ಯುವ ಡಾಟ್ ಕಾಂ

ಭಾರತೀಯ ವಾಯುಸೇನೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ವಾಯುಸೇನೆ (ಐಎಎ-)ಯಲ್ಲಿ ಗ್ರೂಪ್ ‘ಸಿ’ ೧೫೩ ನಾಗರಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಮೇ ೧೭ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜೂನ್೧೫ರವರೆಗೂ ಅರ್ಜಿ ಸಲ್ಲಿಸಬಹುದು. ಎಲ್‌ಡಿಸಿ, ಟೈಪಿಸ್ಟ್, ಮೆಕ್ಯಾನಿಕ್‌ಗಳಂತಹ ಹಲವು ಹುದ್ದೆಗಳಿದ್ದು, ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆಯ ವಿವರಗಳನ್ನು ಭಾರತೀಯ ವಾಯು ಸೇನೆಯ ಅಧಿಕೃತ ವೆಬ್‌ಸೈಟ್… indian airforce.nic.in ನಲ್ಲಿ ಪಡೆಯಬಹುದು. ಹತ್ತನೇ ತರಗತಿ, ಪಿಯುಸಿ ಉತ್ತೀರ್ಣರಾಗಿರುವ ಆಸಕ್ತರು ಆನ್‌ಲೈನ್ ಮತ್ತು ಆ-ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ.

ಕಿರಿಯ ದರ್ಜೆ ಗುಮಾಸ್ತ (ಎಲ್‌ಡಿಸಿ), ಸ್ಟೋರ್ ಕೀಪರ್, ಹಿಂದಿ ಟೈಪಿಸ್ಟ್, ಮೆಕ್ಯಾನಿಕಲ್ ಟ್ರಾನ್ಸ್‌ಪೋರ್ಟ್, ಚಾಲಕರು, ಅಡುಗೆಯವರು, ಬಡಗಿ, ಪೇಂಟರ್, ಹೌಸ್ ಕೀಪಿಂಗ್ ಮತ್ತಿತರೆ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು ೧೫೩ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಾಮಾನ್ಯ ವರ್ಗ, ಇತರೆ ಹಿಂದುಳಿದ ವರ್ಗಗಳು ಹಾಗೂ ಆರ್ಥಿಕವಾಗಿ ದುರ್ಬಲ ವರ್ಗ(ಇಡಬ್ಲ್ಯುಎಸ್)ಗಳವರಿಗೆ ಹುದ್ದೆಗಳನ್ನು ಕಾಯ್ದಿರಿಸಲಾಗಿದೆ. ಅರ್ಜಿದಾರರ ವಯೋಮಿತಿ ೧೮ರಿಂದ ೨೫ರೊಳಗಿರಬೇಕು. ಮೀಸಲು ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಅರ್ಜಿ ಕರೆಯಲಾಗಿರುವ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆ, ವೃತ್ತಿ ಕೌಶಲ ಪರೀಕ್ಷೆಗಳ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವವರು ವಾಯುಸೇನೆಯ ಅಧಿಕೃತ ವೆಬ್‌ಸೈಟ್ನಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಸಮೀಪದ ವಾಯುಸೇನೆ ಕಚೇರಿಗೆ ಅಂಚೆ ಮೂಲಕ ಸಲ್ಲಿಸಬಹುದು.

ಆಂದೋಲನ ಡೆಸ್ಕ್

Recent Posts

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

1 hour ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

1 hour ago

ವಿಶ್ವ ಸಂಗೀತ ದಿನದಂದು ರಮ್ಮನಹಳ್ಳಿಯ ಜನಪದ ಗಾಯಕ ಅಂಕಪ್ಪನವರ ಕುರಿತು…

ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …

1 hour ago

ಕರ್ತೋಜಿಯಲ್ಲಿ ಸುಸಜ್ಜಿತ ತಡೆಗೋಡೆ ನಿರ್ಮಾಣ

ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ  ಮಡಿಕೇರಿ:…

2 hours ago

ಸಂಪುಟ ವಿಸ್ತರಣೆ: ಮೈಸೂರು ಭಾಗದ ‘ಕೈ’ಶಾಸಕರ ಕಸರತ್ತು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…

2 hours ago

‘ಪ್ರಾಮಾಣಿಕ ಸೇವೆ; ಪಾರದರ್ಶಕ ಆಡಳಿತಕ್ಕೆ ಬದ್ಧʼ

ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ  ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…

2 hours ago