ಆಂದೋಲನ ಪುರವಣಿ

ಯೋಗ ಕ್ಷೇಮ | ಹಲ್ಲು ಇಲ್ಲವೇ; ಚಿಂತೆ ಬೇಡ

ಹಲವು ವಿಧಾನಗಳ ಮೂಲಕ ದಂತ ಚಿಕಿತ್ಸೆಗೆ ಇದೆ ಅವಕಾಶ

ಹಲ್ಲುಗಳ ಆರೋಗ್ಯದಲ್ಲಿ ಏರುಪೇರಾದರೆ ಅವರು ಉದುರುವುದು ಮಾಮೂಲು. ಆದರೆ ಅದಕ್ಕೆ ಬದಲಿಯಾಗಿ ಕೃತಕ ಹಲ್ಲುಗಳನ್ನು ಕಟ್ಟಿಸಿಕೊಳ್ಳಲು ಇಂದು ಹಲವಾರು ಚಿಕಿತ್ಸಾ ವಿಧಾನಗಳಿವೆ. ಅವುಗಳನ್ನು ಮಾಡಿಸಿಕೊಂಡರೆ ದಂತಪಂಕ್ತಿ ಸುರಕ್ಷಿತ ಮತ್ತು ಹಲ್ಲು ಕಾಣುವಂತೆ ಚೆಂದದ ನಗು ಬೀರಲು ಸಾಧ್ಯ.

ಅನುವಂಶೀಯ ಕಾರಣಗಳು, ಅಪಘಾತ, ಒಸಡು ರೋಗ, ದಂತಕುಳಿ ಅಥವಾ ಹಲ್ಲುಗಳನ್ನು ಸ್ವಚ್ಚವಾಗಿಡದೆ ಇರುವ ಕಾರಣಗಳಿಂದ ಹಲ್ಲು ಕಳೆದುಕೊಳ್ಳಬಹುದು. ಇದು ಆತ್ಮವಿಶ್ವಾಸಕ್ಕೆ ಧಕ್ಕೆ ಉಂಟು ಮಾಡುವುದಲ್ಲದೆ, ಇತರ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗಬಹುದು. ಇದಕ್ಕಾಗಿ ಕೃತಕ ದಂತ ಪಂಕ್ತಿ (ಹಲ್ಲುಸೆಟ್), ಡೆಂಟಲ್ ಇಂಪ್ಲಾಂಟ್ಸ್ ಅಥವಾ ಫಿಕ್ಸ್ ಬ್ರಿಡ್ಜ್ ಮುಂತಾದ ಚಿಕಿತ್ಸಾ ವಿಧಾನಗಳಿವೆ.

ಹಲ್ಲು ಕಟ್ಟಿಸದೇ ಇದ್ದರೆ ಆಗುವ ತೊಂದರೆ

* ಹಲ್ಲು ಬಿದ್ದ ಜಾಗಕ್ಕೆ ಪಕ್ಕದ ಹಲ್ಲು ಜರುಗಿ ಹಲ್ಲುಗಳ ಮಧ್ಯೆ ಕಿಂಡಿ ಕಾಣಿಸಿಕೊಳ್ಳುತ್ತದೆ.

* ಹಲ್ಲುಗಳು ಜರುಗುತ್ತಾ ಹೋದಂತೆ ಹಲ್ಲಿನ ಬೇರಿಗೂ ತೊಂದರೆ.

* ದವಡೆಯ ಮೂಳೆಗಳಲ್ಲಿ ತೊಂದರೆ ಕಾಣಿಸಿಕೊಳ್ಳಬಹುದು.

* ಉಳಿದ ಹಲ್ಲುಗಳ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ.

* ಆಹಾರವನ್ನು ಅಗಿಯಲು ಕಷ್ಟ, ಜೀರ್ಣಕ್ರಿಯೆ ಮೇಲೆ ಪರಿಣಾಮ.

* ಮುಖದ ರಚನೆಯ ಮೇಲೆ ಪ್ರಭಾವ, ಸ್ನಾಯುಗಳು ಜೋತು ಬೀಳುತ್ತವೆ.

