ಆಂದೋಲನ ಪುರವಣಿ

ಯೋಗ ಕ್ಷೇಮ : ಬರಲಿರುವ ಚಳಿಗಾಲಕ್ಕೆ ತುಟಿಗಳ ಪೋಷಣೆ ಮಾಡಿ

ಇನ್ನೇನು ಚಳಿಗಾಲವನ್ನು ಆಹ್ವಾನ ಮಾಡಲಿದ್ದೇವೆ. ಈಗಿರುವಾಗ ಚರ್ಮದ ಕಾಳಜಿ ಅತಿ ಅಗತ್ಯ. ಅದರಲ್ಲಿಯೂ ನಮ್ಮ ತುಟಿಗಳನ್ನು ಚೆನ್ನಾಗಿ ಪೋಷಣೆ ಮಾಡುವುದು ಅತ್ಯವಶ್ಯಕ. ಇಲ್ಲದೇ ಇದ್ದರೆ ತುಟಿಗಳು ಒಡೆದುಕೊಂಡು ಸಮಸ್ಯೆಗಳನ್ನು ತಂದೊಡ್ಡುತ್ತವೆ.


ಚಳಿಗಾಲದಲ್ಲಿ ವಾತಾವಣರದಲ್ಲಿ ಆರ್ದತೆ ಕಡಿಮೆ ಇರುವುದರಿಂದ ಇದು ನೇರವಾಗಿ ಚರ್ಮ ಮತ್ತು ತುಟಿಗಳ ಮೇಲೆ ಪರಿಣಾಮ ಬೀರುತ್ತದೆ. ತುಟಿಗಳು ಒಡೆದುಕೊಳ್ಳುವುದು, ಕೆಲವು ವೇಳೆಯಲ್ಲಿ ಬಿರುಕು ಬಿಡುವುದೂ ಸಾಮಾನ್ಯ. ಈ ವೇಳೆಯಲ್ಲಿ ಸಿಂಪಲ್ ಮನೆಮದ್ದು ಟ್ರೈ ಮಾಡಿದರೆ ಸಮಸ್ಯೆಗೆ ಪರಿಹಾರವಾದೀತು.


ಕೊಬ್ಬರಿ ಎಣ್ಣೆ

ಕೊಬ್ಬರಿ ಎಣ್ಣೆ ಹಲವು ಬಗೆಯಲ್ಲಿ ಆರೋಗ್ಯಕ್ಕೆ ಪೂರಕ. ಚರ್ಮದ ಆರೋಗ್ಯದ ದೃಷ್ಟಿಯಿಂದಲೂ ಇದು ಒಳ್ಳೆಯ ಔಷಧ. ರಾತ್ರಿ ಮಲಗುವ ವೇಳೆಯಲ್ಲಿ ಕೊಬ್ಬರಿ ಎಣ್ಣೆಯನ್ನು ಮೈಗೆ, ಕೈ ಕಾಲುಗಳಿಗೆ ತೆಳುವಾಗಿ ಹಚ್ಚುವುದರಿಂದ ಚರ್ಮದ ಆರೋಗ್ಯ ಚೆನ್ನಾಗಿ ಇರುತ್ತದೆ. ಇದರೊಂದಿಗೆ ತುಟಿಗಳಿಗೂ ಹಚ್ಚುವುದರಿಂದ ತುಟಿಗಳು ಬೇಗನೇ ಒಣಗುವುದಿಲ್ಲ. ಇದರಿಂದ ಒಡೆದುಕೊಳ್ಳುವುದೂ ಇಲ್ಲ.


