ಆಂದೋಲನ ಪುರವಣಿ

ಯುವ ಡಾಟ್‌ ಕಾಂ : ವಿಶ್ವಕ್ಕೆ ರಾಗಿಯ ಮಹತ್ವ ಸಾರಿದ ಪ್ರೀತಿ ಕಾಂಬಳೆ

ಅಮೇರಿಕಾದ ಕ್ಯಾಲಿಫೋರ್ನಿಯಾ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮಂಡ್ಯದ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿನಿ ಪ್ರೀತಿ ಕಾಂಬಳೆ, ರಾಗಿಯಲ್ಲಿರುವ ಅಪೂರ್ವ ಪೌಷ್ಟಿಕಾಂಶ ಕುರಿತು ಫೆ.12 ರಿಂದ 17ರ ವರೆಗೆ ಸಂಶೋಧನಾ ಪ್ರಬಂಧ ಮಂಡಿಸಿ ಕರ್ನಾಟಕದ ಹೆಮ್ಮೆಯೆನಿಸಿದ್ದಾರೆ.
2020-21ನೇ ಸಾಲಿನಲ್ಲಿ ಮಂಡ್ಯದ ಕೃಷಿ ಮಹಾವಿದ್ಯಾಲಯದ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಪ್ರೀತಿ ಕಾಂಬಳೆ ಅವರು, ವಿಜ್ಞಾನಿಗಳಾದ ಡಾ.ಎಚ್.ಬಿ.ಮಹೇಶ್, ಡಾ.ಎಸ್.ಎಸ್.ಪ್ರಕಾಶ್, ಡಾ.ಎಸ್.ಬಿ ಯೋಗಾನಂದ ಮತ್ತು ಡಾ.ಪಿ.ಮಹದೇವು ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ರಾಗಿಯಲ್ಲಿ ‘ನ್ಯೂಟ್ರೀಷಿಯನ್ ಜೀನ್’ ಎಂಬ ಅಂಶವಿರುವುದನ್ನು ಕಂಡುಕೊಂಡು ಸಮ್ಮೇಳನದಲ್ಲಿ ಮಂಡಿಸಿದ್ದಾರೆ.
ಮೂಲತಃ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಕುಡಚಿ ಹೋಬಳಿಯ ಹಾಲಶಿರಗೂರು ಗ್ರಾಮದ ಆರ್ಥಿಕವಾಗಿ ಹಿಂದುಳಿದ ಕುಟುಂಬದಿಂದ ಬಂದಿರುವ ಪ್ರೀತಿ ಕಾಂಬಳೆ,ಮೂಡಿಗೆರೆಯಲ್ಲಿ ತೋಟಗಾರಿಕೆ ವಿಷಯದಲ್ಲಿ ಬಿಎಸ್‌ಸಿ ಪದವಿ ಪಡೆದು, ವಿ.ಸಿ.ಫಾರಂ ಕೃಷಿ ವಿದ್ಯಾಲಯದಲ್ಲಿ 2ನೇ ವರ್ಷದ ಎಂಎಸ್‌ಸಿ (ಕೃಷಿ) ಓದುತ್ತಿದ್ದಾರೆ. ಅನುವಂಶೀಯತೆ ಮತ್ತು ಸಸ್ಯ ತಳಿ ಅಭಿವೃದ್ಧಿ ವಿಭಾಗದಲ್ಲಿ ಸ್ನಾತಕ ಪದವಿ ಪಡೆಯಲು ರಾಗಿ ಬೆಳೆ ಕುರಿತ ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಸಂಶೋಧನೆಗೆ ಕಾರಣವೇನು?
ಜಗತ್ತಿನಲ್ಲಿ ಪ್ರತಿ ವರ್ಷ 5 ಬಿಲಿಯನ್ ಜನರು ಪೌಷ್ಟಿಕಾಂಶ ಮತ್ತು ಲವಣಾಂಶಗಳ ಕೊರತೆಯಿಂದಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ರೈತರ ಬೆಳೆಗಳ ನಷ್ಟ ಮತ್ತು ಜನಸಾಮಾನ್ಯರ ಆರೋಗ್ಯದ ಸಮಸ್ಯೆಗಳನ್ನು ಗಮನಿಸಿ, ಮಂಡ್ಯ ವಿ.ಸಿ. ಫಾರಂನ ಕೃಷಿ ವಿಜ್ಞಾನಿಗಳು ಮತ್ತು ವಿದ್ಯಾರ್ಥಿಗಳು ಹಮ್ಮಿಕೊಂಡ ವಿಚಾರ ಸಂಕಿರಣದಲ್ಲಿ ಅತಿ ಹೆಚ್ಚು ಲವಣಾಂಶಗಳ ಲಭ್ಯತೆ ಇರುವ, ಹೆಚ್ಚು ತಾಪಮಾನ ಸಹಿಸಿಕೊಳ್ಳಬಲ್ಲ ಹಾಗೂ ಕಡಿಮೆ ನೀರು ಬಳಕೆ ಮಾಡಬಲ್ಲ ವಂಶವಾಹಿ ಧಾತುಗಳನ್ನು ಕಂಡುಹಿಡಿದು, ಅವುಗಳನ್ನು ಜನಪ್ರಿಯ ಮತ್ತು ಲಾಭದಾಯಕ ತಳಿಗಳೊಂದಿಗೆ ಸಂಕೀರ್ಣ ಮಾಡುವ ವೈಜ್ಞಾನಿಕ ವಿಷಯ ಹೊಳೆದಿದೆ. ಕೊನೆಗೆ ಅದು ಸಂಶೋಧನೆಗೆ ದಾರಿ ಮಾಡಿಕೊಟ್ಟಿದೆ.

 

andolanait

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

2 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

2 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

2 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

3 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

3 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

3 hours ago