ಆಂದೋಲನ ಪುರವಣಿ

ಯೋಗ ಕ್ಷೇಮ : ನಡಿಗೆ ಮಾನಸಿಕ, ದೈಹಿಕ ಕ್ಷಮತೆಯ ಕೀಲಿ ಕೈ

ನಡಿಗೆ ಅಥವಾ ವಾಕಿಂಗ್ ಮಾಡುವುದು ದೇಹಕ್ಕೆ ಅತೀ ಮುಖ್ಯ.ಪ್ರತಿನಿತ್ಯ ನಾವು ಮಾಡುವ ೩೦ ನಿಮಿಷಗಳ ವಾಕಿಂಗ್ ಅನೇಕ ಪ್ರಯೋಜನಗಳನ್ನು ನೀಡುವುದಲ್ಲದೆ, ಆರೋಗ್ಯಕರ ಜೀವನಕ್ಕೆ ಅನುವು ಮಾಡಿಕೊಡುತ್ತದೆ.

ಊಟ ಮಾಡಿದ ತಕ್ಷಣ ಮಲಗುವುದು, ಬೆಳಿಗ್ಗೆ 8 ಗಂಟೆಯವರೆಗೆ ಮಲಗುವುದು,ಮಧ್ಯಾಹ್ನದ ಸಮಯದಲ್ಲಿ ಮಲಗುವುದು. ಇವು ಸೋಮಾರಿತನದ ಸಂಕೇತ.

* ನಡಿಗೆ ದೇಹದ ಕೊಬ್ಬನ್ನು ಕಡಿಮೆ ಮಾಡುವುದಲ್ಲದೆ, ದೇಹದ ತೂಕವನ್ನು ಇಳಿಸಿಕೊಳ್ಳಬಹುದು.

* ತೆಳುವಾದ ದೇಹ ಸೌಂದರ್ಯ ಪಡೆಯಬೇಕೆನ್ನುವವರು ಪ್ರತಿನಿತ್ಯ ಬಿರುಸಾದ ವಾಕಿಂಗ್ ಮಾಡಬೇಕು.

*ದೇಹ ದಂಡನೆ ಮತ್ತು ಆಹಾರ ಇವೆರಡೂ ಒಂದೇ ರೀತಿಯ ಫಲಿತಾಂಶವನ್ನು ನೀಡುವುದರಿಂದ ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಬೇಕು.

*ಇತ್ತೀಚೆಗೆ ಸಣ್ಣ ವಯಸ್ಸಿನಲ್ಲೇ ಹೃದ್ರೋಗದ ಅಪಾಯ ಕಂಡುಬರುತ್ತಿದೆ. ಪ್ರತಿನಿತ್ಯ ನಡಿಗೆಯಿಂದ ಇದನ್ನು ತಡೆಯಬಹುದು.

*ವಾಕಿಂಗ್ ಮಾಡುವುದರಿಂದ ಅಧಿಕ ರಕ್ತದೊತ್ತಡವನ್ನು ಸುಧಾರಿಸಿಕೊಳ್ಳಬಹುದು.

*ಟೈಪ್-2 ಮಧುಮೇಹ ಹೊಂದಿರುವವರು ನಡಿಗೆಯಿಂದಾಗಿ ಬಿಪಿಯನ್ನು ಸುಧಾರಿಸಿಕೊಳ್ಳಬಹುದು.

*ನಡಿಗೆಯು ಹೃದಯ ರಕ್ತನಾಳ ಆರೋಗ್ಯಕರವಾಗಿರುವಂತೆ ಮಾಡುತ್ತದೆ.

*ದೇಹದ ಮೂಳೆಗಳು ಮತ್ತು ಸ್ನಾಯುಗಳನ್ನು ನಡಿಗೆ ಬಲಪಡಿಸುತ್ತದೆ.

* ದೇಹದಲ್ಲಿನ ಶಕ್ತಿಯ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

*ಮನಸ್ಥಿತಿ, ಅರಿವು,ಸ್ಮರಣೆ ಮತ್ತು ನಿದ್ರೆಯನ್ನು ಸುಧಾರಿಸುತ್ತದೆ.

* ದೈನಂದಿನ ಒತ್ತಡವನ್ನು ಕಡಿಮೆ ಮಾಡಿ ಉಲ್ಲಸಿತವಾಗಿರಿಸುತ್ತದೆ.

* ಬೆಳಿಗ್ಗೆ ಅಥವಾ ಸಾಯಂಕಾಲ ನಿರ್ಧಿಷ್ಟ ಸಮಯದಲ್ಲಿ ವಾಕಿಂಗ್ ಮಾಡಿ,

*ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.ಒಮಿಕ್ರಾನ್ ನಂತಹ ಸಾಂಕ್ರಾಮಿಕ ರೋಗಗಳ ನಡುವೆ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ವ್ಯಾಕ್ಸಿನ್ ಮಾತ್ರ ಕೆಲಸ ಮಾಡುವುದಿಲ್ಲ. ಬದಲಾಗಿ ದೈಹಿಕ ದಂಡನೆಯೂ ಅವಶ್ಯಕ.

ಹಾಗಾಗಿ ಮರಗಿಡಗಳ ತಂಪಾದ ಗಾಳಿಯನ್ನು ಆಸ್ವಾಧಿಸುತ್ತಾ, ಉತ್ತಮ ಸಂಗೀತ ಹಿನ್ನೆಲೆಯ ಹಾಡುಗಳನ್ನು ಕೇಳುತ್ತಾ ವಾಕ್ ಮಾಡಿ,ಈ ರೀತಿಯ ಅಭ್ಯಾಸ ಪ್ರತಿನಿತ್ಯ ನಡಿಗೆಯ ಉತ್ತಮ ಅಭ್ಯಾಸದೆಡೆಗೆ ಪ್ರೇರೇಪಿಸುತ್ತದೆ.

andolanait

Recent Posts

ಕಾವೇರಿ ಜಲವಿವಾದ: ಸೆ.15ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಸೆಪ್ಟೆಂಬರ್‌ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…

5 hours ago

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…

6 hours ago

ಎಚ್.ಡಿ.ಕೋಟೆ: ಸಾರ್ವಜನಿಕರಿಗೆ ಆತಂಕ ಮೂಡಿಸಿದ್ದ ಹುಲಿ ಸೆರೆ

ಎಚ್.ಡಿ. ಕೋಟೆ: ತಾಲೂಕಿನ ಹೊಸ ಹುಳಲು ಗ್ರಾಮದಲ್ಲಿ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ.…

6 hours ago

ರಾಜಕೀಯ ಮೇಲಾಟ ನಿಲ್ಲಲಿ; ಸಾಮಾನ್ಯರ ವಿಷಯ ಚರ್ಚೆಯಾಗಲಿ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಕೇಂದ್ರ ಬಿಂದುವಾಗಿದ್ದು,…

11 hours ago

ಪ್ರೇಮವೂ ಬಂಡಾಯದ ದನಿಯೇ – ಅಮೃತಾ ಪ್ರೀತಮ್

ರೇಣುಕಾ ನಿಡಗುಂದಿ ಮತ್ತೆ ಸಿಗುವೆ.. ಆದರೆ ಎಲ್ಲಿ? ಹೇಗೆ ನನಗೂ ತಿಳಿಯದು, ಈ ನಶ್ವರ ಲೋಕದ ಹಂಗು ಆತ್ಮಕ್ಕಿಲ್ಲ ನಾ…

11 hours ago

ನೀರಸವಾಯಿತು ರಾಜ್ಯ ವಿಧಾನಮಂಡಲ ಅಧಿವೇಶನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಈ ಬಾರಿಯ ರಾಜ್ಯ ವಿಧಾನಮಂಡಲ ಅಧಿವೇಶನ ನಾಡಿನ ಜನರಿಗೆ ರವಾನಿಸಿರುವ ಸಂದೇಶ ಏನು? ಇಂತಹದೊಂದು…

11 hours ago