* ಮಾತುಗಳಲ್ಲಿ ತೊದಲು, ಸ್ವಾಭಾವಿಕವಾಗಿ ಮಾತನಾಡಲು ಸಮಸ್ಯೆ

ಹಲ್ಲನ್ನು ಕಟ್ಟಿಸಿಕೊಳ್ಳುವ ವಿವಿಧ ಆಯ್ಕೆಗಳು

* ಡೆಂಟಲ್ ಇಂಪ್ಲಾಂಟ್ಸ್
ಒಂದು ಹಲ್ಲು ಇಲ್ಲದಿರುವಾಗ ಅದನ್ನು ಪುನಃ ಜೋಡಿಸಲು ಡೆಂಟಲ್ ಇಂಪ್ಲಾಂಟ್ ಒಳ್ಳೆಯ ಆ್ಂಕೆು. ಈ ವಿಧಾನದಲ್ಲಿ ಕೃತಕ ದಂತವನ್ನು ಒಸಡಿನಲ್ಲಿ ಶಾಶ್ವತವಾಗಿ ಜೋಡಣೆ ಮಾಡಲಾಗುತ್ತದೆ.

* ಕೃತಕ ದಂತಪಂಕ್ತಿ
ಕೆಲವು ಅಥವಾ ಸಂಪೂರ್ಣ ಹಲ್ಲುಗಳು ಇಲ್ಲದಿರುವಾಗ ಅದಕ್ಕೆ ಅನುಗುಣವಾಗಿ ಕೃತಕ ದಂತ ಪಂಕ್ತಿಗಳನ್ನು ಹಾಕಿಕೊಡಲಾಗುತ್ತದೆ. ಕೃತಕ ದಂತಪಂಕ್ತಿಗಳು ಎರಡು ರೀತಿಯಾಗಿರುತ್ತದೆ.

೧. ಸಂಪೂರ್ಣ ಹಲ್ಲುಗಳ ದಂತಪಂಕ್ತಿಯಲ್ಲಿ ಎಲ್ಲ ಹಲ್ಲುಗಳನ್ನು ಜೋಡಣೆ ಮಾಡುವುದು.

೨. ವಿಭಾಗೀಯ ದಂತ ಪಂಕ್ತಿಯಲ್ಲಿ ಒಂದು ಅಥವಾ ಕೆಲವು ಹಲ್ಲುಗಳನ್ನು ಜೋಡಣೆ.

ಒಂದು ಅಥವಾ ಎರಡು ಹಲ್ಲು ಇಲ್ಲದಿದ್ದಾಗ, ಅಕ್ಕ ಪಕ್ಕದ ಹಲ್ಲುಗಳನ್ನು ಆಧಾರವಾಗಿ ಬಳಸಿ ಡೆಂಟಲ್ ಬ್ರಿಡ್ಜ್ ಅನ್ನು ಮಾಡಬಹುದು. ಅದನ್ನು ಸಾಮಾನ್ಯವಾಗಿ ಕ್ಯಾಪ್ ಅಥವಾ ಕ್ರೌನ್ ಅನ್ನುತ್ತಾರೆ. ಇದನ್ನು ಡೆಂಟಲ್ ಸಿಮೆಂಟ್‌ನಿಂದ ಫಿಕ್ಸ್ ಮಾಡಲಾಗುತ್ತದೆ.

-ಡಾ. ಸಿ.ಪಿ. ಕಾತ್ಯಾಯಿನಿ, ಅಧ್ಯಾಪಕರು, ಹಲ್ಲು ನ್ಯೂನ ಪೂರಣ ಶಾಸ್ತ್ರ ವಿಭಾಗ, ಜೆಎಸ್‌ಎಸ್ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮೈಸೂರು

 

andolanait

Recent Posts

ತಮಿಳುನಾಡು, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ; ಬಿಗಿ ಭದ್ರತೆಯಲ್ಲಿ ಮತದಾನ ಆರಂಭ

ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪಶ್ಚಿಮ…

34 mins ago

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

10 hours ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

10 hours ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

11 hours ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

11 hours ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

13 hours ago