ಯುವ ಡಾಟ್ ಕಾಂ

ಭಾರತೀಯ ವಾಯುಸೇನೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ವಾಯುಸೇನೆ (ಐಎಎ-)ಯಲ್ಲಿ ಗ್ರೂಪ್ ‘ಸಿ’ ೧೫೩ ನಾಗರಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಮೇ ೧೭ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜೂನ್೧೫ರವರೆಗೂ ಅರ್ಜಿ ಸಲ್ಲಿಸಬಹುದು. ಎಲ್‌ಡಿಸಿ, ಟೈಪಿಸ್ಟ್, ಮೆಕ್ಯಾನಿಕ್‌ಗಳಂತಹ ಹಲವು ಹುದ್ದೆಗಳಿದ್ದು, ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆಯ ವಿವರಗಳನ್ನು ಭಾರತೀಯ ವಾಯು ಸೇನೆಯ ಅಧಿಕೃತ ವೆಬ್‌ಸೈಟ್… indian airforce.nic.in ನಲ್ಲಿ ಪಡೆಯಬಹುದು. ಹತ್ತನೇ ತರಗತಿ, ಪಿಯುಸಿ ಉತ್ತೀರ್ಣರಾಗಿರುವ ಆಸಕ್ತರು ಆನ್‌ಲೈನ್ ಮತ್ತು ಆ-ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ.

ಕಿರಿಯ ದರ್ಜೆ ಗುಮಾಸ್ತ (ಎಲ್‌ಡಿಸಿ), ಸ್ಟೋರ್ ಕೀಪರ್, ಹಿಂದಿ ಟೈಪಿಸ್ಟ್, ಮೆಕ್ಯಾನಿಕಲ್ ಟ್ರಾನ್ಸ್‌ಪೋರ್ಟ್, ಚಾಲಕರು, ಅಡುಗೆಯವರು, ಬಡಗಿ, ಪೇಂಟರ್, ಹೌಸ್ ಕೀಪಿಂಗ್ ಮತ್ತಿತರೆ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು ೧೫೩ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಾಮಾನ್ಯ ವರ್ಗ, ಇತರೆ ಹಿಂದುಳಿದ ವರ್ಗಗಳು ಹಾಗೂ ಆರ್ಥಿಕವಾಗಿ ದುರ್ಬಲ ವರ್ಗ(ಇಡಬ್ಲ್ಯುಎಸ್)ಗಳವರಿಗೆ ಹುದ್ದೆಗಳನ್ನು ಕಾಯ್ದಿರಿಸಲಾಗಿದೆ. ಅರ್ಜಿದಾರರ ವಯೋಮಿತಿ ೧೮ರಿಂದ ೨೫ರೊಳಗಿರಬೇಕು. ಮೀಸಲು ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಅರ್ಜಿ ಕರೆಯಲಾಗಿರುವ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆ, ವೃತ್ತಿ ಕೌಶಲ ಪರೀಕ್ಷೆಗಳ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವವರು ವಾಯುಸೇನೆಯ ಅಧಿಕೃತ ವೆಬ್‌ಸೈಟ್ನಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಸಮೀಪದ ವಾಯುಸೇನೆ ಕಚೇರಿಗೆ ಅಂಚೆ ಮೂಲಕ ಸಲ್ಲಿಸಬಹುದು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

5 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

5 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

5 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

5 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

5 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

5 hours ago