ಆಂದೋಲನ ಪುರವಣಿ

ಯೋಗ ಕ್ಷೇಮ : ವೀರ್ಯ ಸ್ಖಲನದ ಬಗ್ಗೆ ತಿಳಿಯಿರಿ

ಡಿ.ಬಿ. ಸತ್ಯನಾರಾಯಣ

ಪುರುಷರ ಲೈಂಗಿಕಾಂಗಗಳಲ್ಲಿರುವ ಲೈಂಗಿಕ ಗ್ರಂಥಿಗಳಿಂದ ಉತ್ಪತ್ತಿಯಾಗುವ ದ್ರವ ರೂಪದ ವಸ್ತುವನ್ನು ವೀರ್ಯ ಎನ್ನುತ್ತಾರೆ. ಇದು ಬಿಳಿ ಲೋಳೆಯಂತಹ ದ್ರವ ಪದಾರ್ಥ. ವೀರ್ಯಾಣುಗಳು ವೃಷಣದಲ್ಲಿ ಉತ್ಪತ್ತಿಯಾಗುತ್ತವೆ. ಇದರ ಜೊತೆಗೆ ವೀರ್ಯನಾಳ, ವೀರ್ಯಚೀಲ ಮತ್ತು ಪ್ರಾಸೆಟಿಟ್ ಗ್ರಂಥಿಗಳು ಸ್ರವಿಸುವ ರಸಗಳು ಮಿಶ್ರಣಗೊಂಡು ವೀರ್ಯವಾಗಿ ಹೊರ ಚೆಲ್ಲುವುದನ್ನು ಸರಳವಾಗಿ ವೀರ್ಯ ಸ್ಖಲನ ಎನ್ನಲಾಗುತ್ತದೆ.

ಒಂದು ಸಾರಿಗೆ ೨ರಿಂದ ೫ ಎಂಲ್‌ನಷ್ಟು ಹೊರ ಚೆಲ್ಲುವ ವೀರ್ಯದಲ್ಲಿ ಸುಮಾರು ೬೦ರಿಂದ ೧೨೦ ದಶ ಲಕ್ಷದಷ್ಟು ವೀರ್ಯಾಣುಗಳು ಇರುತ್ತವೆ. ಆದರೂ ಮಹಿಳೆಯರಲ್ಲಿ ಗರ್ಭಧಾರಣೆ ಯಶಸ್ವಿಯಾಗಲು ಏಕಮಾತ್ರ ವೀರ್ಯಾಣು ಸಾಕಾಗುತ್ತದೆ.

ವೀರ್ಯನಾಶ ಪುರುಷರ ನಿಶ್ಯಕ್ತಿಕಗೆ ಮೂಲ ಕಾರಣ ಎಂಬುದು ತಪ್ಪು ಅಭಿಪ್ರಾಯ. ಹಾಗಯೇ ವೀರ್ಯ ರಕ್ತಕ್ಕಿಂತ ಉತ್ಕೃಷ್ಟವಾದದ್ದು ಎಂಬ ಅಭಿಪ್ರಾಯವೂ ತಪ್ಪು. ಪ್ರಾಯದ ಹಂತ ತಲುಪಿದ ಮೇಲೆ ನಿರಂತರವಾಗಿ ವೀರ್ಯವು ಲೈಂಗಿಕ ಗ್ರಂಥಿಗಳಿಂದ ಉತ್ಪತ್ತಿಯಾಗುತ್ತಿರುತ್ತದೆ. ಲೈಂಗಿಕ ಬಯಕೆ ಅತಿಯಾದಾಗ ಅಥವಾ ಲೈಂಗಿಕವಾಗಿ ಮನಸ್ಸು ಯೋಚಿಸಲು ತೊಡಗಿದಾಗ ವೀರ್ಯದ ಉತ್ಪತ್ತಿ ಹೆಚ್ಚಾಗಿ ವೀರ್ಯ ಸ್ಖಲನವಾಗುವುದು ಸ್ವಾಭಾವಿಕ ಕ್ರಿಯೆ. ಈ ಸ್ವಾಭಾವಿಕ ಕ್ರಿಯೆ ಆಗಾಗ ಸಂಭವಿಸುತ್ತಿರುತ್ತದೆ. ಪುರುಷರ ಮನಸ್ಸು ಯಾವ ರೀತಿ ಲೈಂಗಿಕ ಆಸಕ್ತಿಗೆ ತೆರೆದುಕೊಳ್ಳುತ್ತದೆ ಎನ್ನುವುದರ ಆಧಾರದ ಮೇಲೆ ವೀರ್ಯ ಸ್ಖಲನ ಉಂಟಾಗುತ್ತಿರುತ್ತದೆ.

ಮಿಲನದ ಬಗ್ಗೆ ಯೋಚಿಸುವುದು, ಅಶ್ಲೀಲ ಚಿತ್ರಗಳನ್ನು ನೋಡುವುದು, ಗೆಳೆಯರೊಡನೆ ಕಾಮಕ್ಕೆ ಸಂಬಂಧಿಸಿದಂತೆ ಚರ್ಚೆ ಮಾಡುವುದರಿಂದ ಮನಸ್ಸಿನಲ್ಲಿ ಲೈಂಗಿಕ ಕ್ರಿಯೆಯ ಬಗ್ಗೆ ಆಸಕ್ತಿ ಉಂಟಾಗುತ್ತದೆ. ಇದೇ ಆಲೋಚನೆಯಲ್ಲಿ ಮಲಗಿಕೊಂಡಾಗ ಕನಸಿನಲ್ಲಿಯೂ ಇವೇ ಅಂಶಗಳು ಕಾಣಿಸಿಕೊಳ್ಳಬಹುದು. ಈ ವೇಳೆ ವೀರ್ಯ ಸ್ಖಲನವಾಗುವುದು ಸಹಜ. ಇದನ್ನು ಸಪ್ನ ಸ್ಖಲನ ಎಂದೂ ಕರೆಯುವುದುಂಟು.

ನಿಗದಿತವಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗುವವರು, ವಿವಾಹವಾಗಿ ಸಂಗಾತಿಯೊಡನೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳುವವರಿಗೆ ವೀರ್ಯ ಸ್ಖಲನವಾಗುವ ಸಾಧ್ಯತೆ ಕಡಿಮೆ. ಕೆಲವರಲ್ಲಿ ವಾರಕ್ಕೆ ಎರಡು ಮೂರು ಬಾರಿ ವೀರ್ಯ ಸ್ಖಲನವಾದರೆ ಮತ್ತೆ ಕೆಲವರಲ್ಲಿ ತುಂಬಾ ಅಪರೂಪಕ್ಕೆ ಈ ರೀತಿ ಆಗುವುದೂ ಸಹಜ.

ಮುಂದುವರಿಯುವುದು…

andolanait

Recent Posts

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

9 mins ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

4 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಆಸಿಡ್ ದಾಳಿಯ ಸಂತ್ರಸ್ತೆಯರನ್ನು ಸಂತೈಸುವ ‘ದಿ ನೆಸ್ಟ್ ಸಲೂನ್’

ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…

4 hours ago

ಜಿರಳೆಗಳು ಎದ್ದಿವೆ, ವ್ಯವಸ್ಥೆಯ ಗಟಾರ ತೊಳೆಯುವವರು ಯಾರು?

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ…

4 hours ago

ಅಕಾಲಿಕ ಮಳೆ; ಮಾವು ಇಳುವರಿ ಕುಂಠಿತ

ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…

4 hours ago