ಆಂದೋಲನ ಪುರವಣಿ

ಯುವ ಡಾಟ್‌ ಕಾಂ : ವಿಶ್ವಕ್ಕೆ ರಾಗಿಯ ಮಹತ್ವ ಸಾರಿದ ಪ್ರೀತಿ ಕಾಂಬಳೆ

ಅಮೇರಿಕಾದ ಕ್ಯಾಲಿಫೋರ್ನಿಯಾ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮಂಡ್ಯದ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿನಿ ಪ್ರೀತಿ ಕಾಂಬಳೆ, ರಾಗಿಯಲ್ಲಿರುವ ಅಪೂರ್ವ ಪೌಷ್ಟಿಕಾಂಶ ಕುರಿತು ಫೆ.12 ರಿಂದ 17ರ ವರೆಗೆ ಸಂಶೋಧನಾ ಪ್ರಬಂಧ ಮಂಡಿಸಿ ಕರ್ನಾಟಕದ ಹೆಮ್ಮೆಯೆನಿಸಿದ್ದಾರೆ.
2020-21ನೇ ಸಾಲಿನಲ್ಲಿ ಮಂಡ್ಯದ ಕೃಷಿ ಮಹಾವಿದ್ಯಾಲಯದ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಪ್ರೀತಿ ಕಾಂಬಳೆ ಅವರು, ವಿಜ್ಞಾನಿಗಳಾದ ಡಾ.ಎಚ್.ಬಿ.ಮಹೇಶ್, ಡಾ.ಎಸ್.ಎಸ್.ಪ್ರಕಾಶ್, ಡಾ.ಎಸ್.ಬಿ ಯೋಗಾನಂದ ಮತ್ತು ಡಾ.ಪಿ.ಮಹದೇವು ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ರಾಗಿಯಲ್ಲಿ ‘ನ್ಯೂಟ್ರೀಷಿಯನ್ ಜೀನ್’ ಎಂಬ ಅಂಶವಿರುವುದನ್ನು ಕಂಡುಕೊಂಡು ಸಮ್ಮೇಳನದಲ್ಲಿ ಮಂಡಿಸಿದ್ದಾರೆ.
ಮೂಲತಃ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಕುಡಚಿ ಹೋಬಳಿಯ ಹಾಲಶಿರಗೂರು ಗ್ರಾಮದ ಆರ್ಥಿಕವಾಗಿ ಹಿಂದುಳಿದ ಕುಟುಂಬದಿಂದ ಬಂದಿರುವ ಪ್ರೀತಿ ಕಾಂಬಳೆ,ಮೂಡಿಗೆರೆಯಲ್ಲಿ ತೋಟಗಾರಿಕೆ ವಿಷಯದಲ್ಲಿ ಬಿಎಸ್‌ಸಿ ಪದವಿ ಪಡೆದು, ವಿ.ಸಿ.ಫಾರಂ ಕೃಷಿ ವಿದ್ಯಾಲಯದಲ್ಲಿ 2ನೇ ವರ್ಷದ ಎಂಎಸ್‌ಸಿ (ಕೃಷಿ) ಓದುತ್ತಿದ್ದಾರೆ. ಅನುವಂಶೀಯತೆ ಮತ್ತು ಸಸ್ಯ ತಳಿ ಅಭಿವೃದ್ಧಿ ವಿಭಾಗದಲ್ಲಿ ಸ್ನಾತಕ ಪದವಿ ಪಡೆಯಲು ರಾಗಿ ಬೆಳೆ ಕುರಿತ ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಸಂಶೋಧನೆಗೆ ಕಾರಣವೇನು?
ಜಗತ್ತಿನಲ್ಲಿ ಪ್ರತಿ ವರ್ಷ 5 ಬಿಲಿಯನ್ ಜನರು ಪೌಷ್ಟಿಕಾಂಶ ಮತ್ತು ಲವಣಾಂಶಗಳ ಕೊರತೆಯಿಂದಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ರೈತರ ಬೆಳೆಗಳ ನಷ್ಟ ಮತ್ತು ಜನಸಾಮಾನ್ಯರ ಆರೋಗ್ಯದ ಸಮಸ್ಯೆಗಳನ್ನು ಗಮನಿಸಿ, ಮಂಡ್ಯ ವಿ.ಸಿ. ಫಾರಂನ ಕೃಷಿ ವಿಜ್ಞಾನಿಗಳು ಮತ್ತು ವಿದ್ಯಾರ್ಥಿಗಳು ಹಮ್ಮಿಕೊಂಡ ವಿಚಾರ ಸಂಕಿರಣದಲ್ಲಿ ಅತಿ ಹೆಚ್ಚು ಲವಣಾಂಶಗಳ ಲಭ್ಯತೆ ಇರುವ, ಹೆಚ್ಚು ತಾಪಮಾನ ಸಹಿಸಿಕೊಳ್ಳಬಲ್ಲ ಹಾಗೂ ಕಡಿಮೆ ನೀರು ಬಳಕೆ ಮಾಡಬಲ್ಲ ವಂಶವಾಹಿ ಧಾತುಗಳನ್ನು ಕಂಡುಹಿಡಿದು, ಅವುಗಳನ್ನು ಜನಪ್ರಿಯ ಮತ್ತು ಲಾಭದಾಯಕ ತಳಿಗಳೊಂದಿಗೆ ಸಂಕೀರ್ಣ ಮಾಡುವ ವೈಜ್ಞಾನಿಕ ವಿಷಯ ಹೊಳೆದಿದೆ. ಕೊನೆಗೆ ಅದು ಸಂಶೋಧನೆಗೆ ದಾರಿ ಮಾಡಿಕೊಟ್ಟಿದೆ.

 

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

9 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

9 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

9 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

9 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

10 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

10 hours ago