ಅಮೇರಿಕಾದ ಕ್ಯಾಲಿಫೋರ್ನಿಯಾ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮಂಡ್ಯದ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿನಿ ಪ್ರೀತಿ ಕಾಂಬಳೆ, ರಾಗಿಯಲ್ಲಿರುವ ಅಪೂರ್ವ ಪೌಷ್ಟಿಕಾಂಶ ಕುರಿತು ಫೆ.12 ರಿಂದ 17ರ ವರೆಗೆ ಸಂಶೋಧನಾ ಪ್ರಬಂಧ ಮಂಡಿಸಿ ಕರ್ನಾಟಕದ ಹೆಮ್ಮೆಯೆನಿಸಿದ್ದಾರೆ.
2020-21ನೇ ಸಾಲಿನಲ್ಲಿ ಮಂಡ್ಯದ ಕೃಷಿ ಮಹಾವಿದ್ಯಾಲಯದ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಪ್ರೀತಿ ಕಾಂಬಳೆ ಅವರು, ವಿಜ್ಞಾನಿಗಳಾದ ಡಾ.ಎಚ್.ಬಿ.ಮಹೇಶ್, ಡಾ.ಎಸ್.ಎಸ್.ಪ್ರಕಾಶ್, ಡಾ.ಎಸ್.ಬಿ ಯೋಗಾನಂದ ಮತ್ತು ಡಾ.ಪಿ.ಮಹದೇವು ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ರಾಗಿಯಲ್ಲಿ ‘ನ್ಯೂಟ್ರೀಷಿಯನ್ ಜೀನ್’ ಎಂಬ ಅಂಶವಿರುವುದನ್ನು ಕಂಡುಕೊಂಡು ಸಮ್ಮೇಳನದಲ್ಲಿ ಮಂಡಿಸಿದ್ದಾರೆ.
ಮೂಲತಃ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಕುಡಚಿ ಹೋಬಳಿಯ ಹಾಲಶಿರಗೂರು ಗ್ರಾಮದ ಆರ್ಥಿಕವಾಗಿ ಹಿಂದುಳಿದ ಕುಟುಂಬದಿಂದ ಬಂದಿರುವ ಪ್ರೀತಿ ಕಾಂಬಳೆ,ಮೂಡಿಗೆರೆಯಲ್ಲಿ ತೋಟಗಾರಿಕೆ ವಿಷಯದಲ್ಲಿ ಬಿಎಸ್ಸಿ ಪದವಿ ಪಡೆದು, ವಿ.ಸಿ.ಫಾರಂ ಕೃಷಿ ವಿದ್ಯಾಲಯದಲ್ಲಿ 2ನೇ ವರ್ಷದ ಎಂಎಸ್ಸಿ (ಕೃಷಿ) ಓದುತ್ತಿದ್ದಾರೆ. ಅನುವಂಶೀಯತೆ ಮತ್ತು ಸಸ್ಯ ತಳಿ ಅಭಿವೃದ್ಧಿ ವಿಭಾಗದಲ್ಲಿ ಸ್ನಾತಕ ಪದವಿ ಪಡೆಯಲು ರಾಗಿ ಬೆಳೆ ಕುರಿತ ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಸಂಶೋಧನೆಗೆ ಕಾರಣವೇನು?
ಜಗತ್ತಿನಲ್ಲಿ ಪ್ರತಿ ವರ್ಷ 5 ಬಿಲಿಯನ್ ಜನರು ಪೌಷ್ಟಿಕಾಂಶ ಮತ್ತು ಲವಣಾಂಶಗಳ ಕೊರತೆಯಿಂದಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ರೈತರ ಬೆಳೆಗಳ ನಷ್ಟ ಮತ್ತು ಜನಸಾಮಾನ್ಯರ ಆರೋಗ್ಯದ ಸಮಸ್ಯೆಗಳನ್ನು ಗಮನಿಸಿ, ಮಂಡ್ಯ ವಿ.ಸಿ. ಫಾರಂನ ಕೃಷಿ ವಿಜ್ಞಾನಿಗಳು ಮತ್ತು ವಿದ್ಯಾರ್ಥಿಗಳು ಹಮ್ಮಿಕೊಂಡ ವಿಚಾರ ಸಂಕಿರಣದಲ್ಲಿ ಅತಿ ಹೆಚ್ಚು ಲವಣಾಂಶಗಳ ಲಭ್ಯತೆ ಇರುವ, ಹೆಚ್ಚು ತಾಪಮಾನ ಸಹಿಸಿಕೊಳ್ಳಬಲ್ಲ ಹಾಗೂ ಕಡಿಮೆ ನೀರು ಬಳಕೆ ಮಾಡಬಲ್ಲ ವಂಶವಾಹಿ ಧಾತುಗಳನ್ನು ಕಂಡುಹಿಡಿದು, ಅವುಗಳನ್ನು ಜನಪ್ರಿಯ ಮತ್ತು ಲಾಭದಾಯಕ ತಳಿಗಳೊಂದಿಗೆ ಸಂಕೀರ್ಣ ಮಾಡುವ ವೈಜ್ಞಾನಿಕ ವಿಷಯ ಹೊಳೆದಿದೆ. ಕೊನೆಗೆ ಅದು ಸಂಶೋಧನೆಗೆ ದಾರಿ ಮಾಡಿಕೊಟ್ಟಿದೆ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…