ಆಂದೋಲನ ಪುರವಣಿ

ಯೋಗ ಕ್ಷೇಮ | ಹಲ್ಲು ಇಲ್ಲವೇ; ಚಿಂತೆ ಬೇಡ

ಹಲವು ವಿಧಾನಗಳ ಮೂಲಕ ದಂತ ಚಿಕಿತ್ಸೆಗೆ ಇದೆ ಅವಕಾಶ

ಹಲ್ಲುಗಳ ಆರೋಗ್ಯದಲ್ಲಿ ಏರುಪೇರಾದರೆ ಅವರು ಉದುರುವುದು ಮಾಮೂಲು. ಆದರೆ ಅದಕ್ಕೆ ಬದಲಿಯಾಗಿ ಕೃತಕ ಹಲ್ಲುಗಳನ್ನು ಕಟ್ಟಿಸಿಕೊಳ್ಳಲು ಇಂದು ಹಲವಾರು ಚಿಕಿತ್ಸಾ ವಿಧಾನಗಳಿವೆ. ಅವುಗಳನ್ನು ಮಾಡಿಸಿಕೊಂಡರೆ ದಂತಪಂಕ್ತಿ ಸುರಕ್ಷಿತ ಮತ್ತು ಹಲ್ಲು ಕಾಣುವಂತೆ ಚೆಂದದ ನಗು ಬೀರಲು ಸಾಧ್ಯ.

ಅನುವಂಶೀಯ ಕಾರಣಗಳು, ಅಪಘಾತ, ಒಸಡು ರೋಗ, ದಂತಕುಳಿ ಅಥವಾ ಹಲ್ಲುಗಳನ್ನು ಸ್ವಚ್ಚವಾಗಿಡದೆ ಇರುವ ಕಾರಣಗಳಿಂದ ಹಲ್ಲು ಕಳೆದುಕೊಳ್ಳಬಹುದು. ಇದು ಆತ್ಮವಿಶ್ವಾಸಕ್ಕೆ ಧಕ್ಕೆ ಉಂಟು ಮಾಡುವುದಲ್ಲದೆ, ಇತರ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗಬಹುದು. ಇದಕ್ಕಾಗಿ ಕೃತಕ ದಂತ ಪಂಕ್ತಿ (ಹಲ್ಲುಸೆಟ್), ಡೆಂಟಲ್ ಇಂಪ್ಲಾಂಟ್ಸ್ ಅಥವಾ ಫಿಕ್ಸ್ ಬ್ರಿಡ್ಜ್ ಮುಂತಾದ ಚಿಕಿತ್ಸಾ ವಿಧಾನಗಳಿವೆ.

ಹಲ್ಲು ಕಟ್ಟಿಸದೇ ಇದ್ದರೆ ಆಗುವ ತೊಂದರೆ

* ಹಲ್ಲು ಬಿದ್ದ ಜಾಗಕ್ಕೆ ಪಕ್ಕದ ಹಲ್ಲು ಜರುಗಿ ಹಲ್ಲುಗಳ ಮಧ್ಯೆ ಕಿಂಡಿ ಕಾಣಿಸಿಕೊಳ್ಳುತ್ತದೆ.

* ಹಲ್ಲುಗಳು ಜರುಗುತ್ತಾ ಹೋದಂತೆ ಹಲ್ಲಿನ ಬೇರಿಗೂ ತೊಂದರೆ.

* ದವಡೆಯ ಮೂಳೆಗಳಲ್ಲಿ ತೊಂದರೆ ಕಾಣಿಸಿಕೊಳ್ಳಬಹುದು.

* ಉಳಿದ ಹಲ್ಲುಗಳ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ.

* ಆಹಾರವನ್ನು ಅಗಿಯಲು ಕಷ್ಟ, ಜೀರ್ಣಕ್ರಿಯೆ ಮೇಲೆ ಪರಿಣಾಮ.

* ಮುಖದ ರಚನೆಯ ಮೇಲೆ ಪ್ರಭಾವ, ಸ್ನಾಯುಗಳು ಜೋತು ಬೀಳುತ್ತವೆ.

