ಯುವ ಡಾಟ್ ಕಾಂ

ಟೆಲಿಗ್ರಾಮ್ ಬಳಕೆದಾರರಿಗೆ ಹೊಸ ಫೀಚರ್

ವಿಶ್ವದಾದ್ಯಂತ ಮಿಲಿಯನ್ ಗಟ್ಟಲೇ ಬಳಕೆದಾರರನ್ನು ಹೊಂದಿರುವ ಟೆಲಿಗ್ರಾಮ್ ಬಳಕೆದಾರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಹೊಸ ಫೀಚರ್ ನೀಡಲು ಮುಂದಾಗಿದೆ.

ಇಂದಿನ ದಿನಮಾನಗಳಲ್ಲಿ ಸಾಮಾಜಿಕ ಜಾಲತಾಣಗಳನ್ನು ಬಿಟ್ಟಿರುವುದು ಅಸಾಧ್ಯವಾಗಿದೆ. ಅದರಲ್ಲೂ ಯುವ ಸಮುದಾಯ ಸಾಮಾಜಿಕ ಜಾಲತಾಣವಿಲ್ಲದೆ ಯಾವ ಚಟುವಟಿಕೆಗಳನ್ನೂ ನಿರ್ವಹಣೆ ಮಾಡುವುದು ಅಸಾಧ್ಯ ಎನ್ನುವ ಮಟ್ಟಿಗೆ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿಯೇ ಟೆಲಿಗ್ರಾಮ್ ‘ಸ್ಟೋರಿಸ್’ ಎಂಬ ಫೀಚರ್ ಅನ್ನು ಪರಿಚಯಿಸಲು ಮುಂದಾಗಿದೆ.

ಸ್ಟೋರಿಸ್‌ಗಳು ನಮ್ಮ ಜೀವನಕ್ಕೆ ಹತ್ತಿರವಾಗಿದ್ದು, ನಮ್ಮ ಜೀವನದ ಸಂಗತಿಗಳ ಬಗ್ಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಇವುಗಳ ಮೂಲಕ ಸ್ನೇಹಿತರು ಸೇರಿದಂತೆ ಸಂಬಂಧಿಕರು ಕೂಡ ತಿಳಿದುಕೊಳ್ಳಬಹುದಾಗಿದೆ. ಟೆಲಿಗ್ರಾಮ್ ಸಿಇಒ ಪಾವೆಲ್ ಡುರೊವ್, ಟೆಲಿಗ್ರಾಮ್ ಶೀಘ್ರದಲ್ಲೇ ಸ್ಟೋರಿಸ್ ಫೀಚರ್ ಅನ್ನು ಒಳಗೊಂಡಿರುತ್ತದೆ ಎಂದು ಹೇಳಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ‘ಸ್ಟೋರಿಸ್’ಗಳು 24 ಗಂಟೆಗಳ ನಂತರ ಸ್ವಯಂಚಾಲಿತವಾಗಿಮುಕ್ತಾಯಗೊಳ್ಳುತ್ತವೆ, ಆದರೆ ಟೆಲಿಗ್ರಾಮ್‌ನಲ್ಲಿ ಬಳಕೆದಾರರು ತಮ್ಮ ಸ್ಟೋರಿಸ್ ಆ್ಯಪ್ ಡೌನ್ ಲೋಡ್ ಮಾಡಿದ ನಂತರ ಯಾವಾಗ ಮುಕ್ತಾಯವಾಗಬೇಕು ಎಂಬುದನ್ನು ನಿರ್ಧರಿಸಲು ನಾಲ್ಕು ಆಯ್ಕೆಗಳನ್ನು ಹೊಂದಿರುತ್ತಾರೆ. ಈ ಸ್ಟೋರಿಸ್‌ಗಳು 6, 12, 24, ಹಾಗೂ 48 ಗಂಟೆಗಳ ಮುಕ್ತಾಯ ಅವಧಿಯನ್ನು ಒಳಗೊಂಡಿರುತ್ತವೆ. ಜತೆಗೆ ಬಳಕೆದಾರರು ಟೆಲಿಗ್ರಾಮ್‌ನಲ್ಲಿ ತಮ್ಮ ಪ್ರೊಫೈಲ್ ಪುಟದಲ್ಲಿ ಸ್ಟೋರಿಸ್‌ಗಳನ್ನು ಶಾಶ್ವತವಾಗಿ ಪ್ರದರ್ಶಿಸ ಬಹುದಾಗಿದೆ.

lokesh

Recent Posts

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

5 hours ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

5 hours ago

KSOU | ಯುಜಿಸಿ ನೆಟ್, ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…

6 hours ago

ನಿಂತಿದ್ದ ವಿಮಾನಕ್ಕೆ ತಗುಲಿದ ಸ್ಪೈಸ್‌ಜೆಟ್‌ ವಿಮಾನ ; ತಪ್ಪಿದ ಭಾರಿ ಅನಾಹುತ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…

6 hours ago

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

7 hours ago

ಈ ಬಾರಿ ಕರ್ನಾಟಕಕ್ಕೆ ಮುಂಗಾರು ಕೊರತೆ ; ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…

8 hours ago