ಮಗು ಅಳುತ್ತಿದೆ ಎಂದರೆ ಮೊಬೈಲ್ ಕೊಡು ಎನ್ನುವ ಕಾಲಕ್ಕೆ ಬಂದು ಮುಟ್ಟಿದ್ದೇವೆ. ಎಳೆಯ ಮಕ್ಕಳಿಂದ ಮೊದಲ್ಗೊಂಡು ಪ್ರೌಢ ವಯಸ್ಕರ ವರೆಗೂ ಮೊಬೈಲ್ ಬೇಕೇ ಬೇಕು. ಆದರೆ ಇಂತಹ ಮಕ್ಕಳ ಕಣ್ಣಿನ ಪಾಲಿಗೆ ಅತಿಯಾದ ಮೊಬೈಲ್, ಕಂಪ್ಯೂಟರ್, ಲ್ಯಾಪ್ಟಾಪ್, ಟ್ಯಾಬ್ಗಳ ಬಳಕೆ ತೊಂದರೆ ತಂದೊಡ್ಡಬಹುದು.
ಹೆಚ್ಚಿನ ಸಮಯ ಮೊಬೈಲ್ ಸೇರಿ ಇತರ ಉಪಕರಣಗಳ ಪರದೆಗಳನ್ನು ವೀಕ್ಷಣೆ ಮಾಡುವುದರಿಂದ ಕಣ್ಣಿನ ರೆಟಿನಾ ಮೇಲೆ ಕೆಟ್ಟ ಪರಿಣಾಮ ಉಂಟಗುತ್ತದೆ. ಇದು ಮುಂದೆ ದೃಷ್ಟಿ ದೋಷಕ್ಕೆ ಎಡೆಮಾಡಿಕೊಡುವುದು ಖಚಿತ. ಇತ್ತೀಚಿನ ಅಧ್ಯಯನದ ಪ್ರಕಾರ ಶೇ.೩೦ರಿಂದ ೪೦ ರಷ್ಟು ಮಕ್ಕಳು ಕಣ್ಣಿನ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಹಾಗೆಂದು ಮಕ್ಕಳನ್ನು ಆಧುನಿಕ ತಂತ್ರಜ್ಞಾನಗಳೊಂದಿಗೆ ಬೆಸೆದುಕೊಳ್ಳುವಂತೆ ಮಾಡದೇ ಇರಲು ಸಾಧ್ಯವಿಲ್ಲ. ಹೀಗಾಗಿ ಕೆಲವಾರು ಅಂಶಗಳ ಪಾಲನೆ ಮಾಡುವುದರಿಂದ ಕಣ್ಣಿನ ಆರೋಗ್ಯದ ಕಡೆಗೂ ಗಮನ ನೀಡಬಹುದು.
* ದೀರ್ಘ ಕಾಲ ಡಿಜಿಟಲ್ ಪರದೆಗಳನ್ನು ನೋಡುವುದನ್ನು ತಪ್ಪಿಸಿ ಹೊರಗಿನ ಹಸಿರನ್ನು ನೋಡಲು ಮಕ್ಕಳನ್ನು ಪ್ರೋತ್ಸಾಹಿಸಬೇಕು.
* ಮಕ್ಕಳು ಪದೇ ಪದೆ ಕಣ್ಣುಜ್ಜದಂತೆ ಎಚ್ಚರ ವಹಿಸಿ, ಪ್ರತಿ ೨೦ ನಿಮಿಷಗಳಿಗೊಮ್ಮೆ ಮಕ್ಕಳ ಕಣ್ಣುಗಳಿಗೆ ವಿರಾಮ ನೀಡುವಂತೆ ಮಾಡಿ.
* ಕಂಪ್ಯೂಟರ್, ಲ್ಯಾಪ್ ಟಾಪ್ ಮತ್ತು ಟಿವಿ ಬಳಸುತ್ತಿದ್ದರೆ ಪರದೆಯಿಂದ ಮಕ್ಕಳು ಕನಿಷ್ಠ ೩೩ ಸೆ.ಮೀ ದೂರ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ.
* ಏನಾದರೂ ತೊಂದರೆ ಉಂಟಾಗುತ್ತಿದೆ ಎನ್ನಿಸಿದರೆ ಪ್ರಾರಂಭಿಕ ಹಂತದಲ್ಲಿಯೇ ಮಕ್ಕಳನ್ನು ನೇತ್ರ ವೈದ್ಯರ ಬಳಿ ಕರೆದೊ್ಂದುು ತಪಾಸಣೆ ಮಾಡಿಸಿ.
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…