ಆಂದೋಲನ ಪುರವಣಿ

ಯೋಗ ಕ್ಷೇಮ : ನಡಿಗೆ ಮಾನಸಿಕ, ದೈಹಿಕ ಕ್ಷಮತೆಯ ಕೀಲಿ ಕೈ

ನಡಿಗೆ ಅಥವಾ ವಾಕಿಂಗ್ ಮಾಡುವುದು ದೇಹಕ್ಕೆ ಅತೀ ಮುಖ್ಯ.ಪ್ರತಿನಿತ್ಯ ನಾವು ಮಾಡುವ ೩೦ ನಿಮಿಷಗಳ ವಾಕಿಂಗ್ ಅನೇಕ ಪ್ರಯೋಜನಗಳನ್ನು ನೀಡುವುದಲ್ಲದೆ, ಆರೋಗ್ಯಕರ ಜೀವನಕ್ಕೆ ಅನುವು ಮಾಡಿಕೊಡುತ್ತದೆ.

ಊಟ ಮಾಡಿದ ತಕ್ಷಣ ಮಲಗುವುದು, ಬೆಳಿಗ್ಗೆ 8 ಗಂಟೆಯವರೆಗೆ ಮಲಗುವುದು,ಮಧ್ಯಾಹ್ನದ ಸಮಯದಲ್ಲಿ ಮಲಗುವುದು. ಇವು ಸೋಮಾರಿತನದ ಸಂಕೇತ.

* ನಡಿಗೆ ದೇಹದ ಕೊಬ್ಬನ್ನು ಕಡಿಮೆ ಮಾಡುವುದಲ್ಲದೆ, ದೇಹದ ತೂಕವನ್ನು ಇಳಿಸಿಕೊಳ್ಳಬಹುದು.

* ತೆಳುವಾದ ದೇಹ ಸೌಂದರ್ಯ ಪಡೆಯಬೇಕೆನ್ನುವವರು ಪ್ರತಿನಿತ್ಯ ಬಿರುಸಾದ ವಾಕಿಂಗ್ ಮಾಡಬೇಕು.

*ದೇಹ ದಂಡನೆ ಮತ್ತು ಆಹಾರ ಇವೆರಡೂ ಒಂದೇ ರೀತಿಯ ಫಲಿತಾಂಶವನ್ನು ನೀಡುವುದರಿಂದ ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಬೇಕು.

*ಇತ್ತೀಚೆಗೆ ಸಣ್ಣ ವಯಸ್ಸಿನಲ್ಲೇ ಹೃದ್ರೋಗದ ಅಪಾಯ ಕಂಡುಬರುತ್ತಿದೆ. ಪ್ರತಿನಿತ್ಯ ನಡಿಗೆಯಿಂದ ಇದನ್ನು ತಡೆಯಬಹುದು.

*ವಾಕಿಂಗ್ ಮಾಡುವುದರಿಂದ ಅಧಿಕ ರಕ್ತದೊತ್ತಡವನ್ನು ಸುಧಾರಿಸಿಕೊಳ್ಳಬಹುದು.

*ಟೈಪ್-2 ಮಧುಮೇಹ ಹೊಂದಿರುವವರು ನಡಿಗೆಯಿಂದಾಗಿ ಬಿಪಿಯನ್ನು ಸುಧಾರಿಸಿಕೊಳ್ಳಬಹುದು.

*ನಡಿಗೆಯು ಹೃದಯ ರಕ್ತನಾಳ ಆರೋಗ್ಯಕರವಾಗಿರುವಂತೆ ಮಾಡುತ್ತದೆ.

*ದೇಹದ ಮೂಳೆಗಳು ಮತ್ತು ಸ್ನಾಯುಗಳನ್ನು ನಡಿಗೆ ಬಲಪಡಿಸುತ್ತದೆ.

* ದೇಹದಲ್ಲಿನ ಶಕ್ತಿಯ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

*ಮನಸ್ಥಿತಿ, ಅರಿವು,ಸ್ಮರಣೆ ಮತ್ತು ನಿದ್ರೆಯನ್ನು ಸುಧಾರಿಸುತ್ತದೆ.

* ದೈನಂದಿನ ಒತ್ತಡವನ್ನು ಕಡಿಮೆ ಮಾಡಿ ಉಲ್ಲಸಿತವಾಗಿರಿಸುತ್ತದೆ.

* ಬೆಳಿಗ್ಗೆ ಅಥವಾ ಸಾಯಂಕಾಲ ನಿರ್ಧಿಷ್ಟ ಸಮಯದಲ್ಲಿ ವಾಕಿಂಗ್ ಮಾಡಿ,

*ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.ಒಮಿಕ್ರಾನ್ ನಂತಹ ಸಾಂಕ್ರಾಮಿಕ ರೋಗಗಳ ನಡುವೆ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ವ್ಯಾಕ್ಸಿನ್ ಮಾತ್ರ ಕೆಲಸ ಮಾಡುವುದಿಲ್ಲ. ಬದಲಾಗಿ ದೈಹಿಕ ದಂಡನೆಯೂ ಅವಶ್ಯಕ.

ಹಾಗಾಗಿ ಮರಗಿಡಗಳ ತಂಪಾದ ಗಾಳಿಯನ್ನು ಆಸ್ವಾಧಿಸುತ್ತಾ, ಉತ್ತಮ ಸಂಗೀತ ಹಿನ್ನೆಲೆಯ ಹಾಡುಗಳನ್ನು ಕೇಳುತ್ತಾ ವಾಕ್ ಮಾಡಿ,ಈ ರೀತಿಯ ಅಭ್ಯಾಸ ಪ್ರತಿನಿತ್ಯ ನಡಿಗೆಯ ಉತ್ತಮ ಅಭ್ಯಾಸದೆಡೆಗೆ ಪ್ರೇರೇಪಿಸುತ್ತದೆ.

andolanait

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

3 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago