ಯುವ ಡಾಟ್ ಕಾಂ

ಟೆಲಿಗ್ರಾಮ್ ಬಳಕೆದಾರರಿಗೆ ಹೊಸ ಫೀಚರ್

ವಿಶ್ವದಾದ್ಯಂತ ಮಿಲಿಯನ್ ಗಟ್ಟಲೇ ಬಳಕೆದಾರರನ್ನು ಹೊಂದಿರುವ ಟೆಲಿಗ್ರಾಮ್ ಬಳಕೆದಾರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಹೊಸ ಫೀಚರ್ ನೀಡಲು ಮುಂದಾಗಿದೆ.

ಇಂದಿನ ದಿನಮಾನಗಳಲ್ಲಿ ಸಾಮಾಜಿಕ ಜಾಲತಾಣಗಳನ್ನು ಬಿಟ್ಟಿರುವುದು ಅಸಾಧ್ಯವಾಗಿದೆ. ಅದರಲ್ಲೂ ಯುವ ಸಮುದಾಯ ಸಾಮಾಜಿಕ ಜಾಲತಾಣವಿಲ್ಲದೆ ಯಾವ ಚಟುವಟಿಕೆಗಳನ್ನೂ ನಿರ್ವಹಣೆ ಮಾಡುವುದು ಅಸಾಧ್ಯ ಎನ್ನುವ ಮಟ್ಟಿಗೆ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿಯೇ ಟೆಲಿಗ್ರಾಮ್ ‘ಸ್ಟೋರಿಸ್’ ಎಂಬ ಫೀಚರ್ ಅನ್ನು ಪರಿಚಯಿಸಲು ಮುಂದಾಗಿದೆ.

ಸ್ಟೋರಿಸ್‌ಗಳು ನಮ್ಮ ಜೀವನಕ್ಕೆ ಹತ್ತಿರವಾಗಿದ್ದು, ನಮ್ಮ ಜೀವನದ ಸಂಗತಿಗಳ ಬಗ್ಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಇವುಗಳ ಮೂಲಕ ಸ್ನೇಹಿತರು ಸೇರಿದಂತೆ ಸಂಬಂಧಿಕರು ಕೂಡ ತಿಳಿದುಕೊಳ್ಳಬಹುದಾಗಿದೆ. ಟೆಲಿಗ್ರಾಮ್ ಸಿಇಒ ಪಾವೆಲ್ ಡುರೊವ್, ಟೆಲಿಗ್ರಾಮ್ ಶೀಘ್ರದಲ್ಲೇ ಸ್ಟೋರಿಸ್ ಫೀಚರ್ ಅನ್ನು ಒಳಗೊಂಡಿರುತ್ತದೆ ಎಂದು ಹೇಳಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ‘ಸ್ಟೋರಿಸ್’ಗಳು 24 ಗಂಟೆಗಳ ನಂತರ ಸ್ವಯಂಚಾಲಿತವಾಗಿಮುಕ್ತಾಯಗೊಳ್ಳುತ್ತವೆ, ಆದರೆ ಟೆಲಿಗ್ರಾಮ್‌ನಲ್ಲಿ ಬಳಕೆದಾರರು ತಮ್ಮ ಸ್ಟೋರಿಸ್ ಆ್ಯಪ್ ಡೌನ್ ಲೋಡ್ ಮಾಡಿದ ನಂತರ ಯಾವಾಗ ಮುಕ್ತಾಯವಾಗಬೇಕು ಎಂಬುದನ್ನು ನಿರ್ಧರಿಸಲು ನಾಲ್ಕು ಆಯ್ಕೆಗಳನ್ನು ಹೊಂದಿರುತ್ತಾರೆ. ಈ ಸ್ಟೋರಿಸ್‌ಗಳು 6, 12, 24, ಹಾಗೂ 48 ಗಂಟೆಗಳ ಮುಕ್ತಾಯ ಅವಧಿಯನ್ನು ಒಳಗೊಂಡಿರುತ್ತವೆ. ಜತೆಗೆ ಬಳಕೆದಾರರು ಟೆಲಿಗ್ರಾಮ್‌ನಲ್ಲಿ ತಮ್ಮ ಪ್ರೊಫೈಲ್ ಪುಟದಲ್ಲಿ ಸ್ಟೋರಿಸ್‌ಗಳನ್ನು ಶಾಶ್ವತವಾಗಿ ಪ್ರದರ್ಶಿಸ ಬಹುದಾಗಿದೆ.

lokesh

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

11 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago