ಆಂದೋಲನ ಪುರವಣಿ

ಯೋಗಕ್ಷೇಮ : ಹಿಮ್ಮಡಿ ನೋವಿದ್ದರೆ ಹೀಗೆ ಮಾಡಿ

ವಯಸ್ಸಾಗುತ್ತಾ ಹೋದಂತೆ ಹಿಮ್ಮಡಿ, ಪಾದಗಳಲ್ಲಿ ನೋವು ಕಾಣಿಸಿಕೊಳ್ಳುವುದು ಸಹಜ. ಇದನ್ನು ವೈದ್ಯಕೀಯ ಭಾಷೆಯಲ್ಲಿ ಫ್ಲಾಂಟರ್ ಫಾಸಿಟಿಸ್ ಎನ್ನುತ್ತಾರೆ. ಬೆಳಿಗ್ಗೆ ಏಳುವಾಗಲೇ ನೋವು, ನಡೆದಾಡುವಾಗ ಏನೋ ಚುಚ್ಚಿದ ರೀತಿಯ ಅನುಭವ, ಮಾಂಸಖಂಡಗಳಲ್ಲಿ ಸೆಳೆತ ಉಂಟಾಗುವುದು ಈ ಸಮಸ್ಯೆಯ ಲಕ್ಷಣಗಳು.

ನೋವು ಕಾಣಿಸಿಕೊಂಡಾಗಿ ಪೇನ್ ಕಿಲ್ಲರ್ ಮಾತ್ರೆಗಳನ್ನು ತೆಗೆದುಕೊಂಡು ತಕ್ಷಣಕ್ಕೆ ನೋವಿನಿಂದ ಪಾರಾಗಬಹುದು. ಆದರೆ ಇದರಿಂದ ದೀರ್ಘಕಾಲೀನ ಪರಿಹಾರ ಸಾಧ್ಯವಾಗುವುದಿಲ್ಲ. ಹಾಗಾಗಿ ಈ ಕೆಳಗಿನ ಸರಳ ಮಾರ್ಗಗಳನ್ನು ಅನುಸರಿಸಿದರೆ ಹಿಮ್ಮಡಿ, ಪಾದಗಳ ನೋವಿಗೆ ಪರಿಹಾರ ಸಿಗುತ್ತದೆ.

* ಬೆಳಿಗ್ಗೆ ಏಳುವ ಮುನ್ನವೇ ಮಲಗಿದ್ದಲ್ಲೇ ಎರಡೂ ಪಾದಗಳನ್ನು ಒಟ್ಟಿಗೆ ಎಷ್ಟು ಸಾಧ್ಯವೋ ಅಷ್ಟು ಮುಂದಕ್ಕೆ-ಹಿಂದಕ್ಕೆ ಆಡಿಸಿ. ಈ ರೀತಿಯಾಗಿ ಕನಿಷ್ಟ ೫೦ ಬಾರಿ ಮಾಡಿರಿ. ಇದರಿಂದ ಇಡೀ ದಿನ ಪಾದಗಳ ನೋವು ಕಾಣಿಸಿಕೊಳ್ಳುವುದಿಲ್ಲ.

* ಟೆನ್ನಿಸ್ ಬಾಲ್ ಅಥವಾ ಅಷ್ಟೇ ಗಾತ್ರದ ಮೆತ್ತನೆಯ ವಸ್ತುವನ್ನು ಕೆಳಗೆ ಇಟ್ಟು ನೋವಿರುವ ಪಾದವನ್ನು ಅದರ ಮೇಲಿಟ್ಟು, ಪಾದವನ್ನು ಹಿಂದೆ ಮುಂದೆ ಆಡಿಸಿರಿ.

* ರಾತ್ರಿ ವೇಳೆ ಬಿಸಿ ನೀರಿಗೆ ಕಲ್ಲುಪ್ಪು ಹಾಕಿ ಚೆನ್ನಾಗಿ ಕರಗಿದ ನಂತರ ಪಾದಗಳನ್ನು ಅದರಲ್ಲಿ ಮುಳುಗಿಸಿ ಅರ್ಧ ಘಂಟೆ ಕುಳಿತುಕೊಳ್ಳಿ. ನೋವು ಕಮ್ಮಿಾಂಗುತ್ತದೆ.

* ಪ್ರತಿ ದಿನ ಅರ್ಧ ಗಂಟೆ ಬರಿಗಾಲಿನಲ್ಲಿ ನಡೆಯುವ ಅಭ್ಯಾಸ ರೂಢಿಸಿಕೊಳ್ಳಿ. ಇದರಿಂದ ನೋವು ನಿಧಾನವಾಗಿ ಕಡಿಮೆಯಾಗುತ್ತದೆ.

* ಮಾರುಕಟ್ಟೆಯಲ್ಲಿ ಎಂಸಿಪಿ ಅಥವಾ ಆರ್ಥೂಪೀಡಿಕ್ ಚಪ್ಪಲಿ/ಶೂಗಳು ಸಿಗುತ್ತವೆ. ಇವುಗಳ ಬಳಕೆಯಿಂದ ನೋವು ಕಡಿಮೆಯಾಗುತ್ತದೆ.

andolanait

Recent Posts

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

38 mins ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

2 hours ago

ಓದುಗರ ಪತ್ರ: ಡಿಕೆಶಿ ಸೂಚನೆ ಸ್ವಾಗತಾರ್ಹ

ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…

4 hours ago

ಓದುಗರ ಪತ್ರ: ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ದಾಖಲಿಸಲಿ

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…

5 hours ago

ಓದುಗರ ಪತ್ರ: ಮಲತಾಯಿ ಧೋರಣೆ ಏಕೆ?

ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ:  ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…

5 hours ago