ಆಂದೋಲನ ಪುರವಣಿ

ಯೋಗ ಕ್ಷೇಮ | ಹಲ್ಲು ಇಲ್ಲವೇ; ಚಿಂತೆ ಬೇಡ

ಹಲವು ವಿಧಾನಗಳ ಮೂಲಕ ದಂತ ಚಿಕಿತ್ಸೆಗೆ ಇದೆ ಅವಕಾಶ

ಹಲ್ಲುಗಳ ಆರೋಗ್ಯದಲ್ಲಿ ಏರುಪೇರಾದರೆ ಅವರು ಉದುರುವುದು ಮಾಮೂಲು. ಆದರೆ ಅದಕ್ಕೆ ಬದಲಿಯಾಗಿ ಕೃತಕ ಹಲ್ಲುಗಳನ್ನು ಕಟ್ಟಿಸಿಕೊಳ್ಳಲು ಇಂದು ಹಲವಾರು ಚಿಕಿತ್ಸಾ ವಿಧಾನಗಳಿವೆ. ಅವುಗಳನ್ನು ಮಾಡಿಸಿಕೊಂಡರೆ ದಂತಪಂಕ್ತಿ ಸುರಕ್ಷಿತ ಮತ್ತು ಹಲ್ಲು ಕಾಣುವಂತೆ ಚೆಂದದ ನಗು ಬೀರಲು ಸಾಧ್ಯ.

ಅನುವಂಶೀಯ ಕಾರಣಗಳು, ಅಪಘಾತ, ಒಸಡು ರೋಗ, ದಂತಕುಳಿ ಅಥವಾ ಹಲ್ಲುಗಳನ್ನು ಸ್ವಚ್ಚವಾಗಿಡದೆ ಇರುವ ಕಾರಣಗಳಿಂದ ಹಲ್ಲು ಕಳೆದುಕೊಳ್ಳಬಹುದು. ಇದು ಆತ್ಮವಿಶ್ವಾಸಕ್ಕೆ ಧಕ್ಕೆ ಉಂಟು ಮಾಡುವುದಲ್ಲದೆ, ಇತರ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗಬಹುದು. ಇದಕ್ಕಾಗಿ ಕೃತಕ ದಂತ ಪಂಕ್ತಿ (ಹಲ್ಲುಸೆಟ್), ಡೆಂಟಲ್ ಇಂಪ್ಲಾಂಟ್ಸ್ ಅಥವಾ ಫಿಕ್ಸ್ ಬ್ರಿಡ್ಜ್ ಮುಂತಾದ ಚಿಕಿತ್ಸಾ ವಿಧಾನಗಳಿವೆ.

ಹಲ್ಲು ಕಟ್ಟಿಸದೇ ಇದ್ದರೆ ಆಗುವ ತೊಂದರೆ

* ಹಲ್ಲು ಬಿದ್ದ ಜಾಗಕ್ಕೆ ಪಕ್ಕದ ಹಲ್ಲು ಜರುಗಿ ಹಲ್ಲುಗಳ ಮಧ್ಯೆ ಕಿಂಡಿ ಕಾಣಿಸಿಕೊಳ್ಳುತ್ತದೆ.

* ಹಲ್ಲುಗಳು ಜರುಗುತ್ತಾ ಹೋದಂತೆ ಹಲ್ಲಿನ ಬೇರಿಗೂ ತೊಂದರೆ.

* ದವಡೆಯ ಮೂಳೆಗಳಲ್ಲಿ ತೊಂದರೆ ಕಾಣಿಸಿಕೊಳ್ಳಬಹುದು.

* ಉಳಿದ ಹಲ್ಲುಗಳ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ.

* ಆಹಾರವನ್ನು ಅಗಿಯಲು ಕಷ್ಟ, ಜೀರ್ಣಕ್ರಿಯೆ ಮೇಲೆ ಪರಿಣಾಮ.

* ಮುಖದ ರಚನೆಯ ಮೇಲೆ ಪ್ರಭಾವ, ಸ್ನಾಯುಗಳು ಜೋತು ಬೀಳುತ್ತವೆ.

* ಮಾತುಗಳಲ್ಲಿ ತೊದಲು, ಸ್ವಾಭಾವಿಕವಾಗಿ ಮಾತನಾಡಲು ಸಮಸ್ಯೆ

ಹಲ್ಲನ್ನು ಕಟ್ಟಿಸಿಕೊಳ್ಳುವ ವಿವಿಧ ಆಯ್ಕೆಗಳು

* ಡೆಂಟಲ್ ಇಂಪ್ಲಾಂಟ್ಸ್
ಒಂದು ಹಲ್ಲು ಇಲ್ಲದಿರುವಾಗ ಅದನ್ನು ಪುನಃ ಜೋಡಿಸಲು ಡೆಂಟಲ್ ಇಂಪ್ಲಾಂಟ್ ಒಳ್ಳೆಯ ಆ್ಂಕೆು. ಈ ವಿಧಾನದಲ್ಲಿ ಕೃತಕ ದಂತವನ್ನು ಒಸಡಿನಲ್ಲಿ ಶಾಶ್ವತವಾಗಿ ಜೋಡಣೆ ಮಾಡಲಾಗುತ್ತದೆ.

