ನಡಿಗೆ ಅಥವಾ ವಾಕಿಂಗ್ ಮಾಡುವುದು ದೇಹಕ್ಕೆ ಅತೀ ಮುಖ್ಯ.ಪ್ರತಿನಿತ್ಯ ನಾವು ಮಾಡುವ ೩೦ ನಿಮಿಷಗಳ ವಾಕಿಂಗ್ ಅನೇಕ ಪ್ರಯೋಜನಗಳನ್ನು ನೀಡುವುದಲ್ಲದೆ, ಆರೋಗ್ಯಕರ ಜೀವನಕ್ಕೆ ಅನುವು ಮಾಡಿಕೊಡುತ್ತದೆ.
ಊಟ ಮಾಡಿದ ತಕ್ಷಣ ಮಲಗುವುದು, ಬೆಳಿಗ್ಗೆ 8 ಗಂಟೆಯವರೆಗೆ ಮಲಗುವುದು,ಮಧ್ಯಾಹ್ನದ ಸಮಯದಲ್ಲಿ ಮಲಗುವುದು. ಇವು ಸೋಮಾರಿತನದ ಸಂಕೇತ.
* ನಡಿಗೆ ದೇಹದ ಕೊಬ್ಬನ್ನು ಕಡಿಮೆ ಮಾಡುವುದಲ್ಲದೆ, ದೇಹದ ತೂಕವನ್ನು ಇಳಿಸಿಕೊಳ್ಳಬಹುದು.
* ತೆಳುವಾದ ದೇಹ ಸೌಂದರ್ಯ ಪಡೆಯಬೇಕೆನ್ನುವವರು ಪ್ರತಿನಿತ್ಯ ಬಿರುಸಾದ ವಾಕಿಂಗ್ ಮಾಡಬೇಕು.
*ದೇಹ ದಂಡನೆ ಮತ್ತು ಆಹಾರ ಇವೆರಡೂ ಒಂದೇ ರೀತಿಯ ಫಲಿತಾಂಶವನ್ನು ನೀಡುವುದರಿಂದ ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಬೇಕು.
*ಇತ್ತೀಚೆಗೆ ಸಣ್ಣ ವಯಸ್ಸಿನಲ್ಲೇ ಹೃದ್ರೋಗದ ಅಪಾಯ ಕಂಡುಬರುತ್ತಿದೆ. ಪ್ರತಿನಿತ್ಯ ನಡಿಗೆಯಿಂದ ಇದನ್ನು ತಡೆಯಬಹುದು.
*ವಾಕಿಂಗ್ ಮಾಡುವುದರಿಂದ ಅಧಿಕ ರಕ್ತದೊತ್ತಡವನ್ನು ಸುಧಾರಿಸಿಕೊಳ್ಳಬಹುದು.
*ಟೈಪ್-2 ಮಧುಮೇಹ ಹೊಂದಿರುವವರು ನಡಿಗೆಯಿಂದಾಗಿ ಬಿಪಿಯನ್ನು ಸುಧಾರಿಸಿಕೊಳ್ಳಬಹುದು.
*ನಡಿಗೆಯು ಹೃದಯ ರಕ್ತನಾಳ ಆರೋಗ್ಯಕರವಾಗಿರುವಂತೆ ಮಾಡುತ್ತದೆ.
*ದೇಹದ ಮೂಳೆಗಳು ಮತ್ತು ಸ್ನಾಯುಗಳನ್ನು ನಡಿಗೆ ಬಲಪಡಿಸುತ್ತದೆ.
* ದೇಹದಲ್ಲಿನ ಶಕ್ತಿಯ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
*ಮನಸ್ಥಿತಿ, ಅರಿವು,ಸ್ಮರಣೆ ಮತ್ತು ನಿದ್ರೆಯನ್ನು ಸುಧಾರಿಸುತ್ತದೆ.
* ದೈನಂದಿನ ಒತ್ತಡವನ್ನು ಕಡಿಮೆ ಮಾಡಿ ಉಲ್ಲಸಿತವಾಗಿರಿಸುತ್ತದೆ.
* ಬೆಳಿಗ್ಗೆ ಅಥವಾ ಸಾಯಂಕಾಲ ನಿರ್ಧಿಷ್ಟ ಸಮಯದಲ್ಲಿ ವಾಕಿಂಗ್ ಮಾಡಿ,
*ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.ಒಮಿಕ್ರಾನ್ ನಂತಹ ಸಾಂಕ್ರಾಮಿಕ ರೋಗಗಳ ನಡುವೆ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ವ್ಯಾಕ್ಸಿನ್ ಮಾತ್ರ ಕೆಲಸ ಮಾಡುವುದಿಲ್ಲ. ಬದಲಾಗಿ ದೈಹಿಕ ದಂಡನೆಯೂ ಅವಶ್ಯಕ.
ಹಾಗಾಗಿ ಮರಗಿಡಗಳ ತಂಪಾದ ಗಾಳಿಯನ್ನು ಆಸ್ವಾಧಿಸುತ್ತಾ, ಉತ್ತಮ ಸಂಗೀತ ಹಿನ್ನೆಲೆಯ ಹಾಡುಗಳನ್ನು ಕೇಳುತ್ತಾ ವಾಕ್ ಮಾಡಿ,ಈ ರೀತಿಯ ಅಭ್ಯಾಸ ಪ್ರತಿನಿತ್ಯ ನಡಿಗೆಯ ಉತ್ತಮ ಅಭ್ಯಾಸದೆಡೆಗೆ ಪ್ರೇರೇಪಿಸುತ್ತದೆ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…