ಆಂದೋಲನ ಪುರವಣಿ

ಯೋಗ ಕ್ಷೇಮ : ಮಕ್ಕಳ ಮೊಬೈಲ್ ಬಳಕೆಗೆ ಕಡಿವಾಣ ಇರಲಿ

ಮಗು ಅಳುತ್ತಿದೆ ಎಂದರೆ ಮೊಬೈಲ್ ಕೊಡು ಎನ್ನುವ ಕಾಲಕ್ಕೆ ಬಂದು ಮುಟ್ಟಿದ್ದೇವೆ. ಎಳೆಯ ಮಕ್ಕಳಿಂದ ಮೊದಲ್ಗೊಂಡು ಪ್ರೌಢ ವಯಸ್ಕರ ವರೆಗೂ ಮೊಬೈಲ್ ಬೇಕೇ ಬೇಕು. ಆದರೆ ಇಂತಹ ಮಕ್ಕಳ ಕಣ್ಣಿನ ಪಾಲಿಗೆ ಅತಿಯಾದ ಮೊಬೈಲ್, ಕಂಪ್ಯೂಟರ್, ಲ್ಯಾಪ್‌ಟಾಪ್, ಟ್ಯಾಬ್‌ಗಳ ಬಳಕೆ ತೊಂದರೆ ತಂದೊಡ್ಡಬಹುದು.

ಹೆಚ್ಚಿನ ಸಮಯ ಮೊಬೈಲ್ ಸೇರಿ ಇತರ ಉಪಕರಣಗಳ ಪರದೆಗಳನ್ನು ವೀಕ್ಷಣೆ ಮಾಡುವುದರಿಂದ ಕಣ್ಣಿನ ರೆಟಿನಾ ಮೇಲೆ ಕೆಟ್ಟ ಪರಿಣಾಮ ಉಂಟಗುತ್ತದೆ. ಇದು ಮುಂದೆ ದೃಷ್ಟಿ ದೋಷಕ್ಕೆ ಎಡೆಮಾಡಿಕೊಡುವುದು ಖಚಿತ. ಇತ್ತೀಚಿನ ಅಧ್ಯಯನದ ಪ್ರಕಾರ ಶೇ.೩೦ರಿಂದ ೪೦ ರಷ್ಟು ಮಕ್ಕಳು ಕಣ್ಣಿನ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಹಾಗೆಂದು ಮಕ್ಕಳನ್ನು ಆಧುನಿಕ ತಂತ್ರಜ್ಞಾನಗಳೊಂದಿಗೆ ಬೆಸೆದುಕೊಳ್ಳುವಂತೆ ಮಾಡದೇ ಇರಲು ಸಾಧ್ಯವಿಲ್ಲ. ಹೀಗಾಗಿ ಕೆಲವಾರು ಅಂಶಗಳ ಪಾಲನೆ ಮಾಡುವುದರಿಂದ ಕಣ್ಣಿನ ಆರೋಗ್ಯದ ಕಡೆಗೂ ಗಮನ ನೀಡಬಹುದು.

* ದೀರ್ಘ ಕಾಲ ಡಿಜಿಟಲ್ ಪರದೆಗಳನ್ನು ನೋಡುವುದನ್ನು ತಪ್ಪಿಸಿ ಹೊರಗಿನ ಹಸಿರನ್ನು ನೋಡಲು ಮಕ್ಕಳನ್ನು ಪ್ರೋತ್ಸಾಹಿಸಬೇಕು.

* ಮಕ್ಕಳು ಪದೇ ಪದೆ ಕಣ್ಣುಜ್ಜದಂತೆ ಎಚ್ಚರ ವಹಿಸಿ, ಪ್ರತಿ ೨೦ ನಿಮಿಷಗಳಿಗೊಮ್ಮೆ ಮಕ್ಕಳ ಕಣ್ಣುಗಳಿಗೆ ವಿರಾಮ ನೀಡುವಂತೆ ಮಾಡಿ.

* ಕಂಪ್ಯೂಟರ್, ಲ್ಯಾಪ್ ಟಾಪ್ ಮತ್ತು ಟಿವಿ ಬಳಸುತ್ತಿದ್ದರೆ ಪರದೆಯಿಂದ ಮಕ್ಕಳು ಕನಿಷ್ಠ ೩೩ ಸೆ.ಮೀ ದೂರ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ.

* ಏನಾದರೂ ತೊಂದರೆ ಉಂಟಾಗುತ್ತಿದೆ ಎನ್ನಿಸಿದರೆ ಪ್ರಾರಂಭಿಕ ಹಂತದಲ್ಲಿಯೇ ಮಕ್ಕಳನ್ನು ನೇತ್ರ ವೈದ್ಯರ ಬಳಿ ಕರೆದೊ್ಂದುು ತಪಾಸಣೆ ಮಾಡಿಸಿ.

andolanait

Recent Posts

ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನ: ಡಿಸಿಎಂ ಅಜಿತ್‌ ಪವಾರ್‌ ಸೇರಿ 5 ಮಂದಿ ದುರ್ಮರಣ

ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…

20 mins ago

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

4 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

4 hours ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

4 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

4 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

4 hours ago