ಮಗು ಅಳುತ್ತಿದೆ ಎಂದರೆ ಮೊಬೈಲ್ ಕೊಡು ಎನ್ನುವ ಕಾಲಕ್ಕೆ ಬಂದು ಮುಟ್ಟಿದ್ದೇವೆ. ಎಳೆಯ ಮಕ್ಕಳಿಂದ ಮೊದಲ್ಗೊಂಡು ಪ್ರೌಢ ವಯಸ್ಕರ ವರೆಗೂ ಮೊಬೈಲ್ ಬೇಕೇ ಬೇಕು. ಆದರೆ ಇಂತಹ ಮಕ್ಕಳ ಕಣ್ಣಿನ ಪಾಲಿಗೆ ಅತಿಯಾದ ಮೊಬೈಲ್, ಕಂಪ್ಯೂಟರ್, ಲ್ಯಾಪ್ಟಾಪ್, ಟ್ಯಾಬ್ಗಳ ಬಳಕೆ ತೊಂದರೆ ತಂದೊಡ್ಡಬಹುದು.
ಹೆಚ್ಚಿನ ಸಮಯ ಮೊಬೈಲ್ ಸೇರಿ ಇತರ ಉಪಕರಣಗಳ ಪರದೆಗಳನ್ನು ವೀಕ್ಷಣೆ ಮಾಡುವುದರಿಂದ ಕಣ್ಣಿನ ರೆಟಿನಾ ಮೇಲೆ ಕೆಟ್ಟ ಪರಿಣಾಮ ಉಂಟಗುತ್ತದೆ. ಇದು ಮುಂದೆ ದೃಷ್ಟಿ ದೋಷಕ್ಕೆ ಎಡೆಮಾಡಿಕೊಡುವುದು ಖಚಿತ. ಇತ್ತೀಚಿನ ಅಧ್ಯಯನದ ಪ್ರಕಾರ ಶೇ.೩೦ರಿಂದ ೪೦ ರಷ್ಟು ಮಕ್ಕಳು ಕಣ್ಣಿನ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಹಾಗೆಂದು ಮಕ್ಕಳನ್ನು ಆಧುನಿಕ ತಂತ್ರಜ್ಞಾನಗಳೊಂದಿಗೆ ಬೆಸೆದುಕೊಳ್ಳುವಂತೆ ಮಾಡದೇ ಇರಲು ಸಾಧ್ಯವಿಲ್ಲ. ಹೀಗಾಗಿ ಕೆಲವಾರು ಅಂಶಗಳ ಪಾಲನೆ ಮಾಡುವುದರಿಂದ ಕಣ್ಣಿನ ಆರೋಗ್ಯದ ಕಡೆಗೂ ಗಮನ ನೀಡಬಹುದು.
* ದೀರ್ಘ ಕಾಲ ಡಿಜಿಟಲ್ ಪರದೆಗಳನ್ನು ನೋಡುವುದನ್ನು ತಪ್ಪಿಸಿ ಹೊರಗಿನ ಹಸಿರನ್ನು ನೋಡಲು ಮಕ್ಕಳನ್ನು ಪ್ರೋತ್ಸಾಹಿಸಬೇಕು.
* ಮಕ್ಕಳು ಪದೇ ಪದೆ ಕಣ್ಣುಜ್ಜದಂತೆ ಎಚ್ಚರ ವಹಿಸಿ, ಪ್ರತಿ ೨೦ ನಿಮಿಷಗಳಿಗೊಮ್ಮೆ ಮಕ್ಕಳ ಕಣ್ಣುಗಳಿಗೆ ವಿರಾಮ ನೀಡುವಂತೆ ಮಾಡಿ.
* ಕಂಪ್ಯೂಟರ್, ಲ್ಯಾಪ್ ಟಾಪ್ ಮತ್ತು ಟಿವಿ ಬಳಸುತ್ತಿದ್ದರೆ ಪರದೆಯಿಂದ ಮಕ್ಕಳು ಕನಿಷ್ಠ ೩೩ ಸೆ.ಮೀ ದೂರ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ.
* ಏನಾದರೂ ತೊಂದರೆ ಉಂಟಾಗುತ್ತಿದೆ ಎನ್ನಿಸಿದರೆ ಪ್ರಾರಂಭಿಕ ಹಂತದಲ್ಲಿಯೇ ಮಕ್ಕಳನ್ನು ನೇತ್ರ ವೈದ್ಯರ ಬಳಿ ಕರೆದೊ್ಂದುು ತಪಾಸಣೆ ಮಾಡಿಸಿ.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…