ಯುವ ಡಾಟ್ ಕಾಂ

ಟೆಲಿಗ್ರಾಮ್ ಬಳಕೆದಾರರಿಗೆ ಹೊಸ ಫೀಚರ್

ವಿಶ್ವದಾದ್ಯಂತ ಮಿಲಿಯನ್ ಗಟ್ಟಲೇ ಬಳಕೆದಾರರನ್ನು ಹೊಂದಿರುವ ಟೆಲಿಗ್ರಾಮ್ ಬಳಕೆದಾರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಹೊಸ ಫೀಚರ್ ನೀಡಲು ಮುಂದಾಗಿದೆ.

ಇಂದಿನ ದಿನಮಾನಗಳಲ್ಲಿ ಸಾಮಾಜಿಕ ಜಾಲತಾಣಗಳನ್ನು ಬಿಟ್ಟಿರುವುದು ಅಸಾಧ್ಯವಾಗಿದೆ. ಅದರಲ್ಲೂ ಯುವ ಸಮುದಾಯ ಸಾಮಾಜಿಕ ಜಾಲತಾಣವಿಲ್ಲದೆ ಯಾವ ಚಟುವಟಿಕೆಗಳನ್ನೂ ನಿರ್ವಹಣೆ ಮಾಡುವುದು ಅಸಾಧ್ಯ ಎನ್ನುವ ಮಟ್ಟಿಗೆ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿಯೇ ಟೆಲಿಗ್ರಾಮ್ ‘ಸ್ಟೋರಿಸ್’ ಎಂಬ ಫೀಚರ್ ಅನ್ನು ಪರಿಚಯಿಸಲು ಮುಂದಾಗಿದೆ.

ಸ್ಟೋರಿಸ್‌ಗಳು ನಮ್ಮ ಜೀವನಕ್ಕೆ ಹತ್ತಿರವಾಗಿದ್ದು, ನಮ್ಮ ಜೀವನದ ಸಂಗತಿಗಳ ಬಗ್ಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಇವುಗಳ ಮೂಲಕ ಸ್ನೇಹಿತರು ಸೇರಿದಂತೆ ಸಂಬಂಧಿಕರು ಕೂಡ ತಿಳಿದುಕೊಳ್ಳಬಹುದಾಗಿದೆ. ಟೆಲಿಗ್ರಾಮ್ ಸಿಇಒ ಪಾವೆಲ್ ಡುರೊವ್, ಟೆಲಿಗ್ರಾಮ್ ಶೀಘ್ರದಲ್ಲೇ ಸ್ಟೋರಿಸ್ ಫೀಚರ್ ಅನ್ನು ಒಳಗೊಂಡಿರುತ್ತದೆ ಎಂದು ಹೇಳಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ‘ಸ್ಟೋರಿಸ್’ಗಳು 24 ಗಂಟೆಗಳ ನಂತರ ಸ್ವಯಂಚಾಲಿತವಾಗಿಮುಕ್ತಾಯಗೊಳ್ಳುತ್ತವೆ, ಆದರೆ ಟೆಲಿಗ್ರಾಮ್‌ನಲ್ಲಿ ಬಳಕೆದಾರರು ತಮ್ಮ ಸ್ಟೋರಿಸ್ ಆ್ಯಪ್ ಡೌನ್ ಲೋಡ್ ಮಾಡಿದ ನಂತರ ಯಾವಾಗ ಮುಕ್ತಾಯವಾಗಬೇಕು ಎಂಬುದನ್ನು ನಿರ್ಧರಿಸಲು ನಾಲ್ಕು ಆಯ್ಕೆಗಳನ್ನು ಹೊಂದಿರುತ್ತಾರೆ. ಈ ಸ್ಟೋರಿಸ್‌ಗಳು 6, 12, 24, ಹಾಗೂ 48 ಗಂಟೆಗಳ ಮುಕ್ತಾಯ ಅವಧಿಯನ್ನು ಒಳಗೊಂಡಿರುತ್ತವೆ. ಜತೆಗೆ ಬಳಕೆದಾರರು ಟೆಲಿಗ್ರಾಮ್‌ನಲ್ಲಿ ತಮ್ಮ ಪ್ರೊಫೈಲ್ ಪುಟದಲ್ಲಿ ಸ್ಟೋರಿಸ್‌ಗಳನ್ನು ಶಾಶ್ವತವಾಗಿ ಪ್ರದರ್ಶಿಸ ಬಹುದಾಗಿದೆ.

lokesh

Recent Posts

ಚಾಮುಂಡಿಬೆಟ್ಟಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಭೇಟಿ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌ ಭೇಟಿ ನೀಡಿ ತಾಯಿಯ ದರ್ಶನ…

11 mins ago

ಕೊಡಗು: ಚಟ್ಟಳ್ಳಿ ಕಾಫಿ ತೋಟದಲ್ಲಿ ಹುಲಿ ಸಾವು

ಕೊಡಗು: ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಕೆಚ್ಚೆಟ್ಟರ ಎಸ್ಟೇಟ್‌ ಕಾಫಿ ತೋಟದಲ್ಲಿ ಹುಲಿಯೊಂದು ಸಾವನ್ನಪ್ಪಿದೆ. ಕಳೆದ ಕೆಲ ದಿನಗಳ ಹಿಂದೆ…

17 mins ago

ನಂಜನಗೂಡಿನಲ್ಲಿ ಮುಂದುವರಿದ ಕಳ್ಳರ ಹಾವಳಿ: ಶಿಕ್ಷಕ ದಂಪತಿ ಮನೆಯಲ್ಲಿ ಕಳ್ಳತನ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ಸೂರ್ಯೋದಯ ನಗರ ಬಡಾವಣೆಯಲ್ಲಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಮುಸುಕುಧಾರಿ…

22 mins ago

ಓದುಗರ ಪತ್ರ:  ನೀರಿನ ಪೈಪ್ ದುರಸ್ತಿ ಮಾಡಿ

ಮೈಸೂರಿನ ಲಷ್ಕರ್ ಮೊಹಲ್ಲಾದ ವೀರನಗೆರೆ ಮಾರಿಗುಡಿ ಸ್ಥಳದಲ್ಲಿ ಕುಡಿಯುವ ನೀರಿನ ಪೈಪು ಒಡೆದಿದ್ದು, ದುರಸ್ತಿ ಮಾಡಿದರೂ ಕಳಪೆ ಕಾಮಗಾರಿಯಿಂದಾಗಿ ಮತ್ತೆ…

31 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಕ್ರಮ ಅಗತ್ಯ

ಕಳೆದ ೧೫ ವರ್ಷಗಳಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ೧೭ ಲಕ್ಷ ದಷ್ಟು(ಶೇ.೩೦) ಕಡಿಮೆಯಾಗಿರುವುದರ ಬಗ್ಗೆ ವಿಧಾನ…

33 mins ago

ಓದುಗರ ಪತ್ರ:  ಮತದಾರರ ಪಟ್ಟಿ ಮ್ಯಾಪಿಂಗ್; ಅಧಿಕಾರಿಗಳ ನಿರ್ಲಕ್ಷ್ಯ ಸರಿಯಲ್ಲ

ಡಿ.13, 14 ರಂದು ಮೈಸೂರಿನಲ್ಲಿ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವುದಾಗಿ ಪತ್ರಿಕೆಗಳಲ್ಲಿ ವರದಿಯಾಗಿತ್ತು. ಮತದಾರರ ಪಟ್ಟಿಯ ಪರಿಶೀಲನೆಗಾಗಿ…

38 mins ago