ಸುರಿಯುತ್ತಿರುವ ಇಬ್ಬನಿ, ಹೊದ್ದುಕೊಂಡ ಹೊದಿಕೆ ನಿತ್ಯದ ಚಟುವಟಿಕೆಗಳಿಗೆ ಅಡೆತಡೆ ತರುವುದು ಸಹಜ. ಹಾಗೆಂದು ಮನಸ್ಸು ಹೇಳಿದಂತೆ ದೇಹವನ್ನು ದಂಡಿಸದೇ ಹೋದರೆ ಆರೋಗ್ಯದಲ್ಲಿ ಏರುಪೇರು ಖಚಿತ. ಅದರಲ್ಲಿಯೂ ಸಕ್ಕರೆ ಕಾಯಿಲೆ ಇರುವವರಿಗೆ ಇದು ಸಮಸ್ಯೆಯಾಗುತ್ತದೆ.

ಚಳಿಗಾಲದಲ್ಲಿ ದೇಹದ ತೂಕ ಹೆಚ್ಚುವುದು ಸಹಜ. ಬಾಯಿ ಬಗೆ ಬಗೆಯ ತಿನಿಸುಗಳನ್ನು ಬಯಸುತ್ತಿರುತ್ತದೆ. ಈ ವೇಳೆಯಲ್ಲಿ ಎಚ್ಚರ ತಪ್ಪಿದರೆ ತೊಂದರೆ ಖಚಿತ. ಇದಕ್ಕಾಗಿಯೇ ವೈದ್ಯರು ಚಳಿಗಾಲದಲ್ಲಿ ವ್ಯಾಯಾಮವನ್ನು ತಪ್ಪದೇ ಮಾಡಿ ಎಂದು ಹೇಳುವುದು.

ಚಳಿಗಾಲದಲ್ಲಿ ದೇಹದ ಉಷ್ಣಾಂಶವನ್ನು ಸಮತೋಲನದಲ್ಲಿ ಇಟ್ಟುಕೊಳ್ಳುವುದು ಅತಿ ಮುಖ್ಯ. ಇದಕ್ಕೆ ಕೆಲವು ಬಗೆಯ ಪೇಯಗಳ ಸೇವನೆ, ಆಹಾರದಲ್ಲಿ ಬದಲಾವಣೆ ಮಾಡಿಕೊಂಡರೆ ಆಗುತ್ತದೆ. ಹಾಗೆಂದು ವ್ಯಾಯಾಮವನ್ನು ತ್ಯಜಿಸುವುದು ಸರಿಯಲ್ಲ. ದೇಹವನ್ನು ದಂಡಿಸಿದಾಗ ದೇಹದ ಉಷ್ಣಾಂಶ ಹೆಚ್ಚಾಗುತ್ತದೆ. ಇದು ಚಳಿಗಾಲದಲ್ಲಿ ಅತಿ ಮುಖ್ಯ. ಅಲ್ಲದೇ ಬೆಳಗ್ಗಿನ ವೇಳೆಯಲ್ಲಿ ಎಳೆ ಬಿಸಿಲಿಗೆ ಮೈ ಒಡ್ಡುವುದು ಚಳಿಗಾಲದಲ್ಲಿ ಅತಿ ಮುಖ್ಯ. ಮಧುಮೇಹಿಗಳು ಇದನ್ನು ತಪ್ಪದೇ ಪಾಲಿಸುವುದು ಆರೋಗ್ಯದ ದೃಷ್ಟಿಯಿಂದ ತುಂಬಾ ಒಳ್ಳೆಯದ್ದು.

ಪದೇ ಪದೇ ಪರೀಕ್ಷೆಗೆ ಒಳಗಾಗಿ

ಸಕ್ಕರೆ ಕಾಯಿಲೆ ಇರುವವರು ಚಳಿಗಾಲದಲ್ಲಿ ಎಚ್ಚರಿಕೆಯಿಂದ ಇರಬೇಕು. ಯಾವುದೇ ಸಣ್ಣ ಗಾಯಗಳಾದರೂ ಆರೋಗ್ಯವಂತರಿಗೇ ಬೇಗ ವಾಸಿಯಾಗುವುದಿಲ್ಲ. ಇನ್ನು ಶುಗರ್ ಇದ್ದವರಿಗೆ ಹೆಚ್ಚು ತೊಂದರೆಯೇ. ಅಲ್ಲದೇ ವಾರಕ್ಕೆ, ಹದಿನೈದು ದಿನಕ್ಕೆ ಒಮ್ಮೆ ಶುಗರ್ ಲೆವೆಲ್ ಚೆಕ್ ಮಾಡಿಕೊಳ್ಳುವುದು, ನಿಗದಿತ ಸಮಯಕ್ಕೆ ಮಾತ್ರೆಗಳು, ಆಹಾರ ತೆಗೆದುಕೊಳ್ಳುವುದು ಉತ್ತಮ. ಧೂಮಪಾನ ಬೇಡವೇ ಬೇಡ. ವಾತಾವರಣದಲ್ಲಿ ಉಷ್ಣಾಂಶ ಕಡಿಮೆ ಆಗುವುದರಿಂದ ರಕ್ತದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾಗುತ್ತದೆ. ಹೀಗಾಗಿ ನಿಮ್ಮ ದೇಹ ಪ್ರಕೃತಿಗೆ ಒಗ್ಗುವ ಮಸಾಲೆ ಪದಾರ್ಥಗಳು, ಶುಂಠಿ, ಲವಂಗ, ಚಹ, ಕಾಫಿ ಸೇವನೆ ಉತ್ತಮ.

andolanait

Recent Posts

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

18 mins ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

40 mins ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

1 hour ago

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…

1 hour ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಬೆಚ್ಚನೆಯ ಉಡುಪು ಒದಗಿಸಿ

ಪ್ರತಿದಿನ ಬೆಳಗಿನ ಜಾವ ದಿನ ದಿನಪತ್ರಿಕೆಗಳನ್ನು ಬಹುತೇಕ ಮಕ್ಕಳೇ ವಿತರಿಸುತ್ತಿದ್ದಾರೆ. ಹವಾಮಾನ ವೈಪರೀತ್ಯದಿಂದ ವಿಪರೀತ ಚಳಿ ಇರುವುದರಿಂದ ಆರೋಗ್ಯದ ಮೇಲೆ…

2 hours ago

ಓದುಗರ ಪತ್ರ:  RTO ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ನಿಯಂತ್ರಿಸಿ

ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳಿಗೆ ಮಧ್ಯವರ್ತಿಗಳು ಹಾಗೂ ಚಾಲನಾ ತರಬೇತಿ ಶಾಲೆಗಳವರಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ…

2 hours ago