* ಕೃತಕ ದಂತಪಂಕ್ತಿ
ಕೆಲವು ಅಥವಾ ಸಂಪೂರ್ಣ ಹಲ್ಲುಗಳು ಇಲ್ಲದಿರುವಾಗ ಅದಕ್ಕೆ ಅನುಗುಣವಾಗಿ ಕೃತಕ ದಂತ ಪಂಕ್ತಿಗಳನ್ನು ಹಾಕಿಕೊಡಲಾಗುತ್ತದೆ. ಕೃತಕ ದಂತಪಂಕ್ತಿಗಳು ಎರಡು ರೀತಿಯಾಗಿರುತ್ತದೆ.

೧. ಸಂಪೂರ್ಣ ಹಲ್ಲುಗಳ ದಂತಪಂಕ್ತಿಯಲ್ಲಿ ಎಲ್ಲ ಹಲ್ಲುಗಳನ್ನು ಜೋಡಣೆ ಮಾಡುವುದು.

೨. ವಿಭಾಗೀಯ ದಂತ ಪಂಕ್ತಿಯಲ್ಲಿ ಒಂದು ಅಥವಾ ಕೆಲವು ಹಲ್ಲುಗಳನ್ನು ಜೋಡಣೆ.

ಒಂದು ಅಥವಾ ಎರಡು ಹಲ್ಲು ಇಲ್ಲದಿದ್ದಾಗ, ಅಕ್ಕ ಪಕ್ಕದ ಹಲ್ಲುಗಳನ್ನು ಆಧಾರವಾಗಿ ಬಳಸಿ ಡೆಂಟಲ್ ಬ್ರಿಡ್ಜ್ ಅನ್ನು ಮಾಡಬಹುದು. ಅದನ್ನು ಸಾಮಾನ್ಯವಾಗಿ ಕ್ಯಾಪ್ ಅಥವಾ ಕ್ರೌನ್ ಅನ್ನುತ್ತಾರೆ. ಇದನ್ನು ಡೆಂಟಲ್ ಸಿಮೆಂಟ್‌ನಿಂದ ಫಿಕ್ಸ್ ಮಾಡಲಾಗುತ್ತದೆ.

-ಡಾ. ಸಿ.ಪಿ. ಕಾತ್ಯಾಯಿನಿ, ಅಧ್ಯಾಪಕರು, ಹಲ್ಲು ನ್ಯೂನ ಪೂರಣ ಶಾಸ್ತ್ರ ವಿಭಾಗ, ಜೆಎಸ್‌ಎಸ್ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮೈಸೂರು

 

andolanait

Recent Posts

ಹೂ ಮಳೆಗಾಗಿ ಕಾದಿರುವ ಕಾಫಿ ಬೆಳೆಗಾರರು

ನವೀನ್ ಡಿಸೋಜ ಕೆಲವೆಡೆ ಸ್ಪಿಂಕ್ಲರ್ ಮೊರೆ ಹೋದ ಕೃಷಿಕರು; ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

50 mins ago

ಫೆ.26, 27ಕ್ಕೆ ಕಡಬೂರಿನಲ್ಲಿ ಶಿವ, ಗಣೇಶ ದೇವಸ್ಥಾನ ಲೋಕಾರ್ಪಣೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ…

55 mins ago

ಅವ್ಯವಸ್ಥೆಯಿಂದ ಕೂಡಿದ ಚರಂಡಿ ಕಾಮಗಾರಿ: ಆರೋಪ

ಮಂಜು ಕೋಟೆ ಕೋಟೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಲಕ್ಷಾಂತರ ರೂ.…

59 mins ago

ನಾ.ದಿವಾಕರ ಅವರ ವಾರದ ಅಂಕಣ: ಎಳೆ ಪ್ರತಿಭೆಗೆ ಸಾಕ್ಷಿಯಾದ ರಂಗ ಪ್ರಯೋಗ

ರಂಗಕಲೆಯ ಜೀವಂತಿಕೆಯನ್ನು ಕಾಪಾಡುವ ಹೊಣೆ ವಿಶಾಲ ಸಮಾಜದ ಮೇಲಿದೆ.  ನಾ.ದಿವಾಕರ ವರ್ತಮಾನದ ಸಂದರ್ಭದಲ್ಲಿ ನಮ್ಮ ಸಮಾಜ ಎದುರಿಸುತ್ತಿರುವ ಜಟಿಲ ಸಮಸ್ಯೆಗಳನ್ನು…

1 hour ago

ಶಂಕರಾಚಾರ್ಯರ ಬಂಧನಕ್ಕೆ ವೇದಿಕೆ ಸಿದ್ಧ!

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ‘ಧರ್ಮ ಯುದ್ಧ’ ಸಾರಿರುವ ಆದಿಗುರು ಶಂಕರಾಚಾರ್ಯರೇ ಸ್ಥಾಪನೆ ಮಾಡಿದ ಜ್ಯೋತಿರ್ ಪೀಠದ…

1 hour ago

ಮೊಬೈಲ್ ಮಿತ ಬಳಕೆ; ವಿದ್ಯಾರ್ಥಿಗಳ ಬಯಕೆ

ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಚಿಂತನೆ ಹಿನ್ನೆಲೆ ವಿದ್ಯಾರ್ಥಿಗಳ ಮನದ ಮಾತು ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ…

2 hours ago