ಆಂದೋಲನ ಪುರವಣಿ

ಯೋಗ ಕ್ಷೇಮ | ಹಲ್ಲು ಇಲ್ಲವೇ; ಚಿಂತೆ ಬೇಡ

ಹಲವು ವಿಧಾನಗಳ ಮೂಲಕ ದಂತ ಚಿಕಿತ್ಸೆಗೆ ಇದೆ ಅವಕಾಶ

ಹಲ್ಲುಗಳ ಆರೋಗ್ಯದಲ್ಲಿ ಏರುಪೇರಾದರೆ ಅವರು ಉದುರುವುದು ಮಾಮೂಲು. ಆದರೆ ಅದಕ್ಕೆ ಬದಲಿಯಾಗಿ ಕೃತಕ ಹಲ್ಲುಗಳನ್ನು ಕಟ್ಟಿಸಿಕೊಳ್ಳಲು ಇಂದು ಹಲವಾರು ಚಿಕಿತ್ಸಾ ವಿಧಾನಗಳಿವೆ. ಅವುಗಳನ್ನು ಮಾಡಿಸಿಕೊಂಡರೆ ದಂತಪಂಕ್ತಿ ಸುರಕ್ಷಿತ ಮತ್ತು ಹಲ್ಲು ಕಾಣುವಂತೆ ಚೆಂದದ ನಗು ಬೀರಲು ಸಾಧ್ಯ.

ಅನುವಂಶೀಯ ಕಾರಣಗಳು, ಅಪಘಾತ, ಒಸಡು ರೋಗ, ದಂತಕುಳಿ ಅಥವಾ ಹಲ್ಲುಗಳನ್ನು ಸ್ವಚ್ಚವಾಗಿಡದೆ ಇರುವ ಕಾರಣಗಳಿಂದ ಹಲ್ಲು ಕಳೆದುಕೊಳ್ಳಬಹುದು. ಇದು ಆತ್ಮವಿಶ್ವಾಸಕ್ಕೆ ಧಕ್ಕೆ ಉಂಟು ಮಾಡುವುದಲ್ಲದೆ, ಇತರ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗಬಹುದು. ಇದಕ್ಕಾಗಿ ಕೃತಕ ದಂತ ಪಂಕ್ತಿ (ಹಲ್ಲುಸೆಟ್), ಡೆಂಟಲ್ ಇಂಪ್ಲಾಂಟ್ಸ್ ಅಥವಾ ಫಿಕ್ಸ್ ಬ್ರಿಡ್ಜ್ ಮುಂತಾದ ಚಿಕಿತ್ಸಾ ವಿಧಾನಗಳಿವೆ.

ಹಲ್ಲು ಕಟ್ಟಿಸದೇ ಇದ್ದರೆ ಆಗುವ ತೊಂದರೆ

* ಹಲ್ಲು ಬಿದ್ದ ಜಾಗಕ್ಕೆ ಪಕ್ಕದ ಹಲ್ಲು ಜರುಗಿ ಹಲ್ಲುಗಳ ಮಧ್ಯೆ ಕಿಂಡಿ ಕಾಣಿಸಿಕೊಳ್ಳುತ್ತದೆ.

* ಹಲ್ಲುಗಳು ಜರುಗುತ್ತಾ ಹೋದಂತೆ ಹಲ್ಲಿನ ಬೇರಿಗೂ ತೊಂದರೆ.

* ದವಡೆಯ ಮೂಳೆಗಳಲ್ಲಿ ತೊಂದರೆ ಕಾಣಿಸಿಕೊಳ್ಳಬಹುದು.

* ಉಳಿದ ಹಲ್ಲುಗಳ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ.

* ಆಹಾರವನ್ನು ಅಗಿಯಲು ಕಷ್ಟ, ಜೀರ್ಣಕ್ರಿಯೆ ಮೇಲೆ ಪರಿಣಾಮ.

* ಮುಖದ ರಚನೆಯ ಮೇಲೆ ಪ್ರಭಾವ, ಸ್ನಾಯುಗಳು ಜೋತು ಬೀಳುತ್ತವೆ.

* ಮಾತುಗಳಲ್ಲಿ ತೊದಲು, ಸ್ವಾಭಾವಿಕವಾಗಿ ಮಾತನಾಡಲು ಸಮಸ್ಯೆ

ಹಲ್ಲನ್ನು ಕಟ್ಟಿಸಿಕೊಳ್ಳುವ ವಿವಿಧ ಆಯ್ಕೆಗಳು

* ಡೆಂಟಲ್ ಇಂಪ್ಲಾಂಟ್ಸ್
ಒಂದು ಹಲ್ಲು ಇಲ್ಲದಿರುವಾಗ ಅದನ್ನು ಪುನಃ ಜೋಡಿಸಲು ಡೆಂಟಲ್ ಇಂಪ್ಲಾಂಟ್ ಒಳ್ಳೆಯ ಆ್ಂಕೆು. ಈ ವಿಧಾನದಲ್ಲಿ ಕೃತಕ ದಂತವನ್ನು ಒಸಡಿನಲ್ಲಿ ಶಾಶ್ವತವಾಗಿ ಜೋಡಣೆ ಮಾಡಲಾಗುತ್ತದೆ.

