ಆಂದೋಲನ ಪುರವಣಿ

ಯೋಗ ಕ್ಷೇಮ : ಬರಲಿರುವ ಚಳಿಗಾಲಕ್ಕೆ ತುಟಿಗಳ ಪೋಷಣೆ ಮಾಡಿ

ಇನ್ನೇನು ಚಳಿಗಾಲವನ್ನು ಆಹ್ವಾನ ಮಾಡಲಿದ್ದೇವೆ. ಈಗಿರುವಾಗ ಚರ್ಮದ ಕಾಳಜಿ ಅತಿ ಅಗತ್ಯ. ಅದರಲ್ಲಿಯೂ ನಮ್ಮ ತುಟಿಗಳನ್ನು ಚೆನ್ನಾಗಿ ಪೋಷಣೆ ಮಾಡುವುದು ಅತ್ಯವಶ್ಯಕ. ಇಲ್ಲದೇ ಇದ್ದರೆ ತುಟಿಗಳು ಒಡೆದುಕೊಂಡು ಸಮಸ್ಯೆಗಳನ್ನು ತಂದೊಡ್ಡುತ್ತವೆ.


ಚಳಿಗಾಲದಲ್ಲಿ ವಾತಾವಣರದಲ್ಲಿ ಆರ್ದತೆ ಕಡಿಮೆ ಇರುವುದರಿಂದ ಇದು ನೇರವಾಗಿ ಚರ್ಮ ಮತ್ತು ತುಟಿಗಳ ಮೇಲೆ ಪರಿಣಾಮ ಬೀರುತ್ತದೆ. ತುಟಿಗಳು ಒಡೆದುಕೊಳ್ಳುವುದು, ಕೆಲವು ವೇಳೆಯಲ್ಲಿ ಬಿರುಕು ಬಿಡುವುದೂ ಸಾಮಾನ್ಯ. ಈ ವೇಳೆಯಲ್ಲಿ ಸಿಂಪಲ್ ಮನೆಮದ್ದು ಟ್ರೈ ಮಾಡಿದರೆ ಸಮಸ್ಯೆಗೆ ಪರಿಹಾರವಾದೀತು.


ಕೊಬ್ಬರಿ ಎಣ್ಣೆ

ಕೊಬ್ಬರಿ ಎಣ್ಣೆ ಹಲವು ಬಗೆಯಲ್ಲಿ ಆರೋಗ್ಯಕ್ಕೆ ಪೂರಕ. ಚರ್ಮದ ಆರೋಗ್ಯದ ದೃಷ್ಟಿಯಿಂದಲೂ ಇದು ಒಳ್ಳೆಯ ಔಷಧ. ರಾತ್ರಿ ಮಲಗುವ ವೇಳೆಯಲ್ಲಿ ಕೊಬ್ಬರಿ ಎಣ್ಣೆಯನ್ನು ಮೈಗೆ, ಕೈ ಕಾಲುಗಳಿಗೆ ತೆಳುವಾಗಿ ಹಚ್ಚುವುದರಿಂದ ಚರ್ಮದ ಆರೋಗ್ಯ ಚೆನ್ನಾಗಿ ಇರುತ್ತದೆ. ಇದರೊಂದಿಗೆ ತುಟಿಗಳಿಗೂ ಹಚ್ಚುವುದರಿಂದ ತುಟಿಗಳು ಬೇಗನೇ ಒಣಗುವುದಿಲ್ಲ. ಇದರಿಂದ ಒಡೆದುಕೊಳ್ಳುವುದೂ ಇಲ್ಲ.


ಆಲೋವೆರಾ

ಇಂದು ಮಾರುಕಟ್ಟೆಯಲ್ಲಿ ಆಲೋವೆರಾ ಜೆಲ್‌ಗಳು ಸಾಕಷ್ಟು ಸಿಗುತ್ತವೆ. ಇದರ ಜೊತೆಗೆ ನೈಸರ್ಗಿಕವಾಗಿಯೂ ಆಲೋವೆರಾ ಸಿಗುತ್ತದೆ. ಇವುಗಳ ಲೋಳೆಯನ್ನು ಸಂಗ್ರಹ ಮಾಡಿ ತುಟಿಗಳಿಗೆ, ಚರ್ಮಗಳಿಗೆ ಹಚ್ಚುವುದು ಸೂಕ್ತ. ಇದು ಚರ್ಮ ಮತ್ತು ತುಟಿಗಳ ಮೇಲೆ ತಾವಾಂಶ ಹೆಚ್ಚಿನ ಸಮಯ ಇರುವಂತೆ ನೋಡಿಕೊಳ್ಳುತ್ತದೆ. ಇದರಿಂದ ತುಟಿಗಳು ಸುರಕ್ಷಿತವಾಗಿರುತ್ತವೆ.


