ಆಂದೋಲನ ಪುರವಣಿ

ಯೋಗ ಕ್ಷೇಮ : ಮಕ್ಕಳ ಮೊಬೈಲ್ ಬಳಕೆಗೆ ಕಡಿವಾಣ ಇರಲಿ

ಮಗು ಅಳುತ್ತಿದೆ ಎಂದರೆ ಮೊಬೈಲ್ ಕೊಡು ಎನ್ನುವ ಕಾಲಕ್ಕೆ ಬಂದು ಮುಟ್ಟಿದ್ದೇವೆ. ಎಳೆಯ ಮಕ್ಕಳಿಂದ ಮೊದಲ್ಗೊಂಡು ಪ್ರೌಢ ವಯಸ್ಕರ ವರೆಗೂ ಮೊಬೈಲ್ ಬೇಕೇ ಬೇಕು. ಆದರೆ ಇಂತಹ ಮಕ್ಕಳ ಕಣ್ಣಿನ ಪಾಲಿಗೆ ಅತಿಯಾದ ಮೊಬೈಲ್, ಕಂಪ್ಯೂಟರ್, ಲ್ಯಾಪ್‌ಟಾಪ್, ಟ್ಯಾಬ್‌ಗಳ ಬಳಕೆ ತೊಂದರೆ ತಂದೊಡ್ಡಬಹುದು.

ಹೆಚ್ಚಿನ ಸಮಯ ಮೊಬೈಲ್ ಸೇರಿ ಇತರ ಉಪಕರಣಗಳ ಪರದೆಗಳನ್ನು ವೀಕ್ಷಣೆ ಮಾಡುವುದರಿಂದ ಕಣ್ಣಿನ ರೆಟಿನಾ ಮೇಲೆ ಕೆಟ್ಟ ಪರಿಣಾಮ ಉಂಟಗುತ್ತದೆ. ಇದು ಮುಂದೆ ದೃಷ್ಟಿ ದೋಷಕ್ಕೆ ಎಡೆಮಾಡಿಕೊಡುವುದು ಖಚಿತ. ಇತ್ತೀಚಿನ ಅಧ್ಯಯನದ ಪ್ರಕಾರ ಶೇ.೩೦ರಿಂದ ೪೦ ರಷ್ಟು ಮಕ್ಕಳು ಕಣ್ಣಿನ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಹಾಗೆಂದು ಮಕ್ಕಳನ್ನು ಆಧುನಿಕ ತಂತ್ರಜ್ಞಾನಗಳೊಂದಿಗೆ ಬೆಸೆದುಕೊಳ್ಳುವಂತೆ ಮಾಡದೇ ಇರಲು ಸಾಧ್ಯವಿಲ್ಲ. ಹೀಗಾಗಿ ಕೆಲವಾರು ಅಂಶಗಳ ಪಾಲನೆ ಮಾಡುವುದರಿಂದ ಕಣ್ಣಿನ ಆರೋಗ್ಯದ ಕಡೆಗೂ ಗಮನ ನೀಡಬಹುದು.

* ದೀರ್ಘ ಕಾಲ ಡಿಜಿಟಲ್ ಪರದೆಗಳನ್ನು ನೋಡುವುದನ್ನು ತಪ್ಪಿಸಿ ಹೊರಗಿನ ಹಸಿರನ್ನು ನೋಡಲು ಮಕ್ಕಳನ್ನು ಪ್ರೋತ್ಸಾಹಿಸಬೇಕು.

* ಮಕ್ಕಳು ಪದೇ ಪದೆ ಕಣ್ಣುಜ್ಜದಂತೆ ಎಚ್ಚರ ವಹಿಸಿ, ಪ್ರತಿ ೨೦ ನಿಮಿಷಗಳಿಗೊಮ್ಮೆ ಮಕ್ಕಳ ಕಣ್ಣುಗಳಿಗೆ ವಿರಾಮ ನೀಡುವಂತೆ ಮಾಡಿ.

* ಕಂಪ್ಯೂಟರ್, ಲ್ಯಾಪ್ ಟಾಪ್ ಮತ್ತು ಟಿವಿ ಬಳಸುತ್ತಿದ್ದರೆ ಪರದೆಯಿಂದ ಮಕ್ಕಳು ಕನಿಷ್ಠ ೩೩ ಸೆ.ಮೀ ದೂರ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ.

* ಏನಾದರೂ ತೊಂದರೆ ಉಂಟಾಗುತ್ತಿದೆ ಎನ್ನಿಸಿದರೆ ಪ್ರಾರಂಭಿಕ ಹಂತದಲ್ಲಿಯೇ ಮಕ್ಕಳನ್ನು ನೇತ್ರ ವೈದ್ಯರ ಬಳಿ ಕರೆದೊ್ಂದುು ತಪಾಸಣೆ ಮಾಡಿಸಿ.

andolanait

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

13 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago