ಆಂದೋಲನ ಪುರವಣಿ

ಯೋಗ ಕ್ಷೇಮ : ವೀರ್ಯ ಸ್ಖಲನದ ಬಗ್ಗೆ ತಿಳಿಯಿರಿ

ಡಿ.ಬಿ. ಸತ್ಯನಾರಾಯಣ

ಪುರುಷರ ಲೈಂಗಿಕಾಂಗಗಳಲ್ಲಿರುವ ಲೈಂಗಿಕ ಗ್ರಂಥಿಗಳಿಂದ ಉತ್ಪತ್ತಿಯಾಗುವ ದ್ರವ ರೂಪದ ವಸ್ತುವನ್ನು ವೀರ್ಯ ಎನ್ನುತ್ತಾರೆ. ಇದು ಬಿಳಿ ಲೋಳೆಯಂತಹ ದ್ರವ ಪದಾರ್ಥ. ವೀರ್ಯಾಣುಗಳು ವೃಷಣದಲ್ಲಿ ಉತ್ಪತ್ತಿಯಾಗುತ್ತವೆ. ಇದರ ಜೊತೆಗೆ ವೀರ್ಯನಾಳ, ವೀರ್ಯಚೀಲ ಮತ್ತು ಪ್ರಾಸೆಟಿಟ್ ಗ್ರಂಥಿಗಳು ಸ್ರವಿಸುವ ರಸಗಳು ಮಿಶ್ರಣಗೊಂಡು ವೀರ್ಯವಾಗಿ ಹೊರ ಚೆಲ್ಲುವುದನ್ನು ಸರಳವಾಗಿ ವೀರ್ಯ ಸ್ಖಲನ ಎನ್ನಲಾಗುತ್ತದೆ.

ಒಂದು ಸಾರಿಗೆ ೨ರಿಂದ ೫ ಎಂಲ್‌ನಷ್ಟು ಹೊರ ಚೆಲ್ಲುವ ವೀರ್ಯದಲ್ಲಿ ಸುಮಾರು ೬೦ರಿಂದ ೧೨೦ ದಶ ಲಕ್ಷದಷ್ಟು ವೀರ್ಯಾಣುಗಳು ಇರುತ್ತವೆ. ಆದರೂ ಮಹಿಳೆಯರಲ್ಲಿ ಗರ್ಭಧಾರಣೆ ಯಶಸ್ವಿಯಾಗಲು ಏಕಮಾತ್ರ ವೀರ್ಯಾಣು ಸಾಕಾಗುತ್ತದೆ.

ವೀರ್ಯನಾಶ ಪುರುಷರ ನಿಶ್ಯಕ್ತಿಕಗೆ ಮೂಲ ಕಾರಣ ಎಂಬುದು ತಪ್ಪು ಅಭಿಪ್ರಾಯ. ಹಾಗಯೇ ವೀರ್ಯ ರಕ್ತಕ್ಕಿಂತ ಉತ್ಕೃಷ್ಟವಾದದ್ದು ಎಂಬ ಅಭಿಪ್ರಾಯವೂ ತಪ್ಪು. ಪ್ರಾಯದ ಹಂತ ತಲುಪಿದ ಮೇಲೆ ನಿರಂತರವಾಗಿ ವೀರ್ಯವು ಲೈಂಗಿಕ ಗ್ರಂಥಿಗಳಿಂದ ಉತ್ಪತ್ತಿಯಾಗುತ್ತಿರುತ್ತದೆ. ಲೈಂಗಿಕ ಬಯಕೆ ಅತಿಯಾದಾಗ ಅಥವಾ ಲೈಂಗಿಕವಾಗಿ ಮನಸ್ಸು ಯೋಚಿಸಲು ತೊಡಗಿದಾಗ ವೀರ್ಯದ ಉತ್ಪತ್ತಿ ಹೆಚ್ಚಾಗಿ ವೀರ್ಯ ಸ್ಖಲನವಾಗುವುದು ಸ್ವಾಭಾವಿಕ ಕ್ರಿಯೆ. ಈ ಸ್ವಾಭಾವಿಕ ಕ್ರಿಯೆ ಆಗಾಗ ಸಂಭವಿಸುತ್ತಿರುತ್ತದೆ. ಪುರುಷರ ಮನಸ್ಸು ಯಾವ ರೀತಿ ಲೈಂಗಿಕ ಆಸಕ್ತಿಗೆ ತೆರೆದುಕೊಳ್ಳುತ್ತದೆ ಎನ್ನುವುದರ ಆಧಾರದ ಮೇಲೆ ವೀರ್ಯ ಸ್ಖಲನ ಉಂಟಾಗುತ್ತಿರುತ್ತದೆ.