* ಮಾತುಗಳಲ್ಲಿ ತೊದಲು, ಸ್ವಾಭಾವಿಕವಾಗಿ ಮಾತನಾಡಲು ಸಮಸ್ಯೆ

ಹಲ್ಲನ್ನು ಕಟ್ಟಿಸಿಕೊಳ್ಳುವ ವಿವಿಧ ಆಯ್ಕೆಗಳು

* ಡೆಂಟಲ್ ಇಂಪ್ಲಾಂಟ್ಸ್
ಒಂದು ಹಲ್ಲು ಇಲ್ಲದಿರುವಾಗ ಅದನ್ನು ಪುನಃ ಜೋಡಿಸಲು ಡೆಂಟಲ್ ಇಂಪ್ಲಾಂಟ್ ಒಳ್ಳೆಯ ಆ್ಂಕೆು. ಈ ವಿಧಾನದಲ್ಲಿ ಕೃತಕ ದಂತವನ್ನು ಒಸಡಿನಲ್ಲಿ ಶಾಶ್ವತವಾಗಿ ಜೋಡಣೆ ಮಾಡಲಾಗುತ್ತದೆ.

* ಕೃತಕ ದಂತಪಂಕ್ತಿ
ಕೆಲವು ಅಥವಾ ಸಂಪೂರ್ಣ ಹಲ್ಲುಗಳು ಇಲ್ಲದಿರುವಾಗ ಅದಕ್ಕೆ ಅನುಗುಣವಾಗಿ ಕೃತಕ ದಂತ ಪಂಕ್ತಿಗಳನ್ನು ಹಾಕಿಕೊಡಲಾಗುತ್ತದೆ. ಕೃತಕ ದಂತಪಂಕ್ತಿಗಳು ಎರಡು ರೀತಿಯಾಗಿರುತ್ತದೆ.

೧. ಸಂಪೂರ್ಣ ಹಲ್ಲುಗಳ ದಂತಪಂಕ್ತಿಯಲ್ಲಿ ಎಲ್ಲ ಹಲ್ಲುಗಳನ್ನು ಜೋಡಣೆ ಮಾಡುವುದು.

೨. ವಿಭಾಗೀಯ ದಂತ ಪಂಕ್ತಿಯಲ್ಲಿ ಒಂದು ಅಥವಾ ಕೆಲವು ಹಲ್ಲುಗಳನ್ನು ಜೋಡಣೆ.

ಒಂದು ಅಥವಾ ಎರಡು ಹಲ್ಲು ಇಲ್ಲದಿದ್ದಾಗ, ಅಕ್ಕ ಪಕ್ಕದ ಹಲ್ಲುಗಳನ್ನು ಆಧಾರವಾಗಿ ಬಳಸಿ ಡೆಂಟಲ್ ಬ್ರಿಡ್ಜ್ ಅನ್ನು ಮಾಡಬಹುದು. ಅದನ್ನು ಸಾಮಾನ್ಯವಾಗಿ ಕ್ಯಾಪ್ ಅಥವಾ ಕ್ರೌನ್ ಅನ್ನುತ್ತಾರೆ. ಇದನ್ನು ಡೆಂಟಲ್ ಸಿಮೆಂಟ್‌ನಿಂದ ಫಿಕ್ಸ್ ಮಾಡಲಾಗುತ್ತದೆ.

-ಡಾ. ಸಿ.ಪಿ. ಕಾತ್ಯಾಯಿನಿ, ಅಧ್ಯಾಪಕರು, ಹಲ್ಲು ನ್ಯೂನ ಪೂರಣ ಶಾಸ್ತ್ರ ವಿಭಾಗ, ಜೆಎಸ್‌ಎಸ್ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮೈಸೂರು

 

andolanait

Recent Posts

ಪೌತಿ ಖಾತಾ ಅರ್ಜಿ ಶೀಘ್ರ ವಿಲೇವಾರಿ ಮಾಡಿ : ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ

ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…

3 hours ago

ಜಿ-ರಾಮ್‌ಜಿ ವಾಪಸ್‌ ಪಡೆಯಿರಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…

4 hours ago

ಹಣ ಅಕ್ರಮ ವರ್ಗಾವಣೆ ಪ್ರಕರಣ : ಕಾಂಗ್ರೆಸ್‌ ಶಾಸಕ ವೀರೇಂದ್ರಗೆ ಜಾಮೀನು

ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್‌ ರಿಲೀಫ್‌…

5 hours ago

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…

6 hours ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

7 hours ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

7 hours ago