ಆಂದೋಲನ ಪುರವಣಿ

ಯೋಗ ಕ್ಷೇಮ : ಉತ್ತಮ ಆಹಾರ, ಜೀವನ ಶೈಲಿ ಆರೋಗ್ಯದ ಸಂಗಾತಿ

ಕೊಲೆಸ್ಟ್ರಾಲ್ ಕಡಿಮೆ ಮಾಡುವ ಸೇಬು !: ಕೊಲೆಸ್ಟ್ರಾಲ್ ನಮ್ಮ ರಕ್ತದಲ್ಲಿರುವ ಮೇಣದಂತಹ ವಸ್ತು. ಇದು ಜೀವಕೋಶಗಳು ಮತ್ತು ಹಾರ್ಮೋನುಗಳನ್ನು ತಯಾರಿಸಲು ಸಹಾಯ ಮಾಡುತ್ತದೆ. ಆದರೆ ಅದರ ಪ್ರಮಾಣವು ಸಾಮಾನ್ಯಕ್ಕಿಂತ ಹೆಚ್ಚಿದ್ದರೆ, ಅದು ರಕ್ತದ ರಕ್ತನಾಳಗಳಲ್ಲಿ ಸಂಗ್ರಹಗೊಳ್ಳುತ್ತದೆ, ಇದರಿಂದಾಗಿ ರಕ್ತದ ಹರಿವಿನ ಮೇಲೆ ಪರಿಣಾಮ ಉಂಟು ಮಾಡುತ್ತದೆ.
ಇದರಿಂದಾಗಿ, ಪಾರ್ಶ್ವವಾಯು ಮತ್ತು ಹೃದಯಾಘಾತ ಸಂಭವಿಸುವ ಅಪಾಯವು ಹೆಚ್ಚಾಗುತ್ತದೆ. ಹೀಗಾಗಿ, ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ.ಕೊಲೆಸ್ಟ್ರಾಲ್ ಪ್ರಸ್ತುತ ದಿನಗಳಲ್ಲಿನ ಆಹಾರ ಶೈಲಿಯಿಂದಾಗಿ ಸರ್ವೇ ಸಾಮಾನ್ಯವೆನಿಸಿದೆ.

ಒಂದು ವೇಳೆ ಯಾರಾದರೂ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿದ್ದರೆ ಟೆನ್ಷನ್ ತೆಗೆದುಕೊಳ್ಳುವ ಅಗತ್ಯವಿಲ್ಲ. ಬಹಳ ಸುಲಭ ಮಾರ್ಗದಿಂದ ಮನೆಯಲ್ಲಿಯೇ ಕುಳಿತು ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಸುಲಭವಾಗಿ ಕಡಿಮೆ ಮಾಡಬಹುದು. ಅಥವಾ ನಿಯಂತ್ರಣದಲ್ಲಿಟ್ಟುಕೊಳ್ಳಬಹುದು. ದಿನ ನಿತ್ಯದ ಆಹಾರದಲ್ಲಿ ಸೇಬು ಹಣ್ಣೂ ಸಹ ಒಂದು ಭಾಗವಾಗಿರಲಿ.

ಪ್ರತಿದಿನ 2 ಸೇಬುಗಳನ್ನು ತಿನ್ನುವ ಮೂಲಕ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಶೇ. 40 ರಷ್ಟು ಕಡಿಮೆ ಮಾಡಬಹುದು. ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಎನ್ನುತ್ತವೆ ಆಹಾರ ಶೈಲಿ ಪರಿಣತರ ಮೂಲಗಳು.


ಕೊಲೆಸ್ಟ್ರಾಲ್ ತ್ಗಗಿಸಲು ಇತರ ಮಾರ್ಗಗಳು

.ಪ್ರತಿದಿನ 30 ನಿಮಿಷಗಳ ಲೆಗ್ ವ್ಯಾಯಾಮ ಮಾಡಿ.
.ನಾನ್ ವೆಜ್ ಕನಿಷ್ಠವಾಗಿ ಸೇವಿಸಬೇಕು.
.ಆಹಾರದಲ್ಲಿ ಹಣ್ಣುಗಳು ಮತ್ತು ಹಸಿರು ತರಕಾರಿ ಸೇವನೆ.

. ಜೀವನಶೈಲಿಯನ್ನು ಆರೋಗ್ಯಕರವಾಗಿರಿಸಿಕೊಳ್ಳಿ.
.ಕಾಲಕಾಲಕ್ಕೆ ದೇಹವನ್ನು ಪರೀಕ್ಷಿಸಿಕೊಳ್ಳಿ.
. ಆಹಾರ ಸೇವಿಸಿದ ನಂತರ, ಪ್ರತಿದಿನ 40 ನಿಮಿಷ ವಾಕ್ ಮಾಡಬೇಕು.
. ಪ್ರತಿದಿನ 8 ರಿಂದ 9 ಗಂಟೆಗಳ ನಿದ್ದೆ ಮಾಡಬೇಕು, ಇದು ಫಿಟ್ ಹಾಗೂ ಚಟುವಟಿಕೆಯಿಂದಿರಲು ಇದು ಸಹಕಾರಿ.

andolanait

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

14 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

17 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

17 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

18 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

19 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

19 hours ago