ಯುವ ಡಾಟ್ ಕಾಂ

ಕಾಡಿನೊಳಗೆ ಮೂಡಿದ ವಿಶ್ವ ಮಟ್ಟದ ಕ್ರೀಡಾ ಸಾಧಕ!

  • ಜಿ.ತಂಗಂ ಗೋಪಿನಾಥಂ

ಕುಖ್ಯಾತ ದಂತಚೋರ, ಕಾಡುಗಳ್ಳ, ವೀರಪ್ಪನ್ ಅಟ್ಟಹಾಸ ಮೆರೆದಿದ್ದ ಹಳ್ಳಿ ಈಗ ವಿಶ್ವ ಕ್ರೀಡಾ ವಲಯದಲ್ಲಿ ಭಾರತದ ಹೆಮ್ಮೆಯ ಕುರುಹಾಗಿ ಗಮನ ಸೆಳೆದಿದೆ. ಅದು ವೀರಪ್ಪನ್ ಹುಟ್ಟೂರು ಗೋಪಿನಾಥಂ, ಈ ಗ್ರಾಮದ ಯುವಕರೊಬ್ಬರು ಒಂದು ವರ್ಷದ ಹಿಂದೆ ಅಪ್ಪಟ ದೇಸಿ ಆಟವಾದ ದೊಣ್ಣೆವರಸೆ (ಸಿಲಂಬಮ್)ಯ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಸ್ವರ್ಣ ಪದಕ ಗಳಿಸಿ ಸಾಧನೆ ಮಾಡಿ, ಕಾಡೊಳಗಿನ ಊರಿನತ್ತ ಪ್ರಪಂಚವೇ ತಲೆಯೆತ್ತಿ ನೋಡುವಂತೆ ಮಾಡಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಗಡಿಯಂಚಿನ ಗೋಪಿನಾಥಂ ಗ್ರಾಮದ ಮುನಿಸ್ವಾಮಿ ಮತ್ತು ತಂಗಮಣಿ ದಂಪತಿಯ ಪುತ್ರ 27 ವರ್ಷದ ಎಂ.ಮುರುಗನ್ ಅವರೇ ಈ ಸಾಧನೆ ಮಾಡಿರುವ ಕ್ರೀಡಾಪಟು.

ನೇಪಾಳದ ಪೊಖಾರದಲ್ಲಿ ಯೂತ್ ಆ್ಯಂಡ್ ಸ್ಪೋರ್ಟ್ಸ್ ಡೆವಲಪ್‌ಮೆಂಟ್ ಆರ್ಗನೈಸೇಷನ್ ಆಫ್ ನೇಪಾಳ್ ವತಿಯಿಂದ 2022, ಜ.16 ರಿಂದ 20ರವರೆಗೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಟ್ಟದ ದೊಣ್ಣೆ ವರಸೆ ಸ್ಪರ್ಧೆಯಲ್ಲಿ ಎಂ. ಮುರುಗನ್ ಜಯಗಳಿಸಿ ಚಿನ್ನದ ಪದಕ ಪಡೆದು ದೇಶಕ್ಕೆ ಕೀರ್ತಿ ತಂದಿದ್ದಾರೆ.

ಈ ಕ್ರೀಡಾಕೂಟದಲ್ಲಿ ತಮಿಳುನಾಡಿನ ಅರಸನ್ ಅಕಾಡೆಮಿಯ 11 ಮತ್ತು ಕರ್ನಾಟಕದ ಗೋಪಿನಾಥಂನ ಎಂ.ಮುರುಗನ್ ಸೇರಿದಂತೆ 12 ಕ್ರೀಡಾಪಟುಗಳು ಭಾಗವಹಿಸಿದ್ದರು. ಈ ತಂಡಕ್ಕೆ 11 ಚಿನ್ನ ಮತ್ತು 1 ಬೆಳ್ಳಿ ಪದಕ ಲಭಿಸಿದೆ. ಅಂತಿಮವಾಗಿ ಸಮಗ್ರ ಸ್ಪರ್ಧೆಯಲ್ಲಿ ಮುರುಗನ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ದೊಣ್ಣೆವರಸೆ ಕ್ರೀಡೆಯಲ್ಲಿ 100ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು.