ಹಾಲಿನ ಕೆನೆ, ತುಪ್ಪ

ರಾತ್ರಿ ಮಲಗುವ ವೇಳೆಯಲ್ಲಿ ತುಟಿಗಳ ಮೇಲೆ ಹಾಲಿನ ಕೆನೆ ಅಥವಾ ತುಪ್ಪವನ್ನು ತೆಳುವಾಗಿ ಹಚ್ಚುವುದು ಒಳ್ಳೆಯದ್ದು. ಇದರಲ್ಲಿ ಇರುವ ಜಿಡ್ಡಿನ ಅಂಶವು ತುಟಿಗಳನ್ನು ಮೃದು ಮಾಡುತ್ತದೆ. ಅಲ್ಲದೇ ಶುಷ್ಕತೆಯನ್ನು ನಿವಾರಿಸಿ ತೇವಾಂಶ ಉಳಿದುಕೊಳ್ಳುವಂತೆ ಮಾಡುತ್ತದೆ.


ಸಕ್ಕರೆ ಲೇಪನ

ಒಂದು ವೇಳೆ ತುಟಿಗಳು ಈಗಾಗಲೇ ಒಡೆದುಕೊಂಡಿದ್ದರೆ ತುಟಿಗಳಿಗೆ ತೆಳುವಾಗಿ ಸಕ್ಕರೆಯನ್ನು ಅಂಟಿಸಿಕೊಳ್ಳುವುದು ಒಳ್ಳೆಯದ್ದು. ಇದು ಈಗಾಗಲೇ ಒಡೆದಿರುವ ತುಟಿಯ ಮೇಲಿನ ಚರ್ಮವು ಬೀಳಲು ಸಹಕರಿಸುತ್ತದೆ. ಅಲ್ಲದೇ ಸಣ್ಣ ಪ್ರಮಾಣದ ಉರಿ ಇದ್ದರೆ ಅದು ಕಡಿಮೆಯಾಗುತ್ತದೆ.


ವ್ಯಾಸಲೀನ್ ಬಳಕೆ

ಇಂದು ಮಾರುಕಟ್ಟೆಯಲ್ಲಿ ಸಾಕಷ್ಟು ಬಗೆಯ ವ್ಯಾಸಲೀನ್‌ಗಳು ಲಭ್ಯ. ಕೆಲವನ್ನು ಚರ್ಮಕ್ಕೆ ಮಾತ್ರ ಲೇಪಿಸಬಹುದು. ತುಟಿಗಳಿಗಾಗಿಯೇ ಕೆಲವಾರು ಉತ್ಪನ್ನಗಳು ಲಭ್ಯವಿದ್ದು, ಅವುಗಳ ಬಳಕೆ ಮಾಡಬಹುದು. ಅಲ್ಲದೇ ಹೆಚ್ಚಿನ ಪ್ರಮಾಣದ ನೀರಿನ ಸೇವನೆಯಿಂದಲೂ ತುಟಿಗಳ ರಕ್ಷಣೆ ಸಾಧ್ಯ. ಹೆಚ್ಚು ನೀರು ಸೇವಿಸುವುದರಿಂದ ದೇಹದಲ್ಲಿ ತೇವಾಂಶ ಉಳಿಯುತ್ತದೆ. ಇದು ಚರ್ಮದ ರಕ್ಷಣೆಗೆ ಪೂರಕ.

andolanait

Recent Posts

ನೊಂದ ಪುರುಷರ ಹಕ್ಕುಗಳ ರಕ್ಷಣೆಗೆ ಆಯೋಗ ರಚಿಸಿ ; ಎ.ಎಚ್.ವಿಶ್ವನಾಥ್‌

ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…

4 hours ago

ಮೈಸೂರು | ಎನ್‌.ಆರ್‌.ಕ್ಷೇತ್ರದಲ್ಲಿ ನಿಯಮಬಾಹಿರ ಎಸ್‌ಐಆರ್‌ : ಸಂಸದ ಯದುವೀರ್ ಆರೋಪ

ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…

4 hours ago

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

9 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

11 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

13 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

13 hours ago