ಆಂದೋಲನ ಪುರವಣಿ

ಯೋಗ ಕ್ಷೇಮ : ಉತ್ತಮ ಆಹಾರ, ಜೀವನ ಶೈಲಿ ಆರೋಗ್ಯದ ಸಂಗಾತಿ

ಕೊಲೆಸ್ಟ್ರಾಲ್ ಕಡಿಮೆ ಮಾಡುವ ಸೇಬು !: ಕೊಲೆಸ್ಟ್ರಾಲ್ ನಮ್ಮ ರಕ್ತದಲ್ಲಿರುವ ಮೇಣದಂತಹ ವಸ್ತು. ಇದು ಜೀವಕೋಶಗಳು ಮತ್ತು ಹಾರ್ಮೋನುಗಳನ್ನು ತಯಾರಿಸಲು ಸಹಾಯ ಮಾಡುತ್ತದೆ. ಆದರೆ ಅದರ ಪ್ರಮಾಣವು ಸಾಮಾನ್ಯಕ್ಕಿಂತ ಹೆಚ್ಚಿದ್ದರೆ, ಅದು ರಕ್ತದ ರಕ್ತನಾಳಗಳಲ್ಲಿ ಸಂಗ್ರಹಗೊಳ್ಳುತ್ತದೆ, ಇದರಿಂದಾಗಿ ರಕ್ತದ ಹರಿವಿನ ಮೇಲೆ ಪರಿಣಾಮ ಉಂಟು ಮಾಡುತ್ತದೆ.
ಇದರಿಂದಾಗಿ, ಪಾರ್ಶ್ವವಾಯು ಮತ್ತು ಹೃದಯಾಘಾತ ಸಂಭವಿಸುವ ಅಪಾಯವು ಹೆಚ್ಚಾಗುತ್ತದೆ. ಹೀಗಾಗಿ, ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ.ಕೊಲೆಸ್ಟ್ರಾಲ್ ಪ್ರಸ್ತುತ ದಿನಗಳಲ್ಲಿನ ಆಹಾರ ಶೈಲಿಯಿಂದಾಗಿ ಸರ್ವೇ ಸಾಮಾನ್ಯವೆನಿಸಿದೆ.

ಒಂದು ವೇಳೆ ಯಾರಾದರೂ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿದ್ದರೆ ಟೆನ್ಷನ್ ತೆಗೆದುಕೊಳ್ಳುವ ಅಗತ್ಯವಿಲ್ಲ. ಬಹಳ ಸುಲಭ ಮಾರ್ಗದಿಂದ ಮನೆಯಲ್ಲಿಯೇ ಕುಳಿತು ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಸುಲಭವಾಗಿ ಕಡಿಮೆ ಮಾಡಬಹುದು. ಅಥವಾ ನಿಯಂತ್ರಣದಲ್ಲಿಟ್ಟುಕೊಳ್ಳಬಹುದು. ದಿನ ನಿತ್ಯದ ಆಹಾರದಲ್ಲಿ ಸೇಬು ಹಣ್ಣೂ ಸಹ ಒಂದು ಭಾಗವಾಗಿರಲಿ.

ಪ್ರತಿದಿನ 2 ಸೇಬುಗಳನ್ನು ತಿನ್ನುವ ಮೂಲಕ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಶೇ. 40 ರಷ್ಟು ಕಡಿಮೆ ಮಾಡಬಹುದು. ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಎನ್ನುತ್ತವೆ ಆಹಾರ ಶೈಲಿ ಪರಿಣತರ ಮೂಲಗಳು.


ಕೊಲೆಸ್ಟ್ರಾಲ್ ತ್ಗಗಿಸಲು ಇತರ ಮಾರ್ಗಗಳು

.ಪ್ರತಿದಿನ 30 ನಿಮಿಷಗಳ ಲೆಗ್ ವ್ಯಾಯಾಮ ಮಾಡಿ.
.ನಾನ್ ವೆಜ್ ಕನಿಷ್ಠವಾಗಿ ಸೇವಿಸಬೇಕು.
.ಆಹಾರದಲ್ಲಿ ಹಣ್ಣುಗಳು ಮತ್ತು ಹಸಿರು ತರಕಾರಿ ಸೇವನೆ.

. ಜೀವನಶೈಲಿಯನ್ನು ಆರೋಗ್ಯಕರವಾಗಿರಿಸಿಕೊಳ್ಳಿ.
.ಕಾಲಕಾಲಕ್ಕೆ ದೇಹವನ್ನು ಪರೀಕ್ಷಿಸಿಕೊಳ್ಳಿ.
. ಆಹಾರ ಸೇವಿಸಿದ ನಂತರ, ಪ್ರತಿದಿನ 40 ನಿಮಿಷ ವಾಕ್ ಮಾಡಬೇಕು.
. ಪ್ರತಿದಿನ 8 ರಿಂದ 9 ಗಂಟೆಗಳ ನಿದ್ದೆ ಮಾಡಬೇಕು, ಇದು ಫಿಟ್ ಹಾಗೂ ಚಟುವಟಿಕೆಯಿಂದಿರಲು ಇದು ಸಹಕಾರಿ.

andolanait

Recent Posts

ನೊಂದ ಪುರುಷರ ಹಕ್ಕುಗಳ ರಕ್ಷಣೆಗೆ ಆಯೋಗ ರಚಿಸಿ ; ಎ.ಎಚ್.ವಿಶ್ವನಾಥ್‌

ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…

6 hours ago

ಮೈಸೂರು | ಎನ್‌.ಆರ್‌.ಕ್ಷೇತ್ರದಲ್ಲಿ ನಿಯಮಬಾಹಿರ ಎಸ್‌ಐಆರ್‌ : ಸಂಸದ ಯದುವೀರ್ ಆರೋಪ

ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…

6 hours ago

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

12 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

14 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

15 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

15 hours ago