ಮಿಲನದ ಬಗ್ಗೆ ಯೋಚಿಸುವುದು, ಅಶ್ಲೀಲ ಚಿತ್ರಗಳನ್ನು ನೋಡುವುದು, ಗೆಳೆಯರೊಡನೆ ಕಾಮಕ್ಕೆ ಸಂಬಂಧಿಸಿದಂತೆ ಚರ್ಚೆ ಮಾಡುವುದರಿಂದ ಮನಸ್ಸಿನಲ್ಲಿ ಲೈಂಗಿಕ ಕ್ರಿಯೆಯ ಬಗ್ಗೆ ಆಸಕ್ತಿ ಉಂಟಾಗುತ್ತದೆ. ಇದೇ ಆಲೋಚನೆಯಲ್ಲಿ ಮಲಗಿಕೊಂಡಾಗ ಕನಸಿನಲ್ಲಿಯೂ ಇವೇ ಅಂಶಗಳು ಕಾಣಿಸಿಕೊಳ್ಳಬಹುದು. ಈ ವೇಳೆ ವೀರ್ಯ ಸ್ಖಲನವಾಗುವುದು ಸಹಜ. ಇದನ್ನು ಸಪ್ನ ಸ್ಖಲನ ಎಂದೂ ಕರೆಯುವುದುಂಟು.

ನಿಗದಿತವಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗುವವರು, ವಿವಾಹವಾಗಿ ಸಂಗಾತಿಯೊಡನೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳುವವರಿಗೆ ವೀರ್ಯ ಸ್ಖಲನವಾಗುವ ಸಾಧ್ಯತೆ ಕಡಿಮೆ. ಕೆಲವರಲ್ಲಿ ವಾರಕ್ಕೆ ಎರಡು ಮೂರು ಬಾರಿ ವೀರ್ಯ ಸ್ಖಲನವಾದರೆ ಮತ್ತೆ ಕೆಲವರಲ್ಲಿ ತುಂಬಾ ಅಪರೂಪಕ್ಕೆ ಈ ರೀತಿ ಆಗುವುದೂ ಸಹಜ.

ಮುಂದುವರಿಯುವುದು…

andolanait

Recent Posts

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

4 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

7 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

7 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರೋದ್ಯಮದತ್ತ ಕೇಂದ್ರದ ಗಮನ, ಅಧ್ಯಯನ ತಂಡ ರಚನೆ

ಭಾರತೀಯ ಚಿತ್ರೋದ್ಯಮದ ಉತ್ತೇಜನಕ್ಕಾಗಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮುಂದಾಗಿರುವ ಸುದ್ದಿ. ಚಿತ್ರರಂಗಕ್ಕೆ ಸಂಬಂಧಿಸಿದಂತೆ, ಚಿತ್ರಗಳನ್ನು ವರ್ಗೀಕರಿಸಿ, ಪ್ರಮಾಣಪತ್ರ…

7 hours ago

ಕೊಡಗು ಜಿಲ್ಲೆಯಲ್ಲಿ ನಮೂನೆ ವಿತರಣೆ ಕಾರ್ಯ ಪೂರ್ಣ

ನವೀನ್ ಡಿಸೋಜ ತ್ವರಿತಗತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ; ಒಟ್ಟು ೪,೬೮,೬೫೭ ನಮೂನೆ ವಿತರಣೆ ಮೂಲಕ ಶೇ.೧೦೦ ಪ್ರಗತಿ…

8 hours ago

ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ

ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡುವಿನದೊಡ್ಡಿ ಮತ್ತು ಅರ್ಧನಾರೀಪುರ ಗ್ರಾಮಗಳಿಗೆ ಗುರುವಾರ ಗ್ರಾಮ ಪಂಚಾಯಿತಿ ವತಿಯಿಂದ ಟ್ಯಾಂಕರ್…

8 hours ago