* ಕೃತಕ ದಂತಪಂಕ್ತಿ
ಕೆಲವು ಅಥವಾ ಸಂಪೂರ್ಣ ಹಲ್ಲುಗಳು ಇಲ್ಲದಿರುವಾಗ ಅದಕ್ಕೆ ಅನುಗುಣವಾಗಿ ಕೃತಕ ದಂತ ಪಂಕ್ತಿಗಳನ್ನು ಹಾಕಿಕೊಡಲಾಗುತ್ತದೆ. ಕೃತಕ ದಂತಪಂಕ್ತಿಗಳು ಎರಡು ರೀತಿಯಾಗಿರುತ್ತದೆ.

೧. ಸಂಪೂರ್ಣ ಹಲ್ಲುಗಳ ದಂತಪಂಕ್ತಿಯಲ್ಲಿ ಎಲ್ಲ ಹಲ್ಲುಗಳನ್ನು ಜೋಡಣೆ ಮಾಡುವುದು.

೨. ವಿಭಾಗೀಯ ದಂತ ಪಂಕ್ತಿಯಲ್ಲಿ ಒಂದು ಅಥವಾ ಕೆಲವು ಹಲ್ಲುಗಳನ್ನು ಜೋಡಣೆ.

ಒಂದು ಅಥವಾ ಎರಡು ಹಲ್ಲು ಇಲ್ಲದಿದ್ದಾಗ, ಅಕ್ಕ ಪಕ್ಕದ ಹಲ್ಲುಗಳನ್ನು ಆಧಾರವಾಗಿ ಬಳಸಿ ಡೆಂಟಲ್ ಬ್ರಿಡ್ಜ್ ಅನ್ನು ಮಾಡಬಹುದು. ಅದನ್ನು ಸಾಮಾನ್ಯವಾಗಿ ಕ್ಯಾಪ್ ಅಥವಾ ಕ್ರೌನ್ ಅನ್ನುತ್ತಾರೆ. ಇದನ್ನು ಡೆಂಟಲ್ ಸಿಮೆಂಟ್‌ನಿಂದ ಫಿಕ್ಸ್ ಮಾಡಲಾಗುತ್ತದೆ.

-ಡಾ. ಸಿ.ಪಿ. ಕಾತ್ಯಾಯಿನಿ, ಅಧ್ಯಾಪಕರು, ಹಲ್ಲು ನ್ಯೂನ ಪೂರಣ ಶಾಸ್ತ್ರ ವಿಭಾಗ, ಜೆಎಸ್‌ಎಸ್ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮೈಸೂರು

 

andolanait

Recent Posts

ಅರಮನೆ ಬಳಿ ಹೀಲಿಯಂ ಸ್ಫೋಟ ಪ್ರಕರಣ: ಎನ್‌ಐಎ ತನಿಖೆಗೆ ಪ್ರಮೋದ್‌ ಮುತಾಲಿಕ್‌ ಆಗ್ರಹ

ಮೈಸೂರು: ಅರಮನೆ ಬಳಿ ಹೀಲಿಯಂ ಸಿಲಿಂಡರ್‌ ಸ್ಫೋಟ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಪ್ರತಿಕ್ರಿಯೆ ನೀಡಿದ್ದು,…

2 mins ago

ಚಿತ್ರದುರ್ಗ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ನ್ಯಾಯಾಲಯದ ಆದೇಶವನ್ನು ಮೀರಿ…

26 mins ago

ಹೊಗೇನಕಲ್ ಜಲಪಾತ ವೀಕ್ಷಣೆಗೆ ಪ್ರವಾಸಿಗರ ಲಗ್ಗೆ: ಪ್ರಕೃತಿ ಸೌಂದರ್ಯಕ್ಕೆ ಮನಸೋತ ಜನತೆ

ಹನೂರು: ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಬರುತ್ತಿದ್ದು, ಇಂದು…

43 mins ago

ಕಾಡುಹಂದಿ ಬೇಟೆಗಾಗಿ ಮನೆಯಲ್ಲಿ ಸಂಗ್ರಹಿಸಿದ್ದ ಸಿಡಿಮದ್ದು ಸಿಡಿದು ವ್ಯಕ್ತಿಗೆ ಗಂಭೀರ ಗಾಯ

ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿಡಿಮದ್ದು ಸಿಡಿದು ಪೆದ್ದಿ ಅಲಿಯಾಸ್‌…

1 hour ago

ಓದುಗರ ಪತ್ರ:  ತಡೆಗೋಡೆ ನಿರ್ಮಿಸಿ

ಎಚ್.ಡಿ.ಕೋಟೆ -ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ಪೈಲ್ವಾನ್ ಕಾಲೋನಿ ಗ್ರಾಮದಲ್ಲಿರುವ ನೀರು ಕಾಲುವೆಗೆ ತಡೆಗೋಡೆ ಇಲ್ಲಿದೇ ತೀವ್ರ ತೊಂದರೆಯಾಗಿದೆ. ಎಚ್.ಡಿ.ಕೋಟೆ ಮತ್ತು…

1 hour ago

ಓದುಗರ ಪತ್ರ:  ಗಂಗೋತ್ರಿ ವಿದ್ಯಾರ್ಥಿನಿಲಯಗಳಿಗೆ ಮೂಲ ಸೌಕರ್ಯ ಬೇಕಿದೆ

ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧಕರ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯಗಳಲ್ಲಿ, ಶುದ್ಧ ಕುಡಿಯುವ ನೀರಿನ ಫಿಲ್ಟರ್, ಬಿಸಿನೀರಿನ…

2 hours ago