ಅಮೇರಿಕಾದ ಕ್ಯಾಲಿಫೋರ್ನಿಯಾ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮಂಡ್ಯದ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿನಿ ಪ್ರೀತಿ ಕಾಂಬಳೆ, ರಾಗಿಯಲ್ಲಿರುವ ಅಪೂರ್ವ ಪೌಷ್ಟಿಕಾಂಶ ಕುರಿತು ಫೆ.12 ರಿಂದ 17ರ ವರೆಗೆ ಸಂಶೋಧನಾ ಪ್ರಬಂಧ ಮಂಡಿಸಿ ಕರ್ನಾಟಕದ ಹೆಮ್ಮೆಯೆನಿಸಿದ್ದಾರೆ.
2020-21ನೇ ಸಾಲಿನಲ್ಲಿ ಮಂಡ್ಯದ ಕೃಷಿ ಮಹಾವಿದ್ಯಾಲಯದ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಪ್ರೀತಿ ಕಾಂಬಳೆ ಅವರು, ವಿಜ್ಞಾನಿಗಳಾದ ಡಾ.ಎಚ್.ಬಿ.ಮಹೇಶ್, ಡಾ.ಎಸ್.ಎಸ್.ಪ್ರಕಾಶ್, ಡಾ.ಎಸ್.ಬಿ ಯೋಗಾನಂದ ಮತ್ತು ಡಾ.ಪಿ.ಮಹದೇವು ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ರಾಗಿಯಲ್ಲಿ ‘ನ್ಯೂಟ್ರೀಷಿಯನ್ ಜೀನ್’ ಎಂಬ ಅಂಶವಿರುವುದನ್ನು ಕಂಡುಕೊಂಡು ಸಮ್ಮೇಳನದಲ್ಲಿ ಮಂಡಿಸಿದ್ದಾರೆ.
ಮೂಲತಃ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಕುಡಚಿ ಹೋಬಳಿಯ ಹಾಲಶಿರಗೂರು ಗ್ರಾಮದ ಆರ್ಥಿಕವಾಗಿ ಹಿಂದುಳಿದ ಕುಟುಂಬದಿಂದ ಬಂದಿರುವ ಪ್ರೀತಿ ಕಾಂಬಳೆ,ಮೂಡಿಗೆರೆಯಲ್ಲಿ ತೋಟಗಾರಿಕೆ ವಿಷಯದಲ್ಲಿ ಬಿಎಸ್ಸಿ ಪದವಿ ಪಡೆದು, ವಿ.ಸಿ.ಫಾರಂ ಕೃಷಿ ವಿದ್ಯಾಲಯದಲ್ಲಿ 2ನೇ ವರ್ಷದ ಎಂಎಸ್ಸಿ (ಕೃಷಿ) ಓದುತ್ತಿದ್ದಾರೆ. ಅನುವಂಶೀಯತೆ ಮತ್ತು ಸಸ್ಯ ತಳಿ ಅಭಿವೃದ್ಧಿ ವಿಭಾಗದಲ್ಲಿ ಸ್ನಾತಕ ಪದವಿ ಪಡೆಯಲು ರಾಗಿ ಬೆಳೆ ಕುರಿತ ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಸಂಶೋಧನೆಗೆ ಕಾರಣವೇನು?
ಜಗತ್ತಿನಲ್ಲಿ ಪ್ರತಿ ವರ್ಷ 5 ಬಿಲಿಯನ್ ಜನರು ಪೌಷ್ಟಿಕಾಂಶ ಮತ್ತು ಲವಣಾಂಶಗಳ ಕೊರತೆಯಿಂದಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ರೈತರ ಬೆಳೆಗಳ ನಷ್ಟ ಮತ್ತು ಜನಸಾಮಾನ್ಯರ ಆರೋಗ್ಯದ ಸಮಸ್ಯೆಗಳನ್ನು ಗಮನಿಸಿ, ಮಂಡ್ಯ ವಿ.ಸಿ. ಫಾರಂನ ಕೃಷಿ ವಿಜ್ಞಾನಿಗಳು ಮತ್ತು ವಿದ್ಯಾರ್ಥಿಗಳು ಹಮ್ಮಿಕೊಂಡ ವಿಚಾರ ಸಂಕಿರಣದಲ್ಲಿ ಅತಿ ಹೆಚ್ಚು ಲವಣಾಂಶಗಳ ಲಭ್ಯತೆ ಇರುವ, ಹೆಚ್ಚು ತಾಪಮಾನ ಸಹಿಸಿಕೊಳ್ಳಬಲ್ಲ ಹಾಗೂ ಕಡಿಮೆ ನೀರು ಬಳಕೆ ಮಾಡಬಲ್ಲ ವಂಶವಾಹಿ ಧಾತುಗಳನ್ನು ಕಂಡುಹಿಡಿದು, ಅವುಗಳನ್ನು ಜನಪ್ರಿಯ ಮತ್ತು ಲಾಭದಾಯಕ ತಳಿಗಳೊಂದಿಗೆ ಸಂಕೀರ್ಣ ಮಾಡುವ ವೈಜ್ಞಾನಿಕ ವಿಷಯ ಹೊಳೆದಿದೆ. ಕೊನೆಗೆ ಅದು ಸಂಶೋಧನೆಗೆ ದಾರಿ ಮಾಡಿಕೊಟ್ಟಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…