ಜಿಲ್ಲಾಧಿಕಾರಿಯಿಂದ ಸನ್ಮಾನ : 2021ರ ನ.27 ರಿಂದ 29 ರವರೆಗೆ ಗೋವಾದಲ್ಲಿ ನಡೆದ ರಾಷ್ಟ್ರ ಮಟ್ಟದ ಸಿಲಂಬಮ್ ಕ್ರೀಡೆಯಲ್ಲೂ ಮುರುಗನ್ ಜಯಗಳಿಸಿ ಚಿನ್ನದ ಪದಕ ಗಳಿಸಿದ್ದರು. ಅದೇ ವರ್ಷ ಡಿಸೆಂಬರ್‌ನಲ್ಲಿ ಗೋಪಿನಾಥಂನಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಅಂದಿನ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಮುರುಗನ್‌ರನ್ನು ಸನ್ಮಾನಿಸಿದರು.

ಅಳಿವಿನಂಚಿನಲ್ಲಿದೆ ಸಮರ ಕಲೆ : ದೊಣ್ಣೆವರಸೆ ಚೋಳ ಮತ್ತು ಕದಂಬರ ಕಾಲದ ಸಾಂಪ್ರದಾಯಿಕ ಸಮರ ಕಲೆಯಾಗಿದ್ದು, ಇತ್ತೀಚಿನ ದಿನಗಳಲ್ಲಿ ಮರೆಯಾಗುತ್ತಾ ಬರುತ್ತಿದೆ.ಇದಕ್ಕೆ ಬಳಸುವ ದೊಣ್ಣೆಯ ತುದಿಯಲ್ಲಿ ಮೊನಚಾದ ಕಬ್ಬಿಣ ಅಳವಡಿಸಲಿದ್ದು, ಈಟಿ ಮಾದರಿಯಲ್ಲಿ ಇರಲಿದೆ. ಹಿಂದೆ ರಾಜ ಮಹಾರಾಜರು ಯುದ್ಧಕಾಲದಲ್ಲಿ ಪ್ರಯೋಗಿಸುತ್ತಿದ್ದ ಬಹು ಜನಪ್ರಿಯವೆನಿಸಿದ್ದ, ಈ ದೊಣ್ಣೆವರಸೆ ಕಾಲ ಕಳೆದಂತೆ ಸ್ವಯಂ ರಕ್ಷಣೆಗೆ ಬಳಕೆಯಾಗುತ್ತಿತ್ತು. ಈಗ ಕಣ್ಮರೆಯಾಗುತ್ತಿದೆ. ತಮಿಳುನಾಡು ಭಾಗದಲ್ಲಿ ಇತ್ತೀಚೆಗೆ ಈ ಕ್ರೀಡೆಗೆ ಹೆಚ್ಚು ಪ್ರೋತ್ಸಾಹ ನೀಡಲಾಗುತ್ತಿದೆ. ದೊಣ್ಣೆವರಸೆಯ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಲು ಕುಸ್ತಿ ರೀತಿ ವಿವಿಧ ರೀತಿಯ ಪಟ್ಟುಗಳನ್ನು ದೊಣ್ಣೆ ತಿರುಗಿಸುತ್ತಾ ಪ್ರದರ್ಶಿಸಬೇಕಿದೆ. ಸ್ಥಳೀಯ ಮಟ್ಟದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಎದುರಾಳಿಗಳಿರಲಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೇವಲ ಸ್ಪರ್ಧಾಳುವಿನಿಂದ ದೊಣ್ಣೆವರಸೆಯ ವೈವಿಧ್ಯಮಯ ಪಟ್ಟುಗಳ ಪ್ರದರ್ಶನಕ್ಕೆ ಮಾತ್ರ ಅವಕಾಶ ಇರುತ್ತದೆ.

