ಕೊಲೆಸ್ಟ್ರಾಲ್ ಕಡಿಮೆ ಮಾಡುವ ಸೇಬು !: ಕೊಲೆಸ್ಟ್ರಾಲ್ ನಮ್ಮ ರಕ್ತದಲ್ಲಿರುವ ಮೇಣದಂತಹ ವಸ್ತು. ಇದು ಜೀವಕೋಶಗಳು ಮತ್ತು ಹಾರ್ಮೋನುಗಳನ್ನು ತಯಾರಿಸಲು ಸಹಾಯ ಮಾಡುತ್ತದೆ. ಆದರೆ ಅದರ ಪ್ರಮಾಣವು ಸಾಮಾನ್ಯಕ್ಕಿಂತ ಹೆಚ್ಚಿದ್ದರೆ, ಅದು ರಕ್ತದ ರಕ್ತನಾಳಗಳಲ್ಲಿ ಸಂಗ್ರಹಗೊಳ್ಳುತ್ತದೆ, ಇದರಿಂದಾಗಿ ರಕ್ತದ ಹರಿವಿನ ಮೇಲೆ ಪರಿಣಾಮ ಉಂಟು ಮಾಡುತ್ತದೆ.
ಇದರಿಂದಾಗಿ, ಪಾರ್ಶ್ವವಾಯು ಮತ್ತು ಹೃದಯಾಘಾತ ಸಂಭವಿಸುವ ಅಪಾಯವು ಹೆಚ್ಚಾಗುತ್ತದೆ. ಹೀಗಾಗಿ, ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ.ಕೊಲೆಸ್ಟ್ರಾಲ್ ಪ್ರಸ್ತುತ ದಿನಗಳಲ್ಲಿನ ಆಹಾರ ಶೈಲಿಯಿಂದಾಗಿ ಸರ್ವೇ ಸಾಮಾನ್ಯವೆನಿಸಿದೆ.
ಒಂದು ವೇಳೆ ಯಾರಾದರೂ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿದ್ದರೆ ಟೆನ್ಷನ್ ತೆಗೆದುಕೊಳ್ಳುವ ಅಗತ್ಯವಿಲ್ಲ. ಬಹಳ ಸುಲಭ ಮಾರ್ಗದಿಂದ ಮನೆಯಲ್ಲಿಯೇ ಕುಳಿತು ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಸುಲಭವಾಗಿ ಕಡಿಮೆ ಮಾಡಬಹುದು. ಅಥವಾ ನಿಯಂತ್ರಣದಲ್ಲಿಟ್ಟುಕೊಳ್ಳಬಹುದು. ದಿನ ನಿತ್ಯದ ಆಹಾರದಲ್ಲಿ ಸೇಬು ಹಣ್ಣೂ ಸಹ ಒಂದು ಭಾಗವಾಗಿರಲಿ.
ಪ್ರತಿದಿನ 2 ಸೇಬುಗಳನ್ನು ತಿನ್ನುವ ಮೂಲಕ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಶೇ. 40 ರಷ್ಟು ಕಡಿಮೆ ಮಾಡಬಹುದು. ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಎನ್ನುತ್ತವೆ ಆಹಾರ ಶೈಲಿ ಪರಿಣತರ ಮೂಲಗಳು.
ಕೊಲೆಸ್ಟ್ರಾಲ್ ತ್ಗಗಿಸಲು ಇತರ ಮಾರ್ಗಗಳು
.ಪ್ರತಿದಿನ 30 ನಿಮಿಷಗಳ ಲೆಗ್ ವ್ಯಾಯಾಮ ಮಾಡಿ.
.ನಾನ್ ವೆಜ್ ಕನಿಷ್ಠವಾಗಿ ಸೇವಿಸಬೇಕು.
.ಆಹಾರದಲ್ಲಿ ಹಣ್ಣುಗಳು ಮತ್ತು ಹಸಿರು ತರಕಾರಿ ಸೇವನೆ.
. ಜೀವನಶೈಲಿಯನ್ನು ಆರೋಗ್ಯಕರವಾಗಿರಿಸಿಕೊಳ್ಳಿ.
.ಕಾಲಕಾಲಕ್ಕೆ ದೇಹವನ್ನು ಪರೀಕ್ಷಿಸಿಕೊಳ್ಳಿ.
. ಆಹಾರ ಸೇವಿಸಿದ ನಂತರ, ಪ್ರತಿದಿನ 40 ನಿಮಿಷ ವಾಕ್ ಮಾಡಬೇಕು.
. ಪ್ರತಿದಿನ 8 ರಿಂದ 9 ಗಂಟೆಗಳ ನಿದ್ದೆ ಮಾಡಬೇಕು, ಇದು ಫಿಟ್ ಹಾಗೂ ಚಟುವಟಿಕೆಯಿಂದಿರಲು ಇದು ಸಹಕಾರಿ.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…