ಆಂದೋಲನ ಪುರವಣಿ

ಯೋಗ ಕ್ಷೇಮ : ವೀರ್ಯ ಸ್ಖಲನದ ಬಗ್ಗೆ ತಿಳಿಯಿರಿ

ಡಿ.ಬಿ. ಸತ್ಯನಾರಾಯಣ

ಪುರುಷರ ಲೈಂಗಿಕಾಂಗಗಳಲ್ಲಿರುವ ಲೈಂಗಿಕ ಗ್ರಂಥಿಗಳಿಂದ ಉತ್ಪತ್ತಿಯಾಗುವ ದ್ರವ ರೂಪದ ವಸ್ತುವನ್ನು ವೀರ್ಯ ಎನ್ನುತ್ತಾರೆ. ಇದು ಬಿಳಿ ಲೋಳೆಯಂತಹ ದ್ರವ ಪದಾರ್ಥ. ವೀರ್ಯಾಣುಗಳು ವೃಷಣದಲ್ಲಿ ಉತ್ಪತ್ತಿಯಾಗುತ್ತವೆ. ಇದರ ಜೊತೆಗೆ ವೀರ್ಯನಾಳ, ವೀರ್ಯಚೀಲ ಮತ್ತು ಪ್ರಾಸೆಟಿಟ್ ಗ್ರಂಥಿಗಳು ಸ್ರವಿಸುವ ರಸಗಳು ಮಿಶ್ರಣಗೊಂಡು ವೀರ್ಯವಾಗಿ ಹೊರ ಚೆಲ್ಲುವುದನ್ನು ಸರಳವಾಗಿ ವೀರ್ಯ ಸ್ಖಲನ ಎನ್ನಲಾಗುತ್ತದೆ.

ಒಂದು ಸಾರಿಗೆ ೨ರಿಂದ ೫ ಎಂಲ್‌ನಷ್ಟು ಹೊರ ಚೆಲ್ಲುವ ವೀರ್ಯದಲ್ಲಿ ಸುಮಾರು ೬೦ರಿಂದ ೧೨೦ ದಶ ಲಕ್ಷದಷ್ಟು ವೀರ್ಯಾಣುಗಳು ಇರುತ್ತವೆ. ಆದರೂ ಮಹಿಳೆಯರಲ್ಲಿ ಗರ್ಭಧಾರಣೆ ಯಶಸ್ವಿಯಾಗಲು ಏಕಮಾತ್ರ ವೀರ್ಯಾಣು ಸಾಕಾಗುತ್ತದೆ.

ವೀರ್ಯನಾಶ ಪುರುಷರ ನಿಶ್ಯಕ್ತಿಕಗೆ ಮೂಲ ಕಾರಣ ಎಂಬುದು ತಪ್ಪು ಅಭಿಪ್ರಾಯ. ಹಾಗಯೇ ವೀರ್ಯ ರಕ್ತಕ್ಕಿಂತ ಉತ್ಕೃಷ್ಟವಾದದ್ದು ಎಂಬ ಅಭಿಪ್ರಾಯವೂ ತಪ್ಪು. ಪ್ರಾಯದ ಹಂತ ತಲುಪಿದ ಮೇಲೆ ನಿರಂತರವಾಗಿ ವೀರ್ಯವು ಲೈಂಗಿಕ ಗ್ರಂಥಿಗಳಿಂದ ಉತ್ಪತ್ತಿಯಾಗುತ್ತಿರುತ್ತದೆ. ಲೈಂಗಿಕ ಬಯಕೆ ಅತಿಯಾದಾಗ ಅಥವಾ ಲೈಂಗಿಕವಾಗಿ ಮನಸ್ಸು ಯೋಚಿಸಲು ತೊಡಗಿದಾಗ ವೀರ್ಯದ ಉತ್ಪತ್ತಿ ಹೆಚ್ಚಾಗಿ ವೀರ್ಯ ಸ್ಖಲನವಾಗುವುದು ಸ್ವಾಭಾವಿಕ ಕ್ರಿಯೆ. ಈ ಸ್ವಾಭಾವಿಕ ಕ್ರಿಯೆ ಆಗಾಗ ಸಂಭವಿಸುತ್ತಿರುತ್ತದೆ. ಪುರುಷರ ಮನಸ್ಸು ಯಾವ ರೀತಿ ಲೈಂಗಿಕ ಆಸಕ್ತಿಗೆ ತೆರೆದುಕೊಳ್ಳುತ್ತದೆ ಎನ್ನುವುದರ ಆಧಾರದ ಮೇಲೆ ವೀರ್ಯ ಸ್ಖಲನ ಉಂಟಾಗುತ್ತಿರುತ್ತದೆ.

ಮಿಲನದ ಬಗ್ಗೆ ಯೋಚಿಸುವುದು, ಅಶ್ಲೀಲ ಚಿತ್ರಗಳನ್ನು ನೋಡುವುದು, ಗೆಳೆಯರೊಡನೆ ಕಾಮಕ್ಕೆ ಸಂಬಂಧಿಸಿದಂತೆ ಚರ್ಚೆ ಮಾಡುವುದರಿಂದ ಮನಸ್ಸಿನಲ್ಲಿ ಲೈಂಗಿಕ ಕ್ರಿಯೆಯ ಬಗ್ಗೆ ಆಸಕ್ತಿ ಉಂಟಾಗುತ್ತದೆ. ಇದೇ ಆಲೋಚನೆಯಲ್ಲಿ ಮಲಗಿಕೊಂಡಾಗ ಕನಸಿನಲ್ಲಿಯೂ ಇವೇ ಅಂಶಗಳು ಕಾಣಿಸಿಕೊಳ್ಳಬಹುದು. ಈ ವೇಳೆ ವೀರ್ಯ ಸ್ಖಲನವಾಗುವುದು ಸಹಜ. ಇದನ್ನು ಸಪ್ನ ಸ್ಖಲನ ಎಂದೂ ಕರೆಯುವುದುಂಟು.

ನಿಗದಿತವಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗುವವರು, ವಿವಾಹವಾಗಿ ಸಂಗಾತಿಯೊಡನೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳುವವರಿಗೆ ವೀರ್ಯ ಸ್ಖಲನವಾಗುವ ಸಾಧ್ಯತೆ ಕಡಿಮೆ. ಕೆಲವರಲ್ಲಿ ವಾರಕ್ಕೆ ಎರಡು ಮೂರು ಬಾರಿ ವೀರ್ಯ ಸ್ಖಲನವಾದರೆ ಮತ್ತೆ ಕೆಲವರಲ್ಲಿ ತುಂಬಾ ಅಪರೂಪಕ್ಕೆ ಈ ರೀತಿ ಆಗುವುದೂ ಸಹಜ.

ಮುಂದುವರಿಯುವುದು…

andolanait

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

9 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago