ಆಂದೋಲನ ಪುರವಣಿ

ಯೋಗಕ್ಷೇಮ : ಹಿಮ್ಮಡಿ ನೋವಿದ್ದರೆ ಹೀಗೆ ಮಾಡಿ

ವಯಸ್ಸಾಗುತ್ತಾ ಹೋದಂತೆ ಹಿಮ್ಮಡಿ, ಪಾದಗಳಲ್ಲಿ ನೋವು ಕಾಣಿಸಿಕೊಳ್ಳುವುದು ಸಹಜ. ಇದನ್ನು ವೈದ್ಯಕೀಯ ಭಾಷೆಯಲ್ಲಿ ಫ್ಲಾಂಟರ್ ಫಾಸಿಟಿಸ್ ಎನ್ನುತ್ತಾರೆ. ಬೆಳಿಗ್ಗೆ ಏಳುವಾಗಲೇ ನೋವು, ನಡೆದಾಡುವಾಗ ಏನೋ ಚುಚ್ಚಿದ ರೀತಿಯ ಅನುಭವ, ಮಾಂಸಖಂಡಗಳಲ್ಲಿ ಸೆಳೆತ ಉಂಟಾಗುವುದು ಈ ಸಮಸ್ಯೆಯ ಲಕ್ಷಣಗಳು.

ನೋವು ಕಾಣಿಸಿಕೊಂಡಾಗಿ ಪೇನ್ ಕಿಲ್ಲರ್ ಮಾತ್ರೆಗಳನ್ನು ತೆಗೆದುಕೊಂಡು ತಕ್ಷಣಕ್ಕೆ ನೋವಿನಿಂದ ಪಾರಾಗಬಹುದು. ಆದರೆ ಇದರಿಂದ ದೀರ್ಘಕಾಲೀನ ಪರಿಹಾರ ಸಾಧ್ಯವಾಗುವುದಿಲ್ಲ. ಹಾಗಾಗಿ ಈ ಕೆಳಗಿನ ಸರಳ ಮಾರ್ಗಗಳನ್ನು ಅನುಸರಿಸಿದರೆ ಹಿಮ್ಮಡಿ, ಪಾದಗಳ ನೋವಿಗೆ ಪರಿಹಾರ ಸಿಗುತ್ತದೆ.

* ಬೆಳಿಗ್ಗೆ ಏಳುವ ಮುನ್ನವೇ ಮಲಗಿದ್ದಲ್ಲೇ ಎರಡೂ ಪಾದಗಳನ್ನು ಒಟ್ಟಿಗೆ ಎಷ್ಟು ಸಾಧ್ಯವೋ ಅಷ್ಟು ಮುಂದಕ್ಕೆ-ಹಿಂದಕ್ಕೆ ಆಡಿಸಿ. ಈ ರೀತಿಯಾಗಿ ಕನಿಷ್ಟ ೫೦ ಬಾರಿ ಮಾಡಿರಿ. ಇದರಿಂದ ಇಡೀ ದಿನ ಪಾದಗಳ ನೋವು ಕಾಣಿಸಿಕೊಳ್ಳುವುದಿಲ್ಲ.

* ಟೆನ್ನಿಸ್ ಬಾಲ್ ಅಥವಾ ಅಷ್ಟೇ ಗಾತ್ರದ ಮೆತ್ತನೆಯ ವಸ್ತುವನ್ನು ಕೆಳಗೆ ಇಟ್ಟು ನೋವಿರುವ ಪಾದವನ್ನು ಅದರ ಮೇಲಿಟ್ಟು, ಪಾದವನ್ನು ಹಿಂದೆ ಮುಂದೆ ಆಡಿಸಿರಿ.

* ರಾತ್ರಿ ವೇಳೆ ಬಿಸಿ ನೀರಿಗೆ ಕಲ್ಲುಪ್ಪು ಹಾಕಿ ಚೆನ್ನಾಗಿ ಕರಗಿದ ನಂತರ ಪಾದಗಳನ್ನು ಅದರಲ್ಲಿ ಮುಳುಗಿಸಿ ಅರ್ಧ ಘಂಟೆ ಕುಳಿತುಕೊಳ್ಳಿ. ನೋವು ಕಮ್ಮಿಾಂಗುತ್ತದೆ.

* ಪ್ರತಿ ದಿನ ಅರ್ಧ ಗಂಟೆ ಬರಿಗಾಲಿನಲ್ಲಿ ನಡೆಯುವ ಅಭ್ಯಾಸ ರೂಢಿಸಿಕೊಳ್ಳಿ. ಇದರಿಂದ ನೋವು ನಿಧಾನವಾಗಿ ಕಡಿಮೆಯಾಗುತ್ತದೆ.

* ಮಾರುಕಟ್ಟೆಯಲ್ಲಿ ಎಂಸಿಪಿ ಅಥವಾ ಆರ್ಥೂಪೀಡಿಕ್ ಚಪ್ಪಲಿ/ಶೂಗಳು ಸಿಗುತ್ತವೆ. ಇವುಗಳ ಬಳಕೆಯಿಂದ ನೋವು ಕಡಿಮೆಯಾಗುತ್ತದೆ.

andolanait

Recent Posts

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

2 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

2 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

2 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

3 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

3 hours ago

ಭಾರತವನ್ನು ನರಕಕೂಪ ಎಂದು ಹೀಯಾಳಿಸಿದ ಡೊನಾಲ್ಡ್ ಟ್ರಂಪ್‌: ವಿದೇಶಾಂಗ ಇಲಾಖೆ ಕಿಡಿ

ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ…

4 hours ago