ಆಲೋವೆರಾ

ಇಂದು ಮಾರುಕಟ್ಟೆಯಲ್ಲಿ ಆಲೋವೆರಾ ಜೆಲ್‌ಗಳು ಸಾಕಷ್ಟು ಸಿಗುತ್ತವೆ. ಇದರ ಜೊತೆಗೆ ನೈಸರ್ಗಿಕವಾಗಿಯೂ ಆಲೋವೆರಾ ಸಿಗುತ್ತದೆ. ಇವುಗಳ ಲೋಳೆಯನ್ನು ಸಂಗ್ರಹ ಮಾಡಿ ತುಟಿಗಳಿಗೆ, ಚರ್ಮಗಳಿಗೆ ಹಚ್ಚುವುದು ಸೂಕ್ತ. ಇದು ಚರ್ಮ ಮತ್ತು ತುಟಿಗಳ ಮೇಲೆ ತಾವಾಂಶ ಹೆಚ್ಚಿನ ಸಮಯ ಇರುವಂತೆ ನೋಡಿಕೊಳ್ಳುತ್ತದೆ. ಇದರಿಂದ ತುಟಿಗಳು ಸುರಕ್ಷಿತವಾಗಿರುತ್ತವೆ.


ಹಾಲಿನ ಕೆನೆ, ತುಪ್ಪ

ರಾತ್ರಿ ಮಲಗುವ ವೇಳೆಯಲ್ಲಿ ತುಟಿಗಳ ಮೇಲೆ ಹಾಲಿನ ಕೆನೆ ಅಥವಾ ತುಪ್ಪವನ್ನು ತೆಳುವಾಗಿ ಹಚ್ಚುವುದು ಒಳ್ಳೆಯದ್ದು. ಇದರಲ್ಲಿ ಇರುವ ಜಿಡ್ಡಿನ ಅಂಶವು ತುಟಿಗಳನ್ನು ಮೃದು ಮಾಡುತ್ತದೆ. ಅಲ್ಲದೇ ಶುಷ್ಕತೆಯನ್ನು ನಿವಾರಿಸಿ ತೇವಾಂಶ ಉಳಿದುಕೊಳ್ಳುವಂತೆ ಮಾಡುತ್ತದೆ.


ಸಕ್ಕರೆ ಲೇಪನ

ಒಂದು ವೇಳೆ ತುಟಿಗಳು ಈಗಾಗಲೇ ಒಡೆದುಕೊಂಡಿದ್ದರೆ ತುಟಿಗಳಿಗೆ ತೆಳುವಾಗಿ ಸಕ್ಕರೆಯನ್ನು ಅಂಟಿಸಿಕೊಳ್ಳುವುದು ಒಳ್ಳೆಯದ್ದು. ಇದು ಈಗಾಗಲೇ ಒಡೆದಿರುವ ತುಟಿಯ ಮೇಲಿನ ಚರ್ಮವು ಬೀಳಲು ಸಹಕರಿಸುತ್ತದೆ. ಅಲ್ಲದೇ ಸಣ್ಣ ಪ್ರಮಾಣದ ಉರಿ ಇದ್ದರೆ ಅದು ಕಡಿಮೆಯಾಗುತ್ತದೆ.


ವ್ಯಾಸಲೀನ್ ಬಳಕೆ

ಇಂದು ಮಾರುಕಟ್ಟೆಯಲ್ಲಿ ಸಾಕಷ್ಟು ಬಗೆಯ ವ್ಯಾಸಲೀನ್‌ಗಳು ಲಭ್ಯ. ಕೆಲವನ್ನು ಚರ್ಮಕ್ಕೆ ಮಾತ್ರ ಲೇಪಿಸಬಹುದು. ತುಟಿಗಳಿಗಾಗಿಯೇ ಕೆಲವಾರು ಉತ್ಪನ್ನಗಳು ಲಭ್ಯವಿದ್ದು, ಅವುಗಳ ಬಳಕೆ ಮಾಡಬಹುದು. ಅಲ್ಲದೇ ಹೆಚ್ಚಿನ ಪ್ರಮಾಣದ ನೀರಿನ ಸೇವನೆಯಿಂದಲೂ ತುಟಿಗಳ ರಕ್ಷಣೆ ಸಾಧ್ಯ. ಹೆಚ್ಚು ನೀರು ಸೇವಿಸುವುದರಿಂದ ದೇಹದಲ್ಲಿ ತೇವಾಂಶ ಉಳಿಯುತ್ತದೆ. ಇದು ಚರ್ಮದ ರಕ್ಷಣೆಗೆ ಪೂರಕ.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

14 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

15 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

15 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

17 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

17 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

17 hours ago