ಬಿ.ಕಾಂ. ಪದವೀಧರ : ಎಂ.ಮುರುಗನ್ ಪ್ರೌಢಶಿಕ್ಷಣದವರೆಗೆ ಗೋಪಿನಾಥಂ ಸರ್ಕಾರಿ ಶಾಲೆಯಲ್ಲಿ ಕಲಿತಿದ್ದು, ಪಿಯು ಶಿಕ್ಷಣವನ್ನು ಕೊಳ್ಳೇಗಾಲದ ನಿಸರ್ಗ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ, ಬಿ.ಕಾಂ. ಪದವಿಯನ್ನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪಡೆದರು. ನಂತರ 2 ವರ್ಷಗಳು ಸ್ವಗ್ರಾಮದಲ್ಲಿ ಕೃಷಿಯಲ್ಲಿ ತೊಡಗಿಸಿಕೊಂಡು ಸಾವಯವ ಬೇಸಾಯವನ್ನು 2017ರವರೆಗೆ ಮಾಡಿದ್ದರು. 2018ರಿಂದ ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಮಾನವ ಸಂಪನ್ಮೂಲ (ಎಚ್.ಆರ್.) ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

7 ವರ್ಷಗಳಿಂದ ಅಭ್ಯಾಸ : ದೊಣ್ಣೆವರಸೆ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ಮುರುಗನ್ ಅವರು ಬಿಡುವಿನ ವೇಳೆ ಮತ್ತು ರಜಾ ದಿನಗಳಲ್ಲಿ ಅಭ್ಯಾಸ ಮಾಡುತ್ತಾರೆ. ಬೆಂಗಳೂರಿನ ಅರಸನ್ ಅಕಾಡೆಮಿಯಲ್ಲಿ 7 ವರ್ಷಗಳಿಂದ ನುರಿತ ತರಬೇತುದಾರರಿಂದ ದೊಣ್ಣೆ ವರಸೆಯನ್ನು ಕಲಿಯುತ್ತಿದ್ದಾರೆ.

lokesh

Recent Posts

ಪತ್ನಿ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…

2 hours ago

ಓದುಗರ ಪತ್ರ: ಜಾಗೃತಿ

ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…

2 hours ago

ಓದುಗರ ಪತ್ರ: ಅಶ್ಲೀಲ ಹಾಡು ನಿಷೇಧ ಸ್ವಾಗತಾರ್ಹ

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…

2 hours ago

ಓದುಗರ ಪತ್ರ: ರೈಲು ಟಿಕೆಟ್ ಕಾಯ್ದಿರಿಸುವ ಸ್ಥಳದಲ್ಲಿ ಕೆಲಸ ಮಾಡದ ಎಸಿ

ಮೈಸೂರು ರೈಲ್ವೆ ನಿಲ್ದಾಣದ ಟಿಕೆಟ್ ಕಾಯ್ದಿರಿಸುವ ವಿಭಾಗದಲ್ಲಿ ಫ್ಯಾನ್ ಹಾಗೂ ಎಸಿ ಯಾವುದೂ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ಟಿಕೆಟ್ ಮುಂಗಡವಾಗಿ…

2 hours ago

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ರಕ್ಷಣೆ ನೀಡಿ

ಜೀವನ ನಿರ್ವಹಣೆಗಾಗಿ ಪ್ರತಿಯೊಬ್ಬರೂ ಉದ್ಯೋಗ ಮಾಡುವುದು ಅನಿವಾರ್ಯವಾಗಿದೆ. ಅಸಂಘಟಿತ ಕಾರ್ಮಿ ಕರು ಅದರಲ್ಲೂ ಮುಖ್ಯವಾಗಿ ಕಟ್ಟಡ ನಿರ್ಮಾಣ, ಎಲೆಕ್ಟ್ರಿಕ್ ಕೆಲಸ,…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರಮಂದಿರಗಳನ್ನು ಉಳಿಸಲು ಚಿತ್ರೋದ್ಯಮ ಹುಡುಕುತ್ತಿದೆ ದಾರಿ

ಚಿತ್ರಮಂದಿರಗಳಿಂದ ಪ್ರೇಕ್ಷಕರನ್ನು ಅಟ್ಟುತ್ತಿರುವ ಪ್ರದರ್ಶಕರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ತಮಿಳುನಾಡು ಸರ್ಕಾರಕ್ಕೆ ಕಳೆದ ವರ್ಷ ತಮಿಳುನಾಡಿನ ಹೈಕೋರ್ಟ್ ಆದೇಶ…

2 hours ago