ನಡಿಗೆ ಅಥವಾ ವಾಕಿಂಗ್ ಮಾಡುವುದು ದೇಹಕ್ಕೆ ಅತೀ ಮುಖ್ಯ.ಪ್ರತಿನಿತ್ಯ ನಾವು ಮಾಡುವ ೩೦ ನಿಮಿಷಗಳ ವಾಕಿಂಗ್ ಅನೇಕ ಪ್ರಯೋಜನಗಳನ್ನು ನೀಡುವುದಲ್ಲದೆ, ಆರೋಗ್ಯಕರ ಜೀವನಕ್ಕೆ ಅನುವು ಮಾಡಿಕೊಡುತ್ತದೆ.
ಊಟ ಮಾಡಿದ ತಕ್ಷಣ ಮಲಗುವುದು, ಬೆಳಿಗ್ಗೆ 8 ಗಂಟೆಯವರೆಗೆ ಮಲಗುವುದು,ಮಧ್ಯಾಹ್ನದ ಸಮಯದಲ್ಲಿ ಮಲಗುವುದು. ಇವು ಸೋಮಾರಿತನದ ಸಂಕೇತ.
* ನಡಿಗೆ ದೇಹದ ಕೊಬ್ಬನ್ನು ಕಡಿಮೆ ಮಾಡುವುದಲ್ಲದೆ, ದೇಹದ ತೂಕವನ್ನು ಇಳಿಸಿಕೊಳ್ಳಬಹುದು.
* ತೆಳುವಾದ ದೇಹ ಸೌಂದರ್ಯ ಪಡೆಯಬೇಕೆನ್ನುವವರು ಪ್ರತಿನಿತ್ಯ ಬಿರುಸಾದ ವಾಕಿಂಗ್ ಮಾಡಬೇಕು.
*ದೇಹ ದಂಡನೆ ಮತ್ತು ಆಹಾರ ಇವೆರಡೂ ಒಂದೇ ರೀತಿಯ ಫಲಿತಾಂಶವನ್ನು ನೀಡುವುದರಿಂದ ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಬೇಕು.
*ಇತ್ತೀಚೆಗೆ ಸಣ್ಣ ವಯಸ್ಸಿನಲ್ಲೇ ಹೃದ್ರೋಗದ ಅಪಾಯ ಕಂಡುಬರುತ್ತಿದೆ. ಪ್ರತಿನಿತ್ಯ ನಡಿಗೆಯಿಂದ ಇದನ್ನು ತಡೆಯಬಹುದು.
*ವಾಕಿಂಗ್ ಮಾಡುವುದರಿಂದ ಅಧಿಕ ರಕ್ತದೊತ್ತಡವನ್ನು ಸುಧಾರಿಸಿಕೊಳ್ಳಬಹುದು.
*ಟೈಪ್-2 ಮಧುಮೇಹ ಹೊಂದಿರುವವರು ನಡಿಗೆಯಿಂದಾಗಿ ಬಿಪಿಯನ್ನು ಸುಧಾರಿಸಿಕೊಳ್ಳಬಹುದು.
*ನಡಿಗೆಯು ಹೃದಯ ರಕ್ತನಾಳ ಆರೋಗ್ಯಕರವಾಗಿರುವಂತೆ ಮಾಡುತ್ತದೆ.
*ದೇಹದ ಮೂಳೆಗಳು ಮತ್ತು ಸ್ನಾಯುಗಳನ್ನು ನಡಿಗೆ ಬಲಪಡಿಸುತ್ತದೆ.
* ದೇಹದಲ್ಲಿನ ಶಕ್ತಿಯ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
*ಮನಸ್ಥಿತಿ, ಅರಿವು,ಸ್ಮರಣೆ ಮತ್ತು ನಿದ್ರೆಯನ್ನು ಸುಧಾರಿಸುತ್ತದೆ.
* ದೈನಂದಿನ ಒತ್ತಡವನ್ನು ಕಡಿಮೆ ಮಾಡಿ ಉಲ್ಲಸಿತವಾಗಿರಿಸುತ್ತದೆ.
* ಬೆಳಿಗ್ಗೆ ಅಥವಾ ಸಾಯಂಕಾಲ ನಿರ್ಧಿಷ್ಟ ಸಮಯದಲ್ಲಿ ವಾಕಿಂಗ್ ಮಾಡಿ,
*ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.ಒಮಿಕ್ರಾನ್ ನಂತಹ ಸಾಂಕ್ರಾಮಿಕ ರೋಗಗಳ ನಡುವೆ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ವ್ಯಾಕ್ಸಿನ್ ಮಾತ್ರ ಕೆಲಸ ಮಾಡುವುದಿಲ್ಲ. ಬದಲಾಗಿ ದೈಹಿಕ ದಂಡನೆಯೂ ಅವಶ್ಯಕ.
ಹಾಗಾಗಿ ಮರಗಿಡಗಳ ತಂಪಾದ ಗಾಳಿಯನ್ನು ಆಸ್ವಾಧಿಸುತ್ತಾ, ಉತ್ತಮ ಸಂಗೀತ ಹಿನ್ನೆಲೆಯ ಹಾಡುಗಳನ್ನು ಕೇಳುತ್ತಾ ವಾಕ್ ಮಾಡಿ,ಈ ರೀತಿಯ ಅಭ್ಯಾಸ ಪ್ರತಿನಿತ್ಯ ನಡಿಗೆಯ ಉತ್ತಮ ಅಭ್ಯಾಸದೆಡೆಗೆ ಪ್ರೇರೇಪಿಸುತ್ತದೆ.
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…
ಭಾರತೀಯ ಚಿತ್ರೋದ್ಯಮದ ಉತ್ತೇಜನಕ್ಕಾಗಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮುಂದಾಗಿರುವ ಸುದ್ದಿ. ಚಿತ್ರರಂಗಕ್ಕೆ ಸಂಬಂಧಿಸಿದಂತೆ, ಚಿತ್ರಗಳನ್ನು ವರ್ಗೀಕರಿಸಿ, ಪ್ರಮಾಣಪತ್ರ…
ನವೀನ್ ಡಿಸೋಜ ತ್ವರಿತಗತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ; ಒಟ್ಟು ೪,೬೮,೬೫೭ ನಮೂನೆ ವಿತರಣೆ ಮೂಲಕ ಶೇ.೧೦೦ ಪ್ರಗತಿ…
ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡುವಿನದೊಡ್ಡಿ ಮತ್ತು ಅರ್ಧನಾರೀಪುರ ಗ್ರಾಮಗಳಿಗೆ ಗುರುವಾರ ಗ್ರಾಮ ಪಂಚಾಯಿತಿ ವತಿಯಿಂದ ಟ್ಯಾಂಕರ್…