ಆಂದೋಲನ ಪುರವಣಿ

ಯೋಗ ಕ್ಷೇಮ : ಮಕ್ಕಳ ಮೊಬೈಲ್ ಬಳಕೆಗೆ ಕಡಿವಾಣ ಇರಲಿ

ಮಗು ಅಳುತ್ತಿದೆ ಎಂದರೆ ಮೊಬೈಲ್ ಕೊಡು ಎನ್ನುವ ಕಾಲಕ್ಕೆ ಬಂದು ಮುಟ್ಟಿದ್ದೇವೆ. ಎಳೆಯ ಮಕ್ಕಳಿಂದ ಮೊದಲ್ಗೊಂಡು ಪ್ರೌಢ ವಯಸ್ಕರ ವರೆಗೂ ಮೊಬೈಲ್ ಬೇಕೇ ಬೇಕು. ಆದರೆ ಇಂತಹ ಮಕ್ಕಳ ಕಣ್ಣಿನ ಪಾಲಿಗೆ ಅತಿಯಾದ ಮೊಬೈಲ್, ಕಂಪ್ಯೂಟರ್, ಲ್ಯಾಪ್‌ಟಾಪ್, ಟ್ಯಾಬ್‌ಗಳ ಬಳಕೆ ತೊಂದರೆ ತಂದೊಡ್ಡಬಹುದು.

ಹೆಚ್ಚಿನ ಸಮಯ ಮೊಬೈಲ್ ಸೇರಿ ಇತರ ಉಪಕರಣಗಳ ಪರದೆಗಳನ್ನು ವೀಕ್ಷಣೆ ಮಾಡುವುದರಿಂದ ಕಣ್ಣಿನ ರೆಟಿನಾ ಮೇಲೆ ಕೆಟ್ಟ ಪರಿಣಾಮ ಉಂಟಗುತ್ತದೆ. ಇದು ಮುಂದೆ ದೃಷ್ಟಿ ದೋಷಕ್ಕೆ ಎಡೆಮಾಡಿಕೊಡುವುದು ಖಚಿತ. ಇತ್ತೀಚಿನ ಅಧ್ಯಯನದ ಪ್ರಕಾರ ಶೇ.೩೦ರಿಂದ ೪೦ ರಷ್ಟು ಮಕ್ಕಳು ಕಣ್ಣಿನ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಹಾಗೆಂದು ಮಕ್ಕಳನ್ನು ಆಧುನಿಕ ತಂತ್ರಜ್ಞಾನಗಳೊಂದಿಗೆ ಬೆಸೆದುಕೊಳ್ಳುವಂತೆ ಮಾಡದೇ ಇರಲು ಸಾಧ್ಯವಿಲ್ಲ. ಹೀಗಾಗಿ ಕೆಲವಾರು ಅಂಶಗಳ ಪಾಲನೆ ಮಾಡುವುದರಿಂದ ಕಣ್ಣಿನ ಆರೋಗ್ಯದ ಕಡೆಗೂ ಗಮನ ನೀಡಬಹುದು.

* ದೀರ್ಘ ಕಾಲ ಡಿಜಿಟಲ್ ಪರದೆಗಳನ್ನು ನೋಡುವುದನ್ನು ತಪ್ಪಿಸಿ ಹೊರಗಿನ ಹಸಿರನ್ನು ನೋಡಲು ಮಕ್ಕಳನ್ನು ಪ್ರೋತ್ಸಾಹಿಸಬೇಕು.

* ಮಕ್ಕಳು ಪದೇ ಪದೆ ಕಣ್ಣುಜ್ಜದಂತೆ ಎಚ್ಚರ ವಹಿಸಿ, ಪ್ರತಿ ೨೦ ನಿಮಿಷಗಳಿಗೊಮ್ಮೆ ಮಕ್ಕಳ ಕಣ್ಣುಗಳಿಗೆ ವಿರಾಮ ನೀಡುವಂತೆ ಮಾಡಿ.

* ಕಂಪ್ಯೂಟರ್, ಲ್ಯಾಪ್ ಟಾಪ್ ಮತ್ತು ಟಿವಿ ಬಳಸುತ್ತಿದ್ದರೆ ಪರದೆಯಿಂದ ಮಕ್ಕಳು ಕನಿಷ್ಠ ೩೩ ಸೆ.ಮೀ ದೂರ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ.

* ಏನಾದರೂ ತೊಂದರೆ ಉಂಟಾಗುತ್ತಿದೆ ಎನ್ನಿಸಿದರೆ ಪ್ರಾರಂಭಿಕ ಹಂತದಲ್ಲಿಯೇ ಮಕ್ಕಳನ್ನು ನೇತ್ರ ವೈದ್ಯರ ಬಳಿ ಕರೆದೊ್ಂದುು ತಪಾಸಣೆ ಮಾಡಿಸಿ.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

6 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

15 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

15 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

15 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

17 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

17 hours ago