ಆಂದೋಲನ ಪುರವಣಿ

ಯೋಗಕ್ಷೇಮ : ಹಿಮ್ಮಡಿ ನೋವಿದ್ದರೆ ಹೀಗೆ ಮಾಡಿ

ವಯಸ್ಸಾಗುತ್ತಾ ಹೋದಂತೆ ಹಿಮ್ಮಡಿ, ಪಾದಗಳಲ್ಲಿ ನೋವು ಕಾಣಿಸಿಕೊಳ್ಳುವುದು ಸಹಜ. ಇದನ್ನು ವೈದ್ಯಕೀಯ ಭಾಷೆಯಲ್ಲಿ ಫ್ಲಾಂಟರ್ ಫಾಸಿಟಿಸ್ ಎನ್ನುತ್ತಾರೆ. ಬೆಳಿಗ್ಗೆ ಏಳುವಾಗಲೇ ನೋವು, ನಡೆದಾಡುವಾಗ ಏನೋ ಚುಚ್ಚಿದ ರೀತಿಯ ಅನುಭವ, ಮಾಂಸಖಂಡಗಳಲ್ಲಿ ಸೆಳೆತ ಉಂಟಾಗುವುದು ಈ ಸಮಸ್ಯೆಯ ಲಕ್ಷಣಗಳು.

ನೋವು ಕಾಣಿಸಿಕೊಂಡಾಗಿ ಪೇನ್ ಕಿಲ್ಲರ್ ಮಾತ್ರೆಗಳನ್ನು ತೆಗೆದುಕೊಂಡು ತಕ್ಷಣಕ್ಕೆ ನೋವಿನಿಂದ ಪಾರಾಗಬಹುದು. ಆದರೆ ಇದರಿಂದ ದೀರ್ಘಕಾಲೀನ ಪರಿಹಾರ ಸಾಧ್ಯವಾಗುವುದಿಲ್ಲ. ಹಾಗಾಗಿ ಈ ಕೆಳಗಿನ ಸರಳ ಮಾರ್ಗಗಳನ್ನು ಅನುಸರಿಸಿದರೆ ಹಿಮ್ಮಡಿ, ಪಾದಗಳ ನೋವಿಗೆ ಪರಿಹಾರ ಸಿಗುತ್ತದೆ.

* ಬೆಳಿಗ್ಗೆ ಏಳುವ ಮುನ್ನವೇ ಮಲಗಿದ್ದಲ್ಲೇ ಎರಡೂ ಪಾದಗಳನ್ನು ಒಟ್ಟಿಗೆ ಎಷ್ಟು ಸಾಧ್ಯವೋ ಅಷ್ಟು ಮುಂದಕ್ಕೆ-ಹಿಂದಕ್ಕೆ ಆಡಿಸಿ. ಈ ರೀತಿಯಾಗಿ ಕನಿಷ್ಟ ೫೦ ಬಾರಿ ಮಾಡಿರಿ. ಇದರಿಂದ ಇಡೀ ದಿನ ಪಾದಗಳ ನೋವು ಕಾಣಿಸಿಕೊಳ್ಳುವುದಿಲ್ಲ.

* ಟೆನ್ನಿಸ್ ಬಾಲ್ ಅಥವಾ ಅಷ್ಟೇ ಗಾತ್ರದ ಮೆತ್ತನೆಯ ವಸ್ತುವನ್ನು ಕೆಳಗೆ ಇಟ್ಟು ನೋವಿರುವ ಪಾದವನ್ನು ಅದರ ಮೇಲಿಟ್ಟು, ಪಾದವನ್ನು ಹಿಂದೆ ಮುಂದೆ ಆಡಿಸಿರಿ.

* ರಾತ್ರಿ ವೇಳೆ ಬಿಸಿ ನೀರಿಗೆ ಕಲ್ಲುಪ್ಪು ಹಾಕಿ ಚೆನ್ನಾಗಿ ಕರಗಿದ ನಂತರ ಪಾದಗಳನ್ನು ಅದರಲ್ಲಿ ಮುಳುಗಿಸಿ ಅರ್ಧ ಘಂಟೆ ಕುಳಿತುಕೊಳ್ಳಿ. ನೋವು ಕಮ್ಮಿಾಂಗುತ್ತದೆ.

* ಪ್ರತಿ ದಿನ ಅರ್ಧ ಗಂಟೆ ಬರಿಗಾಲಿನಲ್ಲಿ ನಡೆಯುವ ಅಭ್ಯಾಸ ರೂಢಿಸಿಕೊಳ್ಳಿ. ಇದರಿಂದ ನೋವು ನಿಧಾನವಾಗಿ ಕಡಿಮೆಯಾಗುತ್ತದೆ.

* ಮಾರುಕಟ್ಟೆಯಲ್ಲಿ ಎಂಸಿಪಿ ಅಥವಾ ಆರ್ಥೂಪೀಡಿಕ್ ಚಪ್ಪಲಿ/ಶೂಗಳು ಸಿಗುತ್ತವೆ. ಇವುಗಳ ಬಳಕೆಯಿಂದ ನೋವು ಕಡಿಮೆಯಾಗುತ್ತದೆ.

andolanait

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

21 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

21 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

21 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

21 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

21 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

22 hours ago