ಆಂದೋಲನ ಪುರವಣಿ

ಯೋಗಕ್ಷೇಮ : ಹಿಮ್ಮಡಿ ನೋವಿದ್ದರೆ ಹೀಗೆ ಮಾಡಿ

ವಯಸ್ಸಾಗುತ್ತಾ ಹೋದಂತೆ ಹಿಮ್ಮಡಿ, ಪಾದಗಳಲ್ಲಿ ನೋವು ಕಾಣಿಸಿಕೊಳ್ಳುವುದು ಸಹಜ. ಇದನ್ನು ವೈದ್ಯಕೀಯ ಭಾಷೆಯಲ್ಲಿ ಫ್ಲಾಂಟರ್ ಫಾಸಿಟಿಸ್ ಎನ್ನುತ್ತಾರೆ. ಬೆಳಿಗ್ಗೆ ಏಳುವಾಗಲೇ ನೋವು, ನಡೆದಾಡುವಾಗ ಏನೋ ಚುಚ್ಚಿದ ರೀತಿಯ ಅನುಭವ, ಮಾಂಸಖಂಡಗಳಲ್ಲಿ ಸೆಳೆತ ಉಂಟಾಗುವುದು ಈ ಸಮಸ್ಯೆಯ ಲಕ್ಷಣಗಳು.

ನೋವು ಕಾಣಿಸಿಕೊಂಡಾಗಿ ಪೇನ್ ಕಿಲ್ಲರ್ ಮಾತ್ರೆಗಳನ್ನು ತೆಗೆದುಕೊಂಡು ತಕ್ಷಣಕ್ಕೆ ನೋವಿನಿಂದ ಪಾರಾಗಬಹುದು. ಆದರೆ ಇದರಿಂದ ದೀರ್ಘಕಾಲೀನ ಪರಿಹಾರ ಸಾಧ್ಯವಾಗುವುದಿಲ್ಲ. ಹಾಗಾಗಿ ಈ ಕೆಳಗಿನ ಸರಳ ಮಾರ್ಗಗಳನ್ನು ಅನುಸರಿಸಿದರೆ ಹಿಮ್ಮಡಿ, ಪಾದಗಳ ನೋವಿಗೆ ಪರಿಹಾರ ಸಿಗುತ್ತದೆ.

* ಬೆಳಿಗ್ಗೆ ಏಳುವ ಮುನ್ನವೇ ಮಲಗಿದ್ದಲ್ಲೇ ಎರಡೂ ಪಾದಗಳನ್ನು ಒಟ್ಟಿಗೆ ಎಷ್ಟು ಸಾಧ್ಯವೋ ಅಷ್ಟು ಮುಂದಕ್ಕೆ-ಹಿಂದಕ್ಕೆ ಆಡಿಸಿ. ಈ ರೀತಿಯಾಗಿ ಕನಿಷ್ಟ ೫೦ ಬಾರಿ ಮಾಡಿರಿ. ಇದರಿಂದ ಇಡೀ ದಿನ ಪಾದಗಳ ನೋವು ಕಾಣಿಸಿಕೊಳ್ಳುವುದಿಲ್ಲ.

* ಟೆನ್ನಿಸ್ ಬಾಲ್ ಅಥವಾ ಅಷ್ಟೇ ಗಾತ್ರದ ಮೆತ್ತನೆಯ ವಸ್ತುವನ್ನು ಕೆಳಗೆ ಇಟ್ಟು ನೋವಿರುವ ಪಾದವನ್ನು ಅದರ ಮೇಲಿಟ್ಟು, ಪಾದವನ್ನು ಹಿಂದೆ ಮುಂದೆ ಆಡಿಸಿರಿ.

* ರಾತ್ರಿ ವೇಳೆ ಬಿಸಿ ನೀರಿಗೆ ಕಲ್ಲುಪ್ಪು ಹಾಕಿ ಚೆನ್ನಾಗಿ ಕರಗಿದ ನಂತರ ಪಾದಗಳನ್ನು ಅದರಲ್ಲಿ ಮುಳುಗಿಸಿ ಅರ್ಧ ಘಂಟೆ ಕುಳಿತುಕೊಳ್ಳಿ. ನೋವು ಕಮ್ಮಿಾಂಗುತ್ತದೆ.

* ಪ್ರತಿ ದಿನ ಅರ್ಧ ಗಂಟೆ ಬರಿಗಾಲಿನಲ್ಲಿ ನಡೆಯುವ ಅಭ್ಯಾಸ ರೂಢಿಸಿಕೊಳ್ಳಿ. ಇದರಿಂದ ನೋವು ನಿಧಾನವಾಗಿ ಕಡಿಮೆಯಾಗುತ್ತದೆ.

* ಮಾರುಕಟ್ಟೆಯಲ್ಲಿ ಎಂಸಿಪಿ ಅಥವಾ ಆರ್ಥೂಪೀಡಿಕ್ ಚಪ್ಪಲಿ/ಶೂಗಳು ಸಿಗುತ್ತವೆ. ಇವುಗಳ ಬಳಕೆಯಿಂದ ನೋವು ಕಡಿಮೆಯಾಗುತ್ತದೆ.

andolanait

Recent Posts

ನನ್ನ ಇಲಾಖೆಯಲ್ಲಿ 4 ಸಾವಿರ ಹುದ್ದೆಗಳಿಗೆ ನೇಮಕಾತಿ: ಸಚಿವ ಪರಮೇಶ್ವರ್‌

ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಬೃಹತ್‌ ಹೋರಾಟ ಕುರಿತು ಗೃಹ ಸಚಿವ ಪರಮೇಶ್ವರ್‌…

7 mins ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು…

27 mins ago

ಶಾಸಕರ ಪತ್ರಾಸ್ತ್ರ ; ಸಿಎಂಗೆ ಬಲ

ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ರಾಜ್ಯ ಸಚಿವ ಸಂಪುಟವನ್ನು ಪುನರ್ರಚಿಸಬೇಕು, ಮೊದಲ ಬಾರಿ ಶಾಸಕರಾಗಿರುವವರಿಗೆ ಸಂಪುಟದಲ್ಲಿ ಐದು ಸ್ಥಾನಗಳನ್ನು ನೀಡಬೇಕು, ಕೆಲಸ ಮಾಡದ…

37 mins ago

ಕಳವು ಪ್ರಕರಣ ಬೇಧಿಸುವಲ್ಲಿ ಮೈಸೂರು ನಗರ ಪೊಲೀಸರು ಯಶಸ್ವಿ: ಸೀಮಾ ಲಾಟ್ಕರ್‌ ಸಂತಸ

ಮೈಸೂರು: ಮೈಸೂರು ನಗರ ಪೊಲೀಸ್ ಸ್ವತ್ತು ಕಳುವು ಪ್ರಕರಣಗಳನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತೆ…

55 mins ago

ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ ಅರಾಜಕತೆ ಗ್ಯಾರಂಟಿ: ಆರ್.‌ಅಶೋಕ್‌ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ…

1 hour ago

ಮಡಿಕೇರಿ| 20 ಅಡಿ ಆಳದ ಗದ್ದೆಗೆ ಉರುಳಿದ ಕಾರು

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ…

1 hour ago