ಯುವ ಡಾಟ್ ಕಾಂ

ಟೆಲಿಗ್ರಾಮ್ ಬಳಕೆದಾರರಿಗೆ ಹೊಸ ಫೀಚರ್

ವಿಶ್ವದಾದ್ಯಂತ ಮಿಲಿಯನ್ ಗಟ್ಟಲೇ ಬಳಕೆದಾರರನ್ನು ಹೊಂದಿರುವ ಟೆಲಿಗ್ರಾಮ್ ಬಳಕೆದಾರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಹೊಸ ಫೀಚರ್ ನೀಡಲು ಮುಂದಾಗಿದೆ.

ಇಂದಿನ ದಿನಮಾನಗಳಲ್ಲಿ ಸಾಮಾಜಿಕ ಜಾಲತಾಣಗಳನ್ನು ಬಿಟ್ಟಿರುವುದು ಅಸಾಧ್ಯವಾಗಿದೆ. ಅದರಲ್ಲೂ ಯುವ ಸಮುದಾಯ ಸಾಮಾಜಿಕ ಜಾಲತಾಣವಿಲ್ಲದೆ ಯಾವ ಚಟುವಟಿಕೆಗಳನ್ನೂ ನಿರ್ವಹಣೆ ಮಾಡುವುದು ಅಸಾಧ್ಯ ಎನ್ನುವ ಮಟ್ಟಿಗೆ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿಯೇ ಟೆಲಿಗ್ರಾಮ್ ‘ಸ್ಟೋರಿಸ್’ ಎಂಬ ಫೀಚರ್ ಅನ್ನು ಪರಿಚಯಿಸಲು ಮುಂದಾಗಿದೆ.

ಸ್ಟೋರಿಸ್‌ಗಳು ನಮ್ಮ ಜೀವನಕ್ಕೆ ಹತ್ತಿರವಾಗಿದ್ದು, ನಮ್ಮ ಜೀವನದ ಸಂಗತಿಗಳ ಬಗ್ಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಇವುಗಳ ಮೂಲಕ ಸ್ನೇಹಿತರು ಸೇರಿದಂತೆ ಸಂಬಂಧಿಕರು ಕೂಡ ತಿಳಿದುಕೊಳ್ಳಬಹುದಾಗಿದೆ. ಟೆಲಿಗ್ರಾಮ್ ಸಿಇಒ ಪಾವೆಲ್ ಡುರೊವ್, ಟೆಲಿಗ್ರಾಮ್ ಶೀಘ್ರದಲ್ಲೇ ಸ್ಟೋರಿಸ್ ಫೀಚರ್ ಅನ್ನು ಒಳಗೊಂಡಿರುತ್ತದೆ ಎಂದು ಹೇಳಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ‘ಸ್ಟೋರಿಸ್’ಗಳು 24 ಗಂಟೆಗಳ ನಂತರ ಸ್ವಯಂಚಾಲಿತವಾಗಿಮುಕ್ತಾಯಗೊಳ್ಳುತ್ತವೆ, ಆದರೆ ಟೆಲಿಗ್ರಾಮ್‌ನಲ್ಲಿ ಬಳಕೆದಾರರು ತಮ್ಮ ಸ್ಟೋರಿಸ್ ಆ್ಯಪ್ ಡೌನ್ ಲೋಡ್ ಮಾಡಿದ ನಂತರ ಯಾವಾಗ ಮುಕ್ತಾಯವಾಗಬೇಕು ಎಂಬುದನ್ನು ನಿರ್ಧರಿಸಲು ನಾಲ್ಕು ಆಯ್ಕೆಗಳನ್ನು ಹೊಂದಿರುತ್ತಾರೆ. ಈ ಸ್ಟೋರಿಸ್‌ಗಳು 6, 12, 24, ಹಾಗೂ 48 ಗಂಟೆಗಳ ಮುಕ್ತಾಯ ಅವಧಿಯನ್ನು ಒಳಗೊಂಡಿರುತ್ತವೆ. ಜತೆಗೆ ಬಳಕೆದಾರರು ಟೆಲಿಗ್ರಾಮ್‌ನಲ್ಲಿ ತಮ್ಮ ಪ್ರೊಫೈಲ್ ಪುಟದಲ್ಲಿ ಸ್ಟೋರಿಸ್‌ಗಳನ್ನು ಶಾಶ್ವತವಾಗಿ ಪ್ರದರ್ಶಿಸ ಬಹುದಾಗಿದೆ.

lokesh

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

11 hours ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

12 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

13 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

13 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

13 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

13 hours ago