ಆಂದೋಲನ ಪುರವಣಿ

ಯೋಗಕ್ಷೇಮ : ಹಿಮ್ಮಡಿ ನೋವಿದ್ದರೆ ಹೀಗೆ ಮಾಡಿ

ವಯಸ್ಸಾಗುತ್ತಾ ಹೋದಂತೆ ಹಿಮ್ಮಡಿ, ಪಾದಗಳಲ್ಲಿ ನೋವು ಕಾಣಿಸಿಕೊಳ್ಳುವುದು ಸಹಜ. ಇದನ್ನು ವೈದ್ಯಕೀಯ ಭಾಷೆಯಲ್ಲಿ ಫ್ಲಾಂಟರ್ ಫಾಸಿಟಿಸ್ ಎನ್ನುತ್ತಾರೆ. ಬೆಳಿಗ್ಗೆ ಏಳುವಾಗಲೇ ನೋವು, ನಡೆದಾಡುವಾಗ ಏನೋ ಚುಚ್ಚಿದ ರೀತಿಯ ಅನುಭವ, ಮಾಂಸಖಂಡಗಳಲ್ಲಿ ಸೆಳೆತ ಉಂಟಾಗುವುದು ಈ ಸಮಸ್ಯೆಯ ಲಕ್ಷಣಗಳು.

ನೋವು ಕಾಣಿಸಿಕೊಂಡಾಗಿ ಪೇನ್ ಕಿಲ್ಲರ್ ಮಾತ್ರೆಗಳನ್ನು ತೆಗೆದುಕೊಂಡು ತಕ್ಷಣಕ್ಕೆ ನೋವಿನಿಂದ ಪಾರಾಗಬಹುದು. ಆದರೆ ಇದರಿಂದ ದೀರ್ಘಕಾಲೀನ ಪರಿಹಾರ ಸಾಧ್ಯವಾಗುವುದಿಲ್ಲ. ಹಾಗಾಗಿ ಈ ಕೆಳಗಿನ ಸರಳ ಮಾರ್ಗಗಳನ್ನು ಅನುಸರಿಸಿದರೆ ಹಿಮ್ಮಡಿ, ಪಾದಗಳ ನೋವಿಗೆ ಪರಿಹಾರ ಸಿಗುತ್ತದೆ.

* ಬೆಳಿಗ್ಗೆ ಏಳುವ ಮುನ್ನವೇ ಮಲಗಿದ್ದಲ್ಲೇ ಎರಡೂ ಪಾದಗಳನ್ನು ಒಟ್ಟಿಗೆ ಎಷ್ಟು ಸಾಧ್ಯವೋ ಅಷ್ಟು ಮುಂದಕ್ಕೆ-ಹಿಂದಕ್ಕೆ ಆಡಿಸಿ. ಈ ರೀತಿಯಾಗಿ ಕನಿಷ್ಟ ೫೦ ಬಾರಿ ಮಾಡಿರಿ. ಇದರಿಂದ ಇಡೀ ದಿನ ಪಾದಗಳ ನೋವು ಕಾಣಿಸಿಕೊಳ್ಳುವುದಿಲ್ಲ.

* ಟೆನ್ನಿಸ್ ಬಾಲ್ ಅಥವಾ ಅಷ್ಟೇ ಗಾತ್ರದ ಮೆತ್ತನೆಯ ವಸ್ತುವನ್ನು ಕೆಳಗೆ ಇಟ್ಟು ನೋವಿರುವ ಪಾದವನ್ನು ಅದರ ಮೇಲಿಟ್ಟು, ಪಾದವನ್ನು ಹಿಂದೆ ಮುಂದೆ ಆಡಿಸಿರಿ.

* ರಾತ್ರಿ ವೇಳೆ ಬಿಸಿ ನೀರಿಗೆ ಕಲ್ಲುಪ್ಪು ಹಾಕಿ ಚೆನ್ನಾಗಿ ಕರಗಿದ ನಂತರ ಪಾದಗಳನ್ನು ಅದರಲ್ಲಿ ಮುಳುಗಿಸಿ ಅರ್ಧ ಘಂಟೆ ಕುಳಿತುಕೊಳ್ಳಿ. ನೋವು ಕಮ್ಮಿಾಂಗುತ್ತದೆ.

* ಪ್ರತಿ ದಿನ ಅರ್ಧ ಗಂಟೆ ಬರಿಗಾಲಿನಲ್ಲಿ ನಡೆಯುವ ಅಭ್ಯಾಸ ರೂಢಿಸಿಕೊಳ್ಳಿ. ಇದರಿಂದ ನೋವು ನಿಧಾನವಾಗಿ ಕಡಿಮೆಯಾಗುತ್ತದೆ.

* ಮಾರುಕಟ್ಟೆಯಲ್ಲಿ ಎಂಸಿಪಿ ಅಥವಾ ಆರ್ಥೂಪೀಡಿಕ್ ಚಪ್ಪಲಿ/ಶೂಗಳು ಸಿಗುತ್ತವೆ. ಇವುಗಳ ಬಳಕೆಯಿಂದ ನೋವು ಕಡಿಮೆಯಾಗುತ್ತದೆ.

andolanait

Recent Posts

ಸ್ಥಳೀಯವಾಗಿ ಬಿಜೆಪಿಯೊಂದಿಗೆ ಮೈತ್ರಿ ಹೊಂದಾಣಿಕೆ ಕಷ್ಟ : ಎಚ್‌ಡಿಡಿ

ಬೆಂಗಳೂರು : ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ…

36 seconds ago

ಸಿಲಿಂಡರ್ ಸ್ಪೋಟ ಪ್ರಕರಣ | ಮೃತ ಸಲೀಂ ಜೊತೆ ಬಂದವರು ನಾಪತ್ತೆ‌ ; ಲಾಡ್ಜ್‌ ಶೋಧ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯಭಾಗವಾದ ಅರಮನೆಯ ಮುಂಭಾಗ ಕ್ರಿಸ್‍ಮಸ್ ರಜೆಯ ಸಂಭ್ರಮದ ನಡುವೆಯೇ ಗುರುವಾರ ರಾತ್ರಿ ನಡೆದ…

27 mins ago

ದೇಶದದ್ಯಾಂತ ಇಂದಿನಿಂದ ರೈಲು ಪ್ರಯಾಣ ದರ ಏರಿಕೆ

ಹೊಸದಿಲ್ಲಿ : ಇಂದಿನಿಂದಲೇ ದೇಶದದ್ಯಾಂತ ಜಾರಿಯಾಗುವಂತೆ ರೈಲು ಪ್ರಯಾಣ ದರ ಏರಿಕೆಯಾಗಿದೆ. ಕಳೆದ ವಾರ ರೈಲ್ವೆ ಇಲಾಖೆ ಪ್ರಯಾಣ ದರವನ್ನು…

37 mins ago

ಚಿತ್ರದುರ್ಗ ಬಸ್‌ ದುರಂತ | ಬಸ್‌ ಚಾಲಕ ಮೊಹಮ್ಮದ್‌ ರಫೀಕ್‌ ಸಾವು ; ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಚಿತ್ರದುರ್ಗಾ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ…

43 mins ago

ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟ : ಮಹತ್ವದ ಮಾಹಿತಿ ಕೊಟ್ಟ ಗೃಹ ಸಚಿವ ಪರಮೇಶ್ವರ

ಮೈಸೂರು : ಮೈಸೂರು ಅರಮನೆ ಮುಂಭಾಗದಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು…

46 mins ago

ಸ್ಪೋಟ ದುರಂತ | ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಮಹದೇವಪ್ಪ ; ಬಳಿಕ ಹೇಳಿದ್ದೇನು?

ಮೈಸೂರು : ಮೈಸೂರಿನ ಅರಮನೆ ಬಳಿ ಹಿಲೀಯಂ ಗ್ಯಾಸ್ ಸಿಲಿಂಡರ್ ಸ್ಪೋಟ ದುರಂತ ಪ್ರಕರಣ ಸಂಬಂಧ ಶುಕ್ರವಾರ ಜಿಲ್ಲಾ ಉಸ್ತುವಾರಿ…